ಉತ್ತರ ಕನ್ನಡ | ಶರಾವತಿ ನದಿ ಉಳಿಸಿ ಆಂದೋಲನ: ಬೆಂಗಳೂರಿನಲ್ಲಿ ‘ಗ್ರೀನ್ ಫ್ರೀಡಂ’ ಬೈಕ್ ಜಾಥಾ

Date:

ಶರಾವತಿ ನದಿಯನ್ನು ರಕ್ಷಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ʼಶರಾವತಿ ನದಿ ಉಳಿಸಿʼ(Save Sharavathi) ಆಂದೋಲನಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ನಗರದ ವಿವಿಧ ಭಾಗಗಳಿಂದ ಸುಮಾರು 200ಕ್ಕೂ ಹೆಚ್ಚು ಬೈಕರ್ಸ್ ಸೇರಿ, ಪರಿಸರ ಉಳಿಸುವ ಮತ್ತು ಶರಾವತಿ ನದಿಗೆ ಯಾವುದೇ ಹೊಸ ಯೋಜನೆಗಳ ಪ್ರಸ್ತಾಪ ಬೇಡ ಎಂದು ಒತ್ತಾಯಿಸಿದರು.

‘Green Freedom’ ಎಂಬ ಹೆಸರಿನಡಿ ಈ ಜಾಥಾವನ್ನು ಆಯೋಜಿಸಲಾಗಿತ್ತು. ಬೈಕರ್ಸ್ ‘Save_Sharavathi ‘ ಎಂಬ ಹ್ಯಾಶ್‌ಟ್ಯಾಗ್ ಹಾಗೂ ‘SaynotoSharavathipsp’ ಎಂಬ ಭಿತ್ತಿಪತ್ರಗಳನ್ನು ಹಿಡಿದು, ನದಿಯ ಮೇಲೆ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ವಿರೋಧಿಸಿ ಜಾಗೃತಿ ಮೂಡಿಸಿದರು. ಈ ಯೋಜನೆಯಿಂದ ಪಶ್ಚಿಮ ಘಟ್ಟಗಳಲ್ಲಿನ ಅಮೂಲ್ಯ ಪರಿಸರ ವ್ಯವಸ್ಥೆ ಮತ್ತು ಅರಣ್ಯ ನಾಶವಾಗುತ್ತದೆ ಎಂಬುದು ಪರಿಸರ ಪ್ರೇಮಿಗಳ ಪ್ರಮುಖ ಆತಂಕವಾಗಿದೆ.

ಜಾಥಾದಲ್ಲಿ ಭಾಗವಹಿಸಿದ ಬೈಕರ್ಸ್, ಶರಾವತಿ ಕಣಿವೆಯ ಜೀವವೈವಿದ್ಯ ಮಹತ್ವವನ್ನು ಒತ್ತಿ ಹೇಳಿದರು. ಶರಾವತಿ ನದಿ ಕೇವಲ ಉತ್ತರಕನ್ನಡ ಜಿಲ್ಲೆಗೆ ಸೀಮಿತವಲ್ಲ, ಇದು ಕರ್ನಾಟಕದ ಜೀವನಾಡಿ. ಅದರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಘೋಷಿಸಿದರು. ಪರಿಸರ ಸಂರಕ್ಷಣೆ ಕುರಿತ ತಮ್ಮ ಕಾಳಜಿಯನ್ನು ಈ ಬೈಕ್ ಜಾಥಾದ ಮೂಲಕ ಅವರು ಸಾರ್ವಜನಿಕರಿಗೆ ತಲುಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇಂಡಿ | ನೌಕರರು ಜನರ ವಿಶ್ವಾಸ ಗಳಿಸಿ ಕರ್ತವ್ಯ ನಿರ್ವಹಿಸಬೇಕು: ಶಾಸಕ ಯಶವಂತರಾಯಗೌಡ ಪಾಟೀಲ

ಈ ಜಾಥಾ ಬೆಂಗಳೂರಿನಾದ್ಯಂತ ಸಂಚರಿಸಿ ಜನರಲ್ಲಿ ಪರಿಸರ ಪ್ರಜ್ಞೆ ಹೆಚ್ಚಿಸುವಲ್ಲಿ ಯಶಸ್ವಿಯಾಯಿತು. ಶರಾವತಿ ಉಳಿಸಿ ಆಂದೋಲನಕ್ಕೆ ಬೆಂಗಳೂರಿನಿಂದಲೂ ಬೆಂಬಲ ವ್ಯಕ್ತವಾದದ್ದು ಮಹತ್ವಪೂರ್ಣ ಬೆಳವಣಿಗೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...