ಉತ್ತರ ಕನ್ನಡ | ನಾಳೆ ಮುಂಡಗೋಡ ಪಟ್ಟಣದಲ್ಲಿ ಬೃಹತ್ ಉದ್ಯೋಗಮೇಳ

Date:

ಉತ್ತರಕನ್ನಡ ಜಿಲ್ಲೆಯ ಮತ್ತು ಮುಂಡಗೋಡು ತಾಲೂಕಿನ ಯುವ ಸಮೂಹಕ್ಕೆ ಉದ್ಯೋಗದ ಅವಕಾಶವನ್ನು ಹೆಚ್ಚಿಸಲು ಮುಂಡಗೋಡು ಪಟ್ಟಣದ ಲೊಯೋಲ ವಿಕಾಸ ಕೇಂದ್ರ (ಎಲ್.ವಿ.ಕೆ) ಸಭಾಂಗಣದಲ್ಲಿ ಅಕ್ಟೋಬರ್ 05, 2024 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದಾರೆ.

ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜೀವನೋಪಾಯ ಮತ್ತು ಕೌಶಲಾಭಿವೃದ್ಧಿ ಕೇಂದ್ರವು ದೇಶದ ಪ್ರಸಿದ್ಧ ಕಾರ್ಪೋರೇಟ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಸಹಭಾಗಿತ್ವದಲ್ಲಿ ಪ್ರತಿಭಾನ್ವಿತ ಯುವ ಸಮೂಹದ ಸಂದರ್ಶನ ನಡೆಸಲಿದ್ದು, ಈಗಾಗಲೇ ಸುಮಾರು 500ಕ್ಕಿಂತ ಹೆಚ್ಚಿನ ಉದ್ಯೋಗಾಂಕ್ಷಿಗಳು ಉದ್ಯೋಗಮೇಳಕ್ಕೆ ನೋಂದಾಯಿಸಿಕೊಂಡಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ, ಎಸ್‌ವಿ ರಿಕ್ರುಟೆಕ್, ಟೋಯೋಟಾ, ಹೊಂಡಾ, ಜಿಯೋ, ಅಮೆಜಾನ್, ಮುತ್ತೂಟ್ ಫೈನಾನ್ಸ್, ಎಸ್‌ಬಿಐ ಲೈಫ್, ಕ್ರೆಡಿಟ್ ಅಕ್ಸೆಸ್, ವಿ-ಜಾಬ್, ಸಿಎಮ್ಸ್, ಎಲ್‌ಬಿಸಿ, ಮುಂತಾದ ಕಾರ್ಪೋರೇಟ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಉದ್ಯೋಗದಾತರು ಸಂದರ್ಶನ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241004 173426

ಉದ್ಯೋಗ ಮೇಳವನ್ನು ಮುಂಡಗೋಡದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹೀರೇಹಳ್ಳಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಎಸ್ ರಿಕ್ರುಟೆಕ್, ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಜೀವನ ಕುಮಾರ್, ಮುಂಡಗೋಡ ತಾಲೂಕಿನ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾ ಅಧಿಕಾರಿ, ಟಿ ವಾಯ್ ದಾಸನಕೊಪ್ಪ, ಪಟ್ಟಣದ ಸೆಂಟ್ ರೀಟಾ ಚರ್ಚಚ ನ ಮುಖ್ಯ ಗುರು, ಫಾ.ಗಿಲ್ಬರ್ಟ್ ಸಾಲ್ದಾನಾ, ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಉದ್ಯೋಗಮೇಳವನ್ನು ಎಲ್‌ವಿಕೆಯ ಜೀವನೋಪಾಯ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರ, ತಾಲೂಕಿನ ವಿವಿಧ ಸಮುದಾಯ ಆಧರಿತ ಸಂಘಟನೆಗಳಾದ ಯುವರತ್ನ ವೇದಿಕೆ, ಜನಸ್ಪೂರ್ತಿ ಸ್ವ-ಸಹಾಯ ಸಂಘಗಳ ಒಕ್ಕೂಟ, ಕಟ್ಟಡ ಕಾರ್ಮಿಕರ ಯೂನಿಯನ್, ಭೂ-ಹಕ್ಕುದಾರರ ಹಿತರಕ್ಷಣಾ ವೇದಿಕೆ ಹಾಗೂ ಜನವೇದಿಕೆ -ಜೊತೆ ಸಂಯುಕ್ತವಾಗಿ ಲೊಯೋಲ ವಿಕಾಸ ಕೇಂದ್ರದ ಸಹಭಾಗಿತ್ವದೊಡನೆ ಆಯೋಜಿಸಿದ್ದು, ಉತ್ತರ ಕನ್ನಡ ಜಿಲ್ಲೆ ಅಷ್ಟೇ ಅಲ್ಲದೆ ಅನ್ಯ ಜಿಲ್ಲೆಗಳ ನಿರುದ್ಯೋಗಿ ಯುವಕರಿಗೂ ಪ್ರಯೋಜನ ಆಗಲಿದೆ ಎಂದು ಸಂಚಾಲಕ ಲಕ್ಷ್ಮಣ ಹೇಳುತ್ತಾರೆ.

ಇದನ್ನೂ ಓದಿ ಗಾಂಧಿ ಕನ್ನಡಕವನ್ನು ಬಳಸಿ ಗಾಂಧಿ ತತ್ವವನ್ನು ಗಾಳಿಗೆ ತೂರಿದವರು

ಉದ್ಯೋಗ ಮೇಳ ನಡೆಯುವ ಸ್ಥಳ: ವಿವೇಕಾನಂದ ಬಯಲು ರಂಗ ಮಂದಿರ, ಸಂತೆ ಮಾರ್ಕೆಟ್, ಪಟ್ಟಣ ಪಂಚಾಯತಿ ಹತ್ತಿರ, ಮುಂಡಗೋಡ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...