ಉತ್ತರ ಕನ್ನಡ | ಸತೀಶ್ ಸೈಲ್‌ಗೆ ಮತ್ತೆ ವೈದ್ಯಕೀಯ ಜಾಮೀನು ಮಂಜೂರು: ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಹೈಕೋರ್ಟ್ ಅನುಮತಿ

Date:

ಉತ್ತರ ಕನ್ನಡ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಎದುರಿಸುತ್ತಿರುವ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ವೈದ್ಯಕೀಯ ಜಾಮೀನು ನೀಡಿದೆ.

ಅವರ ಗಂಭೀರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿರುವ ನ್ಯಾಯಾಲಯ, ಲಿವರ್ (ಯಕೃತ್ತು) ಕಸಿ ಶಸ್ತ್ರಚಿಕಿತ್ಸೆಗಾಗಿ ಈ ಅನುಮತಿ ನೀಡಿದೆ. ಚಿಕಿತ್ಸೆಗೆ ಅವಕಾಶ ನೀಡಿದ್ದರೂ, ನ್ಯಾಯಾಲಯವು ಸೈಲ್ ಅವರಿಗೆ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಿದೆ,

ಚಿಕಿತ್ಸೆಯ ಪ್ರಗತಿಗೆ ಸಂಬಂಧಿಸಿದಂತೆ ಪ್ರತಿ ಎರಡು ವಾರಗಳಿಗೊಮ್ಮೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಪ್ರತಿ ಎಂಟು ವಾರಗಳಿಗೊಮ್ಮೆ ಆರೋಗ್ಯ ಸುಧಾರಣೆಯ ಸಮಗ್ರ ವರದಿಯನ್ನು ನೀಡಬೇಕು, 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

5 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಭದ್ರತೆಯನ್ನು ಒದಗಿಸಬೇಕು. ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಅಥವಾ ಪ್ರಕರಣದ ತನಿಖಾ ಪ್ರಕ್ರಿಯೆಗೆ ಅಡ್ಡಿಪಡಿಸಬಾರದು ಎಂದು ನ್ಯಾಯಪೀಠ ಷರತ್ತುಗಳ ಮೂಲಕ ಜಾಮೀನು ನೀಡಿದೆ.

ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಸೆಪ್ಟೆಂಬರ್ 9 ರಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವಿಚಾರಣೆಗೆ ಹಾಜರಾಗಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿತ್ತು.

ಇದಕ್ಕೂ ಮುನ್ನ, ಆಗಸ್ಟ್ 2025ರಲ್ಲಿ ಇಡಿ ಅಧಿಕಾರಿಗಳು ಸೈಲ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಕಾರವಾರ ಮಾತ್ರವಲ್ಲದೆ ಗೋವಾ, ಮುಂಬೈ ಮತ್ತು ದೆಹಲಿಯಲ್ಲೂ ಇಡಿ ಶೋಧ ನಡೆಸಿತ್ತು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | 108 ಅಂಬ್ಯುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ: ಗಂಡು ಮಗುವಿಗೆ ಜನ್ಮ ನೀಡಿದ ತಾಯಿ

ಸತೀಶ್ ಸೈಲ್ ಅವರ ಮೇಲೆ ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಹಳೆಯ ಪ್ರಕರಣವೂ ಇದೆ. ಈ ಸಂಬಂಧ 2024ರ ಅಕ್ಟೋಬರ್‌ನಲ್ಲಿ ವಿಶೇಷ ನ್ಯಾಯಾಲಯವು ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಮತ್ತು ಅವರ ಕಂಪನಿಗಳಿಗೆ 44 ಕೋಟಿ ರೂಪಾಯಿ ದಂಡ ವಿಧಿಸಿತ್ತು.

ಆದರೆ, ನಂತರ ಹೈಕೋರ್ಟ್ ಈ ಶಿಕ್ಷೆಯನ್ನು ಅಮಾನತುಗೊಳಿಸಿದ್ದು, ಮೇಲ್ಮನವಿ ವಿಚಾರಣೆ ಬಾಕಿ ಇರುವ ಕಾರಣ ಕಾರವಾರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸದಂತೆ ಸೂಚನೆ ನೀಡಿತ್ತು.

ಪ್ರಸ್ತುತ, ಶಾಸಕರ ಆರೋಗ್ಯದ ದೃಷ್ಟಿಯಿಂದ ಹೈಕೋರ್ಟ್ ನೀಡಿರುವ ಈ ಜಾಮೀನು ಅವರಿಗೆ ದೊಡ್ಡ ಮಟ್ಟದ ರಿಲೀಫ್ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...