ಉತ್ತರ ಕನ್ನಡ | ಕರಾವಳಿ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರದ ವಿಶೇಷ ಒತ್ತು: ಸಚಿವ ಹೆಚ್.ಕೆ. ಪಾಟೀಲ್

Date:

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸಿ ತಾಣಗಳು ರಾಜ್ಯದ ಪ್ರವಾಸೋದ್ಯಮದ ಬೆನ್ನೆಲುಬಾಗಿದ್ದು, ಈ ಭಾಗದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಭಾನುವಾರ ಹಳಿಯಾಳದಲ್ಲಿ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ₹798 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಸಮಾವೇಶ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಇವುಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನೀಡುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಪ್ರವಾಸೋದ್ಯಮವು ಕೇವಲ ಆದಾಯದ ಮೂಲವಲ್ಲ, ಅದು ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ವೇದಿಕೆಯೂ ಹೌದು ಎಂದು ಸಚಿವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಬಜೆಟ್‌ನಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ 100 ಡಾರ್ಮಿಟರಿಗಳ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಅಧ್ಯಯನ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಇದನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು.

ಹಳಿಯಾಳ ಮತ್ತು ದಾಂಡೇಲಿ ಭಾಗದಲ್ಲಿ ತೋಟಗಳ ನಿರ್ಮಾಣಕ್ಕೆ 1 ಕೋಟಿ ರೂ., ಕ್ಯಾಸಲ್ ರಾಕ್ ನೇಚರ್ ಕ್ಯಾಂಪ್ ಅಭಿವೃದ್ಧಿಗೆ 50 ಲಕ್ಷ ರೂ. ಹಾಗೂ ಸಂಚಾರಿ ರಾಕ್ ಟೂರಿಸ್ಟ್ ತಾಣದ ಅಭಿವೃದ್ಧಿಗೆ 50 ಲಕ್ಷ ರೂ.ಗಳನ್ನು ಘೋಷಿಸಲಾಗಿದೆ.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ಆರ್.ವಿ. ದೇಶಪಾಂಡೆ ಅವರು ಮಾತನಾಡಿ, ಬೆಲೆಯೇರಿಕೆ ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಗೆ ಪ್ರವಾಸೋದ್ಯಮ ಮತ್ತು ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಯೇ ರಾಮಬಾಣವಾಗಿದೆ. ಈ ಎರಡು ಕ್ಷೇತ್ರಗಳು ಬೆಳೆದರೆ ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಬಡ ರೋಗಿಗಳಿಂದ ಹಣ ವಸೂಲಿ ಆರೋಪ: ವೈದ್ಯರಿಗೆ ಶಾಸಕ ಆರ್.ವಿ. ದೇಶಪಾಂಡೆ ಖಡಕ್ ಸೂಚನೆ

ಹಳಿಯಾಳದ ಹೊಸ ಸಮಾವೇಶ ಕೇಂದ್ರವು ಕೇವಲ ಕಟ್ಟಡವಾಗದೆ, ನಿರಂತರ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು ಎಂದು ಅವರು ಆಶಿಸಿದರು.ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ಮಾತನಾಡಿ, ಜಿಲ್ಲೆಯ ಜಲಪಾತಗಳು,

ಕಡಲತೀರಗಳು ಮತ್ತು ದ್ವೀಪಗಳನ್ನು ಪ್ರವಾಸಿಗರ ಆಕರ್ಷಣೀಯ ಕೇಂದ್ರಗಳನ್ನಾಗಿ ಮಾಡಲು ಮುರುಡೇಶ್ವರ, ಗೋಕರ್ಣ ಮತ್ತು ಕಾರವಾರದಲ್ಲಿ ಜಲಸಾಹಸ ಕ್ರೀಡೆಗಳಿಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ನಂತರ ಕುದ್ರೋಳಿ ಗಣೇಶ್ ತಂಡದವರಿಂದ ಮ್ಯಾಜಿಕ್ ಶೋ ನಡೆಯಿತು. ಇದೇ ಸಂದರ್ಭದಲ್ಲಿ ಬೋಶ್ ಇಂಡಿಯಾ ಫೌಂಡೇಶನ್ ವತಿಯಿಂದ ಹಳಿಯಾಳದ ಐದು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಮ್‌ಗಳನ್ನು ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...