ಉತ್ತರ ಕನ್ನಡ | ಗೋವಾದಲ್ಲಿ ಗಡಿ ಕನ್ನಡ ಭವನ ನಿರ್ಮಾಣಕ್ಕಾಗಿ ಖಾಸಗಿ ನಿವೇಶನ ಖರೀದಿ

Date:

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ನಿವೇಶನ ಖರೀದಿ ಮಾಡಿದೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ ಹಾಗೂ ಪ್ರಕಾಶ ಮತ್ತೀಹಳ್ಳಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಉಪಸ್ಥಿತಿಯಲ್ಲಿ ಬುಧವಾರ ಹೋಟೆಲ್ ಕೇಸರ್ವಾಲ್ ಗಾರ್ಡನ್, ಪಂಜಿಮ್ ರಾಷ್ಟ್ರೀಯ ಹೆದ್ದಾರಿ, ವರ್ನಾ ಜಂಕ್ಷನ್ರಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ನಿವೇಶನ ಸರ್ವೆ ನಂಬರ್ 113/9 11571.2 Sq.ft Ambarame Matta, Cortalim Village, Vasco-Mormugao Taluk, Goa ನ್ನು ಖರೀದಿಸಿರುವ ಅಂಶಗಳ ಬಗ್ಗೆ ಮಾಹಿತಿ ನೀಡಿದರು.

2022-23ನೇ ಸಾಲಿನ ಆಯವ್ಯಯದಲ್ಲಿ “ಗೋವಾದಲ್ಲಿ ಕನ್ನಡ ಭವನ” ನಿರ್ಮಾಣ ಮಾಡುವ ಯೋಜನೆ ಘೋಷಣೆಯಾಗಿತ್ತು. ಸುಮಾರು 6 ಲಕ್ಷದಷ್ಟು ಇರುವ ಕನ್ನಡಿಗರಿಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಅನುಷ್ಠಾನಕ್ಕಾಗಿ ಕಳೆದ ನಲವತ್ತು ವರ್ಷಗಳಿಂದ ಗೋವಾ ಕನ್ನಡಿಗರು ಮನವಿ ಸಲ್ಲಿಸುತ್ತಾ ಬಂದಿದ್ದರು. ನಿವೇಶನ ಪಡೆಯುವ ಬಗ್ಗೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಈ ಮುಂದಿನಂತೆ ಕ್ರಮಗಳನ್ನು ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2022-23 ರ ಬಜೆಟ್‌ನಲ್ಲಿ ಸದರಿ ಯೋಜನೆ ಘೋಷಣೆಯಾಗುವುದಕ್ಕೂ ಮುನ್ನ ಅಖಿಲ ಗೋವಾ ಕನ್ನಡ ಮಹಾ ಸಂಘ ಇವರ ಮನವಿಯ ಮೇಲೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ 12-12-2021 ರಂದು ರಂದು ಗೋವಾಕ್ಕೆ ಭೇಟಿ ಮಾಡಿ ಅಲ್ಲಿನ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳ ಜೊತೆ ಚರ್ಚಿಸಲಾಯಿತು.

ಜುವ್ಹಾರಿ ಆಗ್ರೋ ಕೆಮಿಕಲ್ ಲಿ. ಗೋವಾ, ಇವರ ಒಡೆತನದಲ್ಲಿರುವ ಖಾಸಗಿ ನಿವೇಶನವನ್ನು ಪಡೆದುಕೊಳ್ಳಲು ಪ್ರಯತ್ನಿಸಿ 20 ಡಿಸೆಂಬರ್ 2021 ರಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರು ನವದೆಹಲಿ ರವರಿಗೆ ಪತ್ರ ಬರೆಯಲಾಯಿತು. ಹಿಂದಿನ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರು ಗೋವಾದ ಜುವ್ಹಾರಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ 3 ಜನವರಿ 2022 ರಂದು ಪತ್ರ ಬರೆದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಇಂತಹ ಪ್ರತಿಷ್ಠಿತ ಯೋಜನೆಗೆ ಕೈಗಾರಿಕೆಗಳ ಸಿಎಸ್‌ಆರ್ ನಿಧಿಯ ವ್ಯಾಪ್ತಿಯಲ್ಲಿ ಉಚಿತವಾಗಿ ಕನಿಷ್ಠ 5 ಎಕರೆ ಜಾಗವನ್ನು ಒದಗಿಸಿ ಎರಡೂ ರಾಜ್ಯಗಳ ಬಾಂಧವ್ಯಗಳಿಗೆ ಪ್ರೋತ್ಸಾಹ ನೀಡಲು ಕೋರಿರುತ್ತಾರೆ.

ಇದನ್ನೂ ಓದಿ: ಉತ್ತರ ಕನ್ನಡ | ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕೋಲಾ ಬಸ್ ನಿಲ್ದಾಣ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸೂಕ್ತವಾದ ಸರ್ಕಾರಿ ನಿವೇಶನವನ್ನು ಒದಗಿಸಲು ಕೋರಿ, ಗಡಿ ಪ್ರಾಧಿಕಾರದಿಂದ ಜಿಲ್ಲಾಧಿಕಾರಿಗಳು, ದಕ್ಷಿಣ ಗೋವಾ ಇವರಿಗೂ ಸಹಾ 10 ಡಿಸೆಂಬರ್2021 ರಂದು ಪತ್ರ ಬರೆಯಲಾಗಿರುತ್ತದೆ. ಇದಕ್ಕೆ ಪೂರಕವಾಗಿ ದಕ್ಷಿಣ ಗೋವಾದ ಜಿಲ್ಲಾ ಕಲೆಕ್ಟರ್‌ರವರು 6 ಜನವರಿ 2022 ರಂದು ದಕ್ಷಿಣ ಗೋವಾದ ಎಲ್ಲಾ ತಹಶೀಲ್ದಾರರುಗಳಿಗೆ ಪತ್ರ ಬರೆದು ನಮೂನೆ 1 & 14, ರ ನಮೂನೆಯಲ್ಲಿ ಅಗತ್ಯವಾದ ನಿವೇಶನಗಳನ್ನು ಗುರುತಿಸಿ, ಖರೀದಿ ಮೊತ್ತ, ನಕಾಶೆ ಇತ್ಯಾದಿಗಳ ವಿವರಗಳನ್ನು ಸಲ್ಲಿಸುವಂತೆ ಕೋರಿರುತ್ತಾರೆ. ಆದರೆ ನಂತರ ಇದರಿಂದ ಯಾವುದೇ ಪ್ರಗತಿಯಾಗಿರುವುದಿಲ್ಲ ಹಾಗೂ ಅನೇಕ ಬಾರಿ ಜಿಲ್ಲಾ ಕಲೆಕ್ಟರ್ ಮತ್ತು ತಹಶೀಲ್ದಾರರನ್ನು ಇವರನ್ನು ಖುದ್ದಾಗಿ ಸಂಪರ್ಕಿಸಿದರೂ ಕೂಡಾ ಸರ್ಕಾರಿ ಜಾಗ ಲಭ್ಯವಿಲ್ಲವಾಗಿರುವುದಾಗಿ ಮೌಖಿಕವಾಗಿ ತಿಳಿಸಿರುತ್ತಾರೆ. ಯಾವುದೇ ಹಿಂಬರಹ ನೀಡಿರುವುದಿಲ್ಲ.

ಸಭೆಯಲ್ಲಿ ಹಾಜರಿದ್ದ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳು ಒಟ್ಟಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಪ್ರಸ್ತುತ ಖರೀದಿಸಿರುವ ನಿವೇಶನಕ್ಕೆ ತಾತ್ಕಲಿಕವಾಗಿ ಆವರಣಗೋಡೆಯನ್ನು ನಿರ್ಮಿಸಿ ಕೊಡುವುದಾಗಿ ತಿಳಿಸಿದರು ಹಾಗೂ ಕನ್ನಡ ಭವನ ನಿರ್ಮಾಣಕ್ಕಾಗಿ ಗೋವಾದಲ್ಲಿ ನಿವೇಶನ ಖರೀದಿಸಿರುವುದಕ್ಕಾಗಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಗೆ ಹಾಗೂ ಉಪಮುಖ್ಯಮಂತ್ರಿಗಳಿಗೆ ಆಭಾರಿಯಾಗಿರುವುದಾಗಿ ತಿಳಿಸಿದರು ಹಾಗೂ ಕನ್ನಡ ಭವನ ನಿರ್ಮಾಣ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಲು ಅನುದಾನ ಒದಗಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿ ಕಾಮಗಾರಿಯನ್ನು ಪ್ರಾರಂಭಿಸಲು ಆಗ್ರಹಿಸಿದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗೋವಾ ಗಡಿನಾಡು ಘಟಕದ ಸಿದ್ದಣ್ಣ ಮೇಟಿ, ಹನುಮಂತ ರೆಡ್ಡಿ ಶಿರೂರು, ತವರಪ್ಪ, ರಾಜೇಶ್ ಶೆಟ್ಟಿ, ತಡಿವಾಳ್, ಶಿವಾನಂದ ಬಿಂಗಿ ಹಾಗೂ ಗೋವಾದಲ್ಲಿನ ಇತರೆ ಕನ್ನಡ ಪರ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...