ಉತ್ತರ ಕನ್ನಡ – ಸರ್ಕಾರಿ ತಂಡದ ಕಾರ್ಯಕ್ಕೆ ಮರಳು ಮಾಫಿಯಾ ಅಡ್ಡಿ: ಹೊನ್ನಾವರ ಠಾಣೆಯಲ್ಲಿ FIR ದಾಖಲು

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ತಡೆಗಟ್ಟಲು ತೆರಳಿದ್ದ ಭೂ ವಿಜ್ಞಾನ ಇಲಾಖೆ ತಂಡದ ಸರ್ಕಾರಿ ಕಾರ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಹೊನ್ನಾವರ ಠಾಣೆಯಲ್ಲಿ FIR ದಾಖಲಾಗಿದೆ. ಹಿರಿಯ ಭೂ ವಿಜ್ಞಾನಿ ಶ್ರೀಮತಿ ಆಶಾ ಎಂ.ಎಸ್ ಅವರು ನವೆಂಬರ್ 12ರ ರಾತ್ರಿ ಕಾರವಾರದಿಂದ ಕುಮಟಾ–ಹೊನ್ನಾವರ ಮಾರ್ಗದಲ್ಲಿ ಗಸ್ತು ನಡೆಸುವಾಗ. ಅವರು ತಮ್ಮ ಸಹೋದ್ಯೋಗಿಗಳಾದ ಹರೀಶ ಕೆ.ಎಸ್, ಮಂಜುನಾಥ ಶನಿಯಾರ ದೇವಾಡಿಗ, ಸಿಬ್ಬಂದಿ ಸಂತೋಷ ನಾಯ್ಕ ಹಾಗೂ ಚಾಲಕ ಸಂಜಯ ನಾಯ್ಕ ರೊಂದಿಗೆ ಅಧಿಕೃತ ವಾಹನ (ಕೆಎ-04/ಜಿ-1608)ದಲ್ಲಿ ಕಾರ್ಯಾಚರಣೆಗೆ ಹೊರಟಿದ್ದರು.

ಆ ಸಂದರ್ಭದಲ್ಲಿ ಅನಧಿಕೃತ ಮರಳು ಸಾಗಾಣಿಕೆಯ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವು ಚಂದಾವರದ ಕಡೆಗೆ ತೆರಳುತ್ತಿದ್ದ ವೇಳೆ, 2 ಗಂಟೆಯ ಸುಮಾರಿಗೆ ಕೆಎ–47/7700, ಕೆಎ–47/ಎ–4785, ಕೆಎ–47/ಎ–5750 ಮತ್ತು ಕೆಎ–31/ಎ–4923 ಸಂಖ್ಯೆಯ ಮರಳು ಸಾಗಾಣಿಕೆ ವಾಹನಗಳು ಕಂಡುಬಂದಿದ್ದವು. ವಾಹನಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಬೇರೆ ವಾಹನಗಳಲ್ಲಿ ಬಂದ ಅಪರಿಚಿತರು ಆ ವಾಹನಗಳನ್ನು ತಪ್ಪಿಸಿಕೊಳ್ಳುವಂತೆ ಮಾಡಿದ್ದು ಅಲ್ಲದೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೆಎ–47/ಎಂ–6763 (ಕ್ವಿಡ್), ಕೆಎ–05/ಎಂಎಲ್–7354 (ಎರ್ಟಿಗಾ) ಹಾಗೂ ಕೆಎ–19/ಎಂಎ–8825 (ಕಾರ್) ವಾಹನಗಳಲ್ಲಿ ಬಂದ ನಾಲ್ವರು ಸರ್ಕಾರಿ ವಾಹನಕ್ಕೆ ಅಡ್ಡಿಯಾಗಿ, ಚಂದಾವರದಿಂದ ಅಂಕೋಲಾದವರೆಗೆ ಬೆಳಗ್ಗೆ 8 ಗಂಟೆಯವರೆಗೂ ಅಧಿಕಾರಿಗಳನ್ನು ಹಿಂಬಾಲಿಸಿ, ಮಾಹಿತಿ ಹಂಚುವ ಮೂಲಕ ಮರಳು ಸಾಗಾಣಿಕೆ ವಾಹನಗಳನ್ನು ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಿಲ್ಲೆಯಲ್ಲಿ ಆರು ಸಂಚಾರಿ ಆರೋಗ್ಯ ಘಟಕಗಳ ಸೇವೆ ಶೀಘ್ರದಲ್ಲೇ ಪ್ರಾರಂಭ

ಅನಧಿಕೃತ ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ವಾಹನಗಳು ವಿನಾಯಕ ಮಾಣಿ ಹಾಗೂ ಇನ್ನಿತರರಿಗೆ ಸೇರಿರುವ ಸಾಧ್ಯತೆಯಿದೆ ಎಂಬ ಅನುಮಾನವನ್ನೂ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಶ್ರೀಮತಿ ಆಶಾ ಅವರು ದೂರಿನಲ್ಲಿ ದಾಖಲಿಸಿದ್ದಾರೆ. ಒಬ್ಬ ಮಹಿಳಾ ಸರ್ಕಾರಿ ಅಧಿಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಘಟನೆಗಳು ನಡೆದಿರುವುದು, ಮರಳು ಮಾಫಿಯಾ ಜಿಲ್ಲೆಯಲ್ಲಿ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸೂಚನೆಯಾಗಿದೆ. ಇವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಂಡು ನಿಯಂತ್ರಣಕ್ಕೆ ತರದಿದ್ದರೆ, ಮುಂದಿನ ದಿನಗಳಲ್ಲಿ ಇವರು ಮತ್ತಷ್ಟು ಅಪಾಯಕಾರಿಗಳಾಗುವ ಸಾಧ್ಯತೆ ಇದೆ. ಘಟನೆಯ ಚಿತ್ರಗಳು ಹಾಗೂ ವೀಡಿಯೊಗಳಿರುವ ಸಿಡಿ–1 ಅನ್ನು ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು, ಪೊಲೀಸರು ದೂರು ದಾಖಲಿಸಿ ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...