ಉತ್ತರ ಕನ್ನಡ | ಅನಾಥರನ್ನು ಕರೆತಂದು ಸಲಹುವ ಕಾರ್ಯ ಎಲ್ಲರಿಂದ ಸಾಧ್ಯವಿಲ್ಲ: ಗಣೇಶ್ ನಾಯ್ಕ

Date:

ಮಾನವ ಹಕ್ಕುಗಳ ರಕ್ಷಣಾ ಪರಿಷತ್’ನ ಪದಾಧಿಕಾರಿಗಳು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರಿನಲ್ಲಿರುವ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ರಕ್ಷಣಾ ಪರಿಷತ್’ನ ರಾಜ್ಯಾಧ್ಯಕ್ಷ ಗಣೇಶ ನಾಯ್ಕ ಮಾತನಾಡಿ, ಅನಾಥಾಶ್ರಮದ ಮುಖ್ಯಸ್ಥರಾದ ನಾಗರಾಜ ನಾಯ್ಕ ಮತ್ತು ಮಮತಾ ನಾಯ್ಕ ಅವರ ಮಾನವೀಯ ಕಾರ್ಯ ಶ್ರೇಷ್ಠವಾದದ್ದು. ಅನಾಥರನ್ನು ಕರೆತಂದು ಸಲಹುವ ಕಾರ್ಯ ಎಲ್ಲರಿಂದ ಸಾದ್ಯವಿಲ್ಲ. ಇದಕ್ಕೆ ತ್ಯಾಗ ಮತ್ತು ಪರಿಶ್ರಮ ಬೇಕು. ಈ ಮಾನವೀಯ ಕಾರ್ಯದಲ್ಲಿ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ನಾಗರಾಜ ನಾಯ್ಕರಿಗೆ ಸದಾ ಬೆಂಬಲವಾಗಿರುತ್ತದೆ. ನಮ್ಮ ಎಲ್ಲಾ ಪದಾಧಿಕಾರಿಗಳು ಮುಂದಿನ ದಿನಗಳಲ್ಲಿ ತನು, ಮನ, ಧನದಿಂದ ಆಶ್ರಯಧಾಮದ ಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದೇವೆ ಎಂದು ಭರವಸೆ ನೀಡಿದರು.

ಇದೇ ವೇಳೆ ಆಶ್ರಯಧಾಮದಲ್ಲಿರುವ ಸುಮಾರು 65ಕ್ಕೂ ಅಧಿಕ ಅನಾಥ, ಅನಾರೋಗ್ಯ ಪೀಡಿತ ವ್ಯಕ್ತಿಗಳು, ಮಕ್ಕಳು, ಅನಾಥರಂತೆ ಬೀದಿಯಲ್ಲಿ ಬಿದ್ದಿರುವ ವಯಸ್ಸಾದವರು, ಶಾಲೆಗೆ ಹೋಗುತ್ತಿರುವ ಚಿಕ್ಕ ಮಕ್ಕಳು, ಕೈ ಇಲ್ಲದವರು, ಕಣ್ಣಿಲ್ಲದವರು, ವಿಕಲಚೇತನರಿಗೆ ಮಾನವ ಹಕ್ಕುಗಳ ರಕ್ಷಣಾ ಪರಿಷತ್’ನ ಕಡೆಯಿಂದ ಆಶ್ರಮ ವಾಸಿಗಳಿಗೆ ಉಪಯೋಗ ಆಗುವಂತಹ ಆಹಾರದ ಕಿಟ್, ಹಣ್ಣು, ತರಕಾರಿಗಳನ್ನು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಧಾರವಾಡ | ಕ್ರಿಮಿನಲ್ ಜೊತೆಗೇ ಪರಾರಿಯಾಗಿದ್ದ ಪೇದೆ: ಹುಬ್ಬಳ್ಳಿ ಪೊಲೀಸರ ವಶಕ್ಕೆ

ಈ ಸಂದರ್ಭದಲ್ಲಿ ಮಹಿಳಾ ಪ್ರಧಾನ ಕಾರ್ಯದರ್ಶಿ ಲೀಲಾವತಿ ವಿಷ್ಣು ದೇವಾಡಿಗ, ರಾಜ್ಯ ವಕ್ತಾರ ನಿರಂಜನ್ ಪಾಟೀಲ್, ಅಡಲ್ಟ್ಸ್ ಕಾರ್ಯದರ್ಶಿ ವಿಜಯ ಹೆಗಡೆ, ಲಲಿತಾ ಪರಮೇಶ್ವರ್ ನಾಯ್ಕ, ಆಡಳಿತ ಕಮೀಟಿ ಸದಸ್ಯರುಗಳಾದ ಜಿತೇಂದ್ರ, ನರೇಶ, ಶಿವಮೊಗ್ಗ ಜಿಲ್ಲಾಧ್ಯಕ್ಷರು ಮತ್ತು ಮುಂಡಗೋಡ ಉಸ್ತುವಾರಿ ಧನರಾಜ್ ಸಿ, ಅಧ್ಯಕ್ಷ ಉದಯ ಕುಮಾರ ಕವಟೆ, ಉಪಾಧ್ಯಕ್ಷ ಪರಶುರಾಮ ಎನ್ ಮೆಂತೆಕಾರ, ಪ್ರಧಾನ ಕಾರ್ಯದರ್ಶಿ ಮಂಜು ನೇಮಣ್ಣನವರ, ಉಪಾಧ್ಯಕ್ಷ ಮಾರುತಿ ಎ ಪುರದವರ, ಸಂಚಾಲಕ ಪ್ರಶಾಂತ ಎಸ್ ಕಾಂಬಳೆ, ಸಂಘಟನಾ ಕಾರ್ಯದರ್ಶಿ ಮಂಜುನಾಥ ಎಸ್ ಕವಟೆ, ಮಹಿಳಾ ಪ್ರತಿನಿಧಿ ಚೈತ್ರಾ ಎಂ ಇಂಗಳಗಿ, ಕಲ್ಪನ ಮತ್ತು ಗಂಗವ್ವ ಹಾಗೂ ಅನಾಥಾಶ್ರಮದ ಮುಖ್ಯಸ್ಥ ಡಾ. ನಾಗರಾಜ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...