ಉತ್ತರ ಕನ್ನಡ | ಸೀ ಬರ್ಡ್ ಸಂತ್ರಸ್ತರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳು ವೈದ್ಯ

Date:

ನೌಕಾನೆಲೆಗಾಗಿ ಭೂಸ್ವಾಧೀನ ಪ್ರಕರಣಗಳಲ್ಲಿ ಪತೀಕ್ಷಿಸಿದ್ದ ಹೆಚ್ಚುವರಿ ಪರಿಹಾರ ಹಣವೀಗ ಹಂತ ಹಂತವಾಗಿ ವಿತರಣೆ ಆಗುತ್ತಿದೆ. ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ನೇತೃತ್ವದಲ್ಲಿ 57 ಸಂತ್ರಸ್ತರಿಗೆ ಒಟ್ಟು ₹10,47 ಕೋಟಿಗಳಷ್ಟು ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಯಿತು.

1894ರ ಭೂಸ್ವಾಧೀನ ಕಾಯ್ದೆಯ ಸೆಕ್ಷನ್ 28(ಎ) ಅಡಿಯಲ್ಲಿ ಈ ಭೂಸ್ವಾಧೀನ ನಡೆದಿದ್ದು, ಒಟ್ಟು 443 ಪ್ರಕರಣಗಳ ಪೈಕಿ 338 ಪ್ರಕರಣಗಳಿಗೆ ಈಗಾಗಲೇ ಅಂತಿಮ ಆದೇಶ ಹೊರಡಿಸಲಾಗಿದ್ದು, ₹68,38,13,841 ರೂಪಾಯಿಗಳಷ್ಟು ಪರಿಹಾರ ಮೊತ್ತ ನಿಗದಿಯಾಗಿತ್ತು.

ಈ ಸಂಬಂಧಿತ ವರದಿಯನ್ನು ಬೆಂಗಳೂರು ಡಿಫೆನ್ಸ್ ಎಸ್ಟೇಟ್ಸ್ ಆಫೀಸರ್‌ಗೆ ಕಳುಹಿಸಲಾಗಿತ್ತು. ಇದೀಗ ಅವರಿಂದಲೇ RTGS ಮೂಲಕ ಹಣವನ್ನು ಫಲಾನುಭವಿಗಳ ಖಾತೆಗೆ ಆನ್‌ಲೈನ್ ಮೂಲಕ ವರ್ಗಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 21 at 8.57.09 PM

ಈ ಹೋರಾಟದಲ್ಲಿ ಹಲವು ಭೂದಾತರು ತಮ್ಮ ಜೀವನವನ್ನೇ ಕಳೆದುಕೊಂಡಿದ್ದು, ಕೆಲವರು ಮೃತರಾಗಿದ್ದಾರೆ. ಹಲವರು ಈಗ ವೃದ್ಧರಾಗಿ, ಅನಾರೋಗ್ಯದೊಂದಿಗೆ ಬದುಕು ಸಾಗಿಸುತ್ತಿದ್ದಾರೆ.

“ಭೂಸ್ವಾಧೀನವಾದ ಮೇಲೆ ಜನರು ನ್ಯಾಯಕ್ಕಾಗಿ ದೀರ್ಘಕಾಲ ಕಾದಿದ್ದಾರೆ. ಈಗಲಾದರೂ ಹಂತ ಹಂತವಾಗಿ ಪರಿಹಾರ ನೀಡುವ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಕ್ರಮ ಕೈಗೊಂಡಿದ್ದೇವೆ” ಎಂದು ಸಚಿವ ಮಂಕಾಳು ವೈದ್ಯ ಹೇಳಿದರು.

ಇದನ್ನೂ ಓದಿ: ಉತ್ತರ ಕನ್ನಡ | ನಗರಸಭೆ ಮಾಜಿ ಸದಸ್ಯನ ಕೊಲೆ ಪ್ರಕರಣ: ಐವರು ಪೊಲೀಸರ ಅಮಾನತು

ಇನ್ನೂ ₹58 ಕೋಟಿ ರೂಪಾಯಿಗಳಷ್ಟು ಪರಿಹಾರ ಹಣ ಬಾಕಿ ಉಳಿದಿದ್ದು, ಸರ್ಕಾರದಿಂದ ಸಮರ್ಪಕ ಪಾವತಿಗಾಗಿ ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಪರಿಹಾರ ವಿತರಣೆಯಿಂದ ಏಕ ಕಾಲದಲ್ಲಿ ಹೆಚ್ಚಿನ ಫಲಾನುಭವಿಗಳಿಗೆ ಧನ ಸಹಾಯ ದೊರೆತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಬಾಕಿ ಉಳಿದವರಿಗೂ ಶೀಘ್ರ ಪರಿಹಾರ ದೊರಕುವ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...