ಉತ್ತರ ಕನ್ನಡ | ಜಿಲ್ಲೆಯ ಬಿ.ಸಿ.ಎಂ ಹಾಸ್ಟೆಲ್‌ಗಳಲ್ಲಿ ವಾರ್ಡನ್‌ಗಳ ಕೊರತೆ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

Date:

ಉತ್ತರ ಕನ್ನಡ: ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆಸರೆಯಾಗಬೇಕಿದ್ದ ಸರ್ಕಾರಿ ಹಾಸ್ಟೆಲ್‌ಗಳು (ವಸತಿ ನಿಲಯಗಳು) ಇಂದು ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯಿಂದ ಸೊರಗುತ್ತಿರುವ ಸ್ಥಿತಿಯಲ್ಲಿವೆ. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್‌ಗಳಲ್ಲಿ ವಸತಿ ನಿಲಯ ಪಾಲಕರ ಕೊರತೆಯಿಂದಾಗಿ ವಿಧ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿ ತಲುಪುವಂತಾಗಿದೆ

ಜಿಲ್ಲೆಯಲ್ಲಿ ಒಟ್ಟು 105 ಸರ್ಕಾರಿ ಹಾಸ್ಟೆಲ್‌ಗಳಿದ್ದರೂ, ಪ್ರಸ್ತುತ ಕೆಲಸ ನಿರ್ವಹಿಸುತ್ತಿರುವವರು ಕೇವಲ 32 ವಾರ್ಡನ್‌ಗಳು ಮಾತ್ರ. ಇದರ ಪರಿಣಾಮವಾಗಿ ಒಬ್ಬೊಬ್ಬ ವಾರ್ಡನ್‌ ಎರಡು ಅಥವಾ ಮೂರು ಹಾಸ್ಟೆಲ್‌ಗಳ ಜವಾಬ್ದಾರಿಯನ್ನು ನಿಭಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆಲ ತಾಲ್ಲೂಕುಗಳಲ್ಲಿ ಕಚೇರಿ ಸಿಬ್ಬಂದಿಯೇ ಹಾಸ್ಟೆಲ್‌ಗಳ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಅತಿಯಾದ ಕೆಲಸದ ಒತ್ತಡದಿಂದ ವಾರ್ಡನ್‌ಗಳಿಗೆ ವಿದ್ಯಾರ್ಥಿಗಳ ಓದು, ಆರೋಗ್ಯ ಹಾಗೂ ದಿನನಿತ್ಯದ ಸಮಸ್ಯೆಗಳ ಕಡೆಗೆ ಸಮರ್ಪಕವಾಗಿ ಗಮನ ಹರಿಸಲು ಸಮಯವೇ ಸಿಗುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ 105 ಹಾಸ್ಟೆಲ್‌ಗಳಲ್ಲಿ 21 ಹಾಸ್ಟೆಲ್‌ಗಳು ಇಂದಿಗೂ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆ ಪಾವತಿಸುತ್ತಿದ್ದರೂ, ಈ ಕಟ್ಟಡಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಶೌಚಾಲಯ, ಅಡುಗೆಮನೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ.

ಅರಣ್ಯ ಪ್ರದೇಶ ಹೆಚ್ಚಿರುವ ಹಾಗೂ ಸರಿಯಾದ ಬಸ್ ಸಂಪರ್ಕವಿಲ್ಲದ ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಹಾಸ್ಟೆಲ್‌ಗಳೇ ದೊಡ್ಡ ಆಸರೆಯಾಗಿದೆ. ಆದರೆ, ವಿಶೇಷವಾಗಿ ಹುಡುಗಿಯರ ಹಾಸ್ಟೆಲ್‌ಗಳಲ್ಲಿ ಸಮಯಕ್ಕೆ ಸರಿಯಾಗಿ ಸ್ಪಂದಿಸುವ ವಾರ್ಡನ್‌ಗಳ ಕೊರತೆ ಅವರ ಭದ್ರತೆ ಕುರಿತು ಆತಂಕ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಸರಿಯಾದ ಊಟದ ವ್ಯವಸ್ಥೆ ಇಲ್ಲದೆ, ಆರೋಗ್ಯದಲ್ಲಿ ಏರುಪೇರಾದಾಗ ಕೇಳುವವರಿಲ್ಲದಂತಾಗಿದೆ.“ಬಡ ಮಕ್ಕಳ ಶಿಕ್ಷಣದ ಜೊತೆ ಸರ್ಕಾರ ಆಟವಾಡಬಾರದು. ಕೂಡಲೇ ಪ್ರತಿಯೊಂದು ಹಾಸ್ಟೆಲ್‌ಗೆ ಖಾಯಂ ವಾರ್ಡನ್‌ಗಳನ್ನು ನೇಮಕ ಮಾಡಬೇಕು. ಬಾಡಿಗೆ ಕಟ್ಟಡಗಳನ್ನು ಬಿಟ್ಟು ಸರ್ಕಾರಿ ಕಟ್ಟಡಗಳನ್ನು ನಿರ್ಮಿಸಿ, ಅಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು” ಎಂದು ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸುತ್ತಿವೆ.

ಇನ್ನಾದರೂ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಹಾಸ್ಟೆಲ್‌ಗಳ ದುಸ್ಥಿತಿಯನ್ನು ಸುಧಾರಿಸುವತ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...