ಉತ್ತರ ಕನ್ನಡ| ಗ್ರಾಮಸ್ಥರ ಸತ್ಯಾಗ್ರಹಕ್ಕೆ ತೆರೆ: ಅಧಿಕಾರಿಗಳ ಭರವಸೆಯ ಮೇಲೆ ಹೋರಾಟಕ್ಕೆ ತಾತ್ಕಾಲಿಕ ವಿರಾಮ

Date:

ಉತ್ತರ ಕನ್ನಡ ಜಿಲ್ಲೆಯ ಜೋಯಡಾ ತಾಲ್ಲೂಕಿನ ತಹಶೀಲದಾರ ಕಚೇರಿ ಎದುರು ಎರಡು ದಿನಗಳಿಂದ ಗ್ರಾಮಸ್ಥರು ನಡೆಸುತ್ತಿದ್ದ ಅಹೋರಾತ್ರಿ ಸತ್ಯಾಗ್ರಹಕ್ಕೆ ಮಂಗಳವಾರ ಕೊನೆ ದೊರಕಿದೆ. ಮೂಲಭೂತ ಸೌಕರ್ಯಕ್ಕಾಗಿ ಗ್ರಾಮಸ್ಥರು ಮಾಡುತ್ತಿದ್ದ ಧರಣಿಗೆ ತಾಲೂಕು ಅಧಿಕಾರಿಗಳು ಸ್ಪಂದಿಸಿದ್ದು, ರೈತ ಸಂಘದ ನಾಯಕರ ಹಾಗೂ ಗ್ರಾಮ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸುವ ಕುರಿತು ಭರವಸೆ ನೀಡಿ ಪ್ರತಿಭಟನೆಯನ್ನು ಕೈ ಬಿಡುವಂತೆ ಮನವೊಲಿಸಲಾಗಿದೆ.

ಸಭೆಯಲ್ಲಿ ಗ್ರಾಮಸ್ಥರ ಪ್ರಮುಖ ಬೇಡಿಕೆಗಳಾದ ರಸ್ತೆ, ಬಸ್‌ಸೇವೆ, ಸಂಪರ್ಕ ಸೌಲಭ್ಯ ಹಾಗೂ ಅರಣ್ಯ ಇಲಾಖೆಯ ತೊಡಕುಗಳ ಕುರಿತು ಚರ್ಚೆ ನಡೆಯಿತು. ಅಧಿಕಾರಿಗಳು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಹೋರಾಟವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡರು. ಆದರೆ, ಮೂರು ವಾರಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಜೋಯಡಾದಿಂದ ಹಳಿಯಾಳ ಶಾಸಕರ ಮನೆವರೆಗೆ ಪಾದಯಾತ್ರೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ನೀಡಲಾದ ಪ್ರಮುಖ ಭರವಸೆಗಳು: ಕಿರವತ್ತಿ–ಕಾರ್ಟೋಳಿ–ಡಿಗ್ಗಿ–ಗೋವಾ ಗಡಿ ರಸ್ತೆ: ಕಾಮಗಾರಿ ನವೆಂಬರ್ 25ರಿಂದ ಪ್ರಾರಂಭಿಸುವ ಭರವಸೆ. ಡಿಗ್ಗಿ–ವಾಗೇಲಿ ರಸ್ತೆ: ಡಾಂಬರೀಕರಣಕ್ಕಾಗಿ ಪ್ರಸ್ತಾವನೆ ಸಲ್ಲಿಕೆ. ಕಿರವತ್ತಿ, ತೆರಾಳಿ, ಸಿಸೈ, ದುಧಮಾಳ ರಸ್ತೆ: ಗ್ರಾಮಪಂಚಾಯಿತಿ ಮತ್ತು ತಾಪಂ ಮಟ್ಟದಲ್ಲಿ ಯೋಜನೆ ರೂಪಿಸಲು ಸೂಚನೆ. ಗ್ರಾಮ ಬಸ್‌ಸೇವೆ: ಜೋಯಡಾದಿಂದ ಕಾರ್ಟೋಳಿ ಹಾಗೂ ಕುಂಡಲ ವಸತಿ ಮಾರ್ಗದಲ್ಲಿ ಬಸ್ ಸೇವೆ ಪ್ರಾರಂಭಿಸಲು ಕ್ರಮ. ಸಂಪರ್ಕ ಸೇವೆ: 17 ಬಿಎಸ್‌ಎನ್‌ಎಲ್ ಟವರ್‌ಗಳಿಗೆ ತ್ವರಿತ ಸಂಪರ್ಕ ಕಲ್ಪಿಸುವ ಭರವಸೆ. ಅರಣ್ಯ ಇಲಾಖೆಯ ತೊಡಕುಗಳು: ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗದಂತೆ ಕ್ರಮ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ

ಕುಣಬಿ ಸಮುದಾಯದ ಪರಿಶಿಷ್ಟ ಪಂಗಡ ಸೇರಿಕೆ: ಅದು ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ಇದೆ ಎಂದು ತಹಶೀಲದಾರರು ಸ್ಪಷ್ಟಪಡಿಸಿದರು. ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಗೆ ರೈತ ಸಂಘದ ನಾಯಕರು, ಯಮುನಾ ಗಾಂವಕರ, ಪ್ರೇಮಾನಂದ ವೇಳಿಪ್, ತಿಲಕ್ ಗೌಡ, ಡಿ. ಸ್ಯಾಮ್ಸನ್ ಹಾಗೂ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...