ಉತ್ತರ ಕನ್ನಡ | ಅಘನಾಶಿನಿ ರಸ್ತೆಯ ಹೊಂಡಗಳಿಗೆ ತಾತ್ಕಾಲಿಕ ಪರಿಹಾರ: ‘ಬೆಳಕು’ ತಂಡದಿಂದ ಜನಪರ ಸೇವೆ

Date:

ಕುಮಟಾ ಪಟ್ಟಣದಿಂದ ಅಘನಾಶಿನಿ ಕಡೆಗೆ ಸಾಗುವ ಮುಖ್ಯ ರಸ್ತೆಯ ಹೊಂಡಗಳಿಗೆ ಚಿತ್ರಿಗಿಯ ‘ಬೆಳಕು’ ಗೆಳೆಯರ ಬಳಗ ತಂಡ ಭಾನುವಾರ ತಾತ್ಕಾಲಿಕ ಪರಿಹಾರ ಒದಗಿಸಿದೆ. ವಾಹನ ಸವಾರರು ಅನುಭವಿಸುತ್ತಿದ್ದ ಕಷ್ಟ ಅರಿತು, ಗ್ರಾಮಸ್ಥರು, ವಿದ್ಯಾರ್ಥಿಗಳು ಮತ್ತು ಯುವಕರ ಸಹಭಾಗಿತ್ವದಲ್ಲಿ ಬಳಗದ ಸದಸ್ಯರು ಹೊಂಡಗಳನ್ನು ಮುಚ್ಚುವ ಕಾರ್ಯ ಕೈಗೊಂಡರು.

ಮೂಡಗಣಪತಿ ದೇವಸ್ಥಾನದ ಬಳಿಯಿಂದ ಆರಂಭವಾದ ಈ ರಸ್ತೆ ದುರಸ್ತಿ ಕಾರ್ಯದಲ್ಲಿ, ತಂಡವು ಕುಮಟಾ-ಅಘನಾಶಿನಿ ಮುಖ್ಯ ರಸ್ತೆಯಲ್ಲಿರುವ ಕಲ್ಸಂಕ, ಚಿತ್ರಿಗಿ ಉದ್ಯಾನವನ ಕ್ರಾಸ್, ಚಿತ್ರಿಗಿ ಹೈಸ್ಕೂಲ್ ಬಳಿ ಮತ್ತು ಗಣಪತಿ ದೇವಸ್ಥಾನದ ಬಳಿ ರಸ್ತೆಯಲ್ಲಿದ್ದ ಹೊಂಡಗಳನ್ನು ಮುಚ್ಚಿದರು.

ಸ್ಥಳೀಯ ಆಡಳಿತದ ಗಮನಕ್ಕೆ ಬಂದಿದ್ದರೂ ಯಾವುದೇ ಸ್ಪಂದನೆ ದೊರೆಯದ ಕಾರಣ, “ನಮ್ಮೂರಿನ ತುರ್ತು ರಸ್ತೆ ರಿಪೇರಿ ನಮ್ಮದೇ” ಎಂಬ ಧ್ಯೇಯದೊಂದಿಗೆ ‘ಬೆಳಕು’ ಬಳಗವೇ ಈ ಜವಾಬ್ದಾರಿಯನ್ನು ಹೊತ್ತುಕೊಂಡು ಶ್ರಮಾದಾನ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 27 at 1.50.49 PM

‘ಬೆಳಕು’ ಚಿತ್ರಿಗಿ ಬಳಗವು ಕೈಗೊಂಡಿರುವ ಈ ಕಾರ್ಯ ಕೇವಲ ತಾತ್ಕಾಲಿಕ ಪರಿಹಾರ ಮಾತ್ರವಾಗಿದೆ. ವಾಹನ ಸವಾರರು ಸುಗಮವಾಗಿ ಸಂಚರಿಸುವಂತೆ ಮಾಡುವ ಸದುದ್ದೇಶದಿಂದ ಈ ಕಾರ್ಯ ಮಾಡಲಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆಗಳು ರಸ್ತೆಯ ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಬಳಗದ ಸದಸ್ಯರು ಮತ್ತು ಗ್ರಾಮಸ್ಥರು ವಿನಂತಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ | ಕನ್ನಡ ತರ್ಜುಮೆ ತಂತ್ರಾಂಶ ʼಕನ್ನಡ ಕಸ್ತೂರಿʼ ಶೀಘ್ರದಲ್ಲೇ ಬಿಡುಗಡೆ

ಸಮಾಜಮುಖಿ ಕೆಲಸಗಳಲ್ಲಿ ಸದಾ ಮುಂದಿರುವ ‘ಬೆಳಕು’ ಬಳಗದ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಹಳಕಾರದ PWD ಗುತ್ತಿಗೆದಾರ ಗಜಾನನ ಎಸ್ ಗುನಗಾ, ರಸ್ತೆಗೆ 80 ರಿಂದ 100 ಬುಟ್ಟಿ ಗ್ರಿಟ್ ಪೌಡರ್ ನೀಡಿರುತ್ತಾರೆ. ಪುರಸಭೆ ಮಾಜಿ ಅಧ್ಯಕ್ಷೆ ದಾಕ್ಷಾಯಣಿ ಆರಿಗ್ ಚಿತ್ರಿಗಿ, 70 ರಿಂದ 100 ಚಿರೆ ಕಲ್ಲುಗಳನ್ನು ಒದಗಿಸಿದ್ದಾರೆ. ನಾಗೇಶ್ ನಾಯ್ಕ್ ಲಗೇಜ್ ರಿಕ್ಷಾವನ್ನು ತಂಡಕ್ಕೆ ನೀಡಿ ಸಹಕರಿಸಿದ್ದಾರೆ. ತಂಡದ ಕೆಲಸಗಾರರಿಗೆ ಕುಮಟಾ-ಅಘನಾಶಿನಿ KSRTC ಚಾಲಕರು ನೀರಿನ ಬಾಟಲಿ ಮತ್ತು ಸಮೋಸ (ತಿಂಡಿ) ನೀಡಿರುತ್ತಾರೆ. ಈ ಕಾರ್ಯಕ್ಕೆ ಸಹಕಾರ ನೀಡಿದ ಎಲ್ಲರಿಗೂ ‘ಬೆಳಕು’ ತಂಡ ಧನ್ಯವಾದ ಸಲ್ಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...