ಉತ್ತರ ಕನ್ನಡ | ಆರ್‌ಸಿಬಿ ಪಾಲಾದ ಗೋಕರ್ಣದ ಕುವರಿ: ಪ್ರತ್ಯೂಷಾ ಕುಮಾರ್ ಡಬ್ಲ್ಯೂಪಿಎಲ್‌ಗೆ ಆಯ್ಕೆ

Date:

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಪುಣ್ಯಕ್ಷೇತ್ರ ಗೋಕರ್ಣದ ಪ್ರತಿಭೆಯೊಂದು ಮಹಿಳಾ ಕ್ರಿಕೆಟ್ ಲೋಕದ ದೊಡ್ಡ ವೇದಿಕೆಯಾದ ಮಹಿಳಾ ಪ್ರೀಮಿಯರ್ ಲೀಗ್ (WPL) ಪ್ರವೇಶಿಸುವ ಮೂಲಕ ನಾಡಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

2026ರ ಆವೃತ್ತಿಯ ಡಬ್ಲ್ಯೂಪಿಎಲ್ ಟೂರ್ನಿಗಾಗಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಗೋಕರ್ಣ ಮೂಲದ ಪ್ರತಿಭಾವಂತ ಕ್ರಿಕೆಟರ್ ಪ್ರತ್ಯೂಷಾ ಕುಮಾರ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಮೂಲತಃ ಗೋಕರ್ಣದ ರಥಬೀದಿಯ ಜಂಭೆ ಮನೆತನಕ್ಕೆ ಸೇರಿದ ಪ್ರತ್ಯೂಷಾ ಅವರ ಈ ಸಾಧನೆಯು ಜಿಲ್ಲೆಯಾದ್ಯಂತ ಸಂಭ್ರಮಕ್ಕೆ ಕಾರಣವಾಗಿದೆ. ಪ್ರಸ್ತುತವಾಗಿ ಬೆಂಗಳೂರಿನಲ್ಲಿ ನೆಲೆಸಿರುವ 26 ವರ್ಷದ ಪ್ರತ್ಯೂಷಾ ಕುಮಾರ್, ತಮ್ಮ 14ನೇ ವಯಸ್ಸಿನಲ್ಲೇ ಕ್ರಿಕೆಟ್ ಬದುಕನ್ನು ಆರಂಭಿಸಿದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000451599

ಕಠಿಣ ಪರಿಶ್ರಮ ಮತ್ತು ಆಟದ ಮೇಲಿನ ಅತೀವ ಆಸಕ್ತಿಯಿಂದಾಗಿ ಹಂತ ಹಂತವಾಗಿ ಬೆಳೆದ ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುವ ಮೂಲಕ ದೇಶೀಯ ಕ್ರಿಕೆಟ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಮೈದಾನದಲ್ಲಿ ಚುರುಕಾದ ವಿಕೆಟ್ ಕೀಪಿಂಗ್ ಕೌಶಲ್ಯದ ಜೊತೆಗೆ ಸ್ಫೋಟಕ ಬ್ಯಾಟಿಂಗ್ ನಡೆಸುವ ಸಾಮರ್ಥ್ಯ ಹೊಂದಿರುವ ಇವರು ಆಕ್ರಮಣಕಾರಿ ಬಲಗೈ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ತಹಶೀಲ್ದಾರ್‌ಗಳ ಹೆಗಲಿಗೆ ಉಪವಿಭಾಗಗಳ ಹೊಣೆ; ಖಾಯಂ ಅಧಿಕಾರಿಗಳ ಕೊರತೆಯಿಂದ ಅಭಿವೃದ್ಧಿಗೆ ಅಡ್ಡಿ

ಇನ್ನು ಹರಾಜಿನ ಪ್ರಕ್ರಿಯೆಯಲ್ಲಿ ಪ್ರತ್ಯೂಷಾ ಅವರ ಪ್ರತಿಭೆಯನ್ನು ಗುರುತಿಸಿದ ಆರ್‌ಸಿಬಿ ಫ್ರಾಂಚೈಸಿಯು ಹತ್ತು ಲಕ್ಷ ರೂಪಾಯಿಗಳ ಮೊತ್ತ ನೀಡಿ ಒಪ್ಪಂದ ಮಾಡಿಕೊಂಡಿದೆ. ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇನ್ನೂ ಪದಾರ್ಪಣೆ ಮಾಡದ ‘ಅನ್‌ಕ್ಯಾಪ್ಡ್’ ಆಟಗಾರ್ತಿಯಾಗಿದ್ದರೂ, ದೇಶೀಯ ಪಂದ್ಯಗಳಲ್ಲಿ ಅವರ ಸ್ಥಿರ ಪ್ರದರ್ಶನ ಮತ್ತು ಅನುಭವವನ್ನು ಗಮನಿಸಿ ಬೆಂಗಳೂರು ತಂಡ ಈ ಅವಕಾಶ ನೀಡಿದೆ.

ತವರಿನ ತಂಡಕ್ಕೇ ನಮ್ಮೂರಿನ ಹುಡುಗಿ ಆಯ್ಕೆಯಾಗಿರುವುದು ಸ್ಥಳೀಯರಿಗೆ ಹೆಮ್ಮೆಯ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಅವರು ರಾಷ್ಟ್ರೀಯ ತಂಡದಲ್ಲೂ ಮಿಂಚಲಿ ಎಂದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...