ಉತ್ತರ ಕನ್ನಡ | ಕೇರಳ ಮೂಲದ ಅನಾಥ ವ್ಯಕ್ತಿಯ ರಕ್ಷಣೆ: ಪುನಿತ್ ರಾಜಕುಮಾರ ಆಶ್ರಮಕ್ಕೆ ಸೇರ್ಪಡೆ

Date:

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹೂಕಾರ ಗ್ರಾಮದಲ್ಲಿ ಹಲವು ವರ್ಷಗಳಿಂದ ಅನಾಥ ಸ್ಥಿತಿಯಲ್ಲಿ ಅಲೆಯುತ್ತಿದ್ದ ಕೇರಳ ಮೂಲದ ನಟರಾಜ ಮಲಬಾರಿ ಎನ್ನುವ ವೃದ್ಧ ವ್ಯಕ್ತಿಯನ್ನು ರಕ್ಷಿಸಿ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮಕ್ಕೆ ಸೇರಿಸಿಕೊಂಡಿದ್ದಾರೆ.

ಈ ಕುರಿತು ಅನಾಥಾಶ್ರಮದ ಮುಖ್ಯಸ್ಥ ನಾಗರಾಜ‌ ನಾಯ್ಕ ಮಾತನಾಡಿ, ಹಲವು ವರ್ಷಗಳಿಂದ ಹೂಕಾರ ಗ್ರಾಮದಲ್ಲಿ ಅನಾಥ ಸ್ಥಿತಿಯಲ್ಲಿ ಇದ್ದ ವೃದ್ಧ ವ್ಯಕ್ತಿಗೆ ಗ್ರಾಮದ ನಾಗರೀಕರು ಊಟ ನೀಡಿ ಆಶ್ರಯ ನೀಡಿದ್ದಾರೆ. ಈಗ ಈ ವೃದ್ಧನು ಹಲವು ಕಾಯಿಲೆಗಳಿಂದ ಬಳಲುತ್ತಿರುವುದರಿಂದ ಆತನ ಮುಂದಿನ ಜೀವನಾಧಾರಕ್ಕೆ ನಮ್ಮ ಅನಾಥಾಶ್ರಮಕ್ಕೆ ಸೇರಿಸುವಂತೆ ಹೂಕಾರಿನ ದಯಾನಂದ ಗೊವಿಂದ ನಾಯ್ಕ ಮತ್ತು ಲಕ್ಷ್ಮಣ ಗೋವಿಂದ ನಾಯ್ಕ ಎನ್ನುವವರು ಸಿದ್ದಾಪುರ ಪೋಲೀಸ್ ಠಾಣೆಗೆ ಮನವಿ ಮಾಡಿಕೊಂಡಿದ್ದರು. ಸಿದ್ದಾಪುರ ಪೋಲೀಸರು‌ಆ ವೃದ್ಧನನ್ನು ಆಶ್ರಮಕ್ಕೆ ಸೇರಿಸಿಕೊಳ್ಳುವಂತೆ ಕೇಳಿದರು. ನಾನು ಹೋಗಿ ಆಶ್ರಮಕ್ಕೆ ಕರೆದುಕೊಂಡು ಬಂದು ಆಶ್ರಯ ನೀಡಿದ್ದೆನೆ ಎಂದರು.

ಈ ವ್ಯಕ್ತಿಯು ತನ್ನ ಹೆಸರನ್ನು ನಟರಾಜ ಮಲಬಾರಿ ಎಂದು ಹೇಳುತ್ತಿದ್ದು, ತಾನು ಕಳೆದ 50 ವರ್ಷಗಳ ಹಿಂದೆ ಗಾರೆ ಕೆಲಸಕ್ಕಾಗಿ ಕೇರಳದಿಂದ ಸಿದ್ದಾಪುರಕ್ಕೆ ಬಂದಿದ್ದಾಗಿ ತಿಳಿದು ಬಂದಿದೆ. ತಾಲೂಕು ಸರಕಾರಿ ಆಸ್ಪತ್ರೆಯ ಕಟ್ಟಡ ನಿರ್ಮಾಣದಲ್ಲಿ, ಎಂ ಜಿ ಸಿ ಕಾಲೇಜಿನ ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳುತ್ತಿದ್ದಾರೆ. ಈಗ ಈ ವೃದ್ಧ ವ್ಯಕ್ತಿ ವಯಸ್ಸಾದ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದು ಕೆಲಸ ಮಾಡಲಾಗದ ಸ್ಥಿತಿಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಧಾರವಾಡ | ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರ ಹುದ್ದಗಳಿಗೆ ಅರ್ಜಿ ಆಹ್ವಾನ

ಈ ವೃದ್ಧ ವ್ಯಕ್ತಿಯ ಬಂಧುಗಳು ಅಥವಾ ಪರಿಚಯದವರು ಇದ್ದರೆ 8073197439, 9481389187 ಈ ನಂಬರ್ ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...