ಉತ್ತರ ಕನ್ನಡ | ಅಂಚೆ ಸೇವೆಯಲ್ಲಿ ಮಹತ್ವದ ಬದಲಾವಣೆ: ಕಚೇರಿ ಮುಕ್ತಾಯದ ಕೊನೆಯ 30 ನಿಮಿಷಗಳವರೆಗೂ ಬುಕ್ಕಿಂಗ್ ಅವಕಾಶ

Date:

ಉತ್ತರ ಕನ್ನಡ: ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯು ತನ್ನ ಸೇವೆಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಇನ್ನು ಮುಂದೆ ಎಲ್ಲಾ ಇಲಾಖಾ ಅಂಚೆ ಕಚೇರಿಗಳಲ್ಲಿ ಕೆಲಸದ ಅವಧಿ ಮುಗಿಯುವ ಕೊನೆಯ 30 ನಿಮಿಷಗಳವರೆಗೂ ಅಂಚೆ ವಸ್ತುಗಳನ್ನು ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸಾಮಾನ್ಯವಾಗಿ ಕಚೇರಿ ಸಮಯದ ಕೊನೆಯ ಕ್ಷಣದಲ್ಲಿ ಬರುವ ಗ್ರಾಹಕರಿಗೆ ಅಂಚೆ ಸೇವೆ ಪಡೆಯಲು ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಇಲಾಖೆಯು, ನಿಗದಿತ ಕಾರ್ಯಾವಧಿ ಮುಕ್ತಾಯಕ್ಕೆ ಮುಂಚಿತವಾಗಿ 30 ನಿಮಿಷಗಳವರೆಗೆ ಸ್ಪೀಡ್ ಪೋಸ್ಟ್,

ಪಾರ್ಸೆಲ್ ಹಾಗೂ ಅಂತರರಾಷ್ಟ್ರೀಯ ಸ್ಪೀಡ್ ಪೋಸ್ಟ್ ಮತ್ತು ಪಾರ್ಸೆಲ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದರಿಂದ ಸಂಜೆಯ ವೇಳೆಗೆ ಕಚೇರಿಗೆ ಧಾವಿಸುವ ಗ್ರಾಹಕರು ಇನ್ನು ಮುಂದೆ ಸುಲಭವಾಗಿ ತಮ್ಮ ಪಾರ್ಸೆಲ್‌ಗಳನ್ನು ರವಾನಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇವಲ ಕಚೇರಿಗಳಿಗೆ ಭೇಟಿ ನೀಡುವುದು ಮಾತ್ರವಲ್ಲದೆ, ಮನೆಯಲ್ಲಿಯೇ ಕುಳಿತು ಅಂಚೆ ಸೇವೆ ಪಡೆಯಲು ಇಲಾಖೆಯು ‘ಗ್ರಾಹಕ ಸ್ವಯಂ ಸೇವಾ ಪೋರ್ಟಲ್’ ಅನ್ನು ಲಭ್ಯವಾಗಿಸಿದೆ. ಗ್ರಾಹಕರು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರ‍್ಯಾಕಿಂಗ್ ಹಾಗೂ ದೂರು ಸಲ್ಲಿಕೆಯಂತಹ ಕಾರ್ಯಗಳನ್ನು ಆನ್‌ಲೈನ್‌ನಲ್ಲೇ ಮಾಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸಿದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿಗಳ ಖಡಕ್ ಸೂಚನೆ

ಅಂಚೆ ಸೇವೆಗಳನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ “Dak Seva App” ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಕೂಡ ಇಲಾಖೆ ಬಿಡುಗಡೆ ಮಾಡಿದೆ. ಈ ಆಪ್ ಮೂಲಕ ಗ್ರಾಹಕರು ತಮ್ಮ ಮೊಬೈಲ್‌ನಲ್ಲಿಯೇ ಬುಕ್ಕಿಂಗ್ ಮತ್ತು ಸೇವಾ ಮಾಹಿತಿಯನ್ನು ಪಡೆಯಬಹುದು.

ಈ ಆಪ್ ಡೌನ್‌ಲೋಡ್ ಮಾಡಲು ಅಗತ್ಯವಿರುವ ಕ್ಯೂಆರ್ ಕೋಡ್ ಅಂಚೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ಸಾರ್ವಜನಿಕರು ಈ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅಂಚೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ತಮ್ಮ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...