ಉತ್ತರ ಕನ್ನಡ | ಸರ್ಕಾರಿ ಶಾಲೆ ಬಳಿ ದುರ್ವಾಸನೆ; ಹೊರಗೆ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

Date:

ಶಾಲೆಯ ಸಮೀಪದ ಪಾಳು ಭೂಮಿಯು ಬಯಲು ಬಹಿರ್ದೆಸೆ ಮತ್ತು ಕೊಳಚೆಯ ತಾಣವಾಗಿದೆ. ಪರಿಣಾಮ, ಶಾಲೆಯ ವಿದ್ಯಾರ್ಥಿಗಳು ದುರ್ವಾಸನೆಯ ನಡುವೆಯೇ ಪಾಠ ಕೇಳುವ ಪರಿಸ್ಥಿತಿ ಹಳ್ಳೂರು ಸರ್ಕಾರಿ ಶಾಲೆಯಲ್ಲಿದೆ.

ಉತ್ತರ ಕನ್ನಡ ಜಿಲ್ಲೆಯ ಮಂಡಗೋಡ ತಾಲೂಕಿನ ಹಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಇಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ದುರ್ವಾಸನೆಯ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

“ದುರ್ವಾಸನೆಯಿಂದಾಗಿನಮಗೆ ಸರಿಯಾಗಿ ಉಸಿರಾಡಲು ಸಹ ಸಾಧ್ಯವಾಗಲಿಲ್ಲ. ಸರಿಯಾದ ಚರಂಡಿ ನಿರ್ಮಾಣ ಮಾಡಿ ಕೊಳಚೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಆದರೆ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ತರಗತಿಯಲ್ಲಿ ಕೂರಲಾಗದೆ, ಹೊರಗಡೆ ಪಾಠ ಮಾಡುವಂತೆ ನಾವು ಶಿಕ್ಷಕರಿಗೆ ಮನವಿ ಮಾಡಿದ್ದೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲೆಯಲ್ಲಿ ನಾಲ್ವರು ಶಿಕ್ಷಕರು ಹಾಗೂ ಇಬ್ಬರು ಅತಿಥಿ ಶಿಕ್ಷಕರಿದ್ದಾರೆ. ಶಾಲೆಯ ಹಿಂದೆ ಒಬ್ಬರು ಮನೆ ನಿರ್ಮಾಣ ಮಾಡಿದ್ದಾರೆ. ಅವರ ಮನೆಯ ಶೌಚಾಲಯ ಮತ್ತು ತ್ಯಾಜ್ಯದ ನೀರು ಶಾಲೆಯ ಕಡೆಗೆ ಹರಿಯುತ್ತದೆ. ಆ ಬಗ್ಗೆ ಹಲವು ಬಾರಿ ಅವರಿಗೆ ತಿಳಿಸಿದ್ದೇವೆ. ಆದರೆ, ಏನೂ ಉಪಯೋಗವಾಗಿಲ್ಲ. ಸಮಸ್ಯೆ ಬಗ್ಗೆ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಅವರು ಕೂಡ ಏನೂ ಮಾಡಿಲ್ಲ. ನಮಗೆ ಸಾಕಾಗಿಹೋಗಿದೆ” ಎಂದು ಶಾಲೆಯ ಮುಖ್ಯಶಿಕ್ಷಕ ನಾಗರಾಜ್ ಕ್ಯಾಲಕೊಂಡ್ ಹೇಳಿದ್ದಾರೆ.

“ದುರ್ವಾಸನೆಯಿಂದಾಗಿ ಅನೇಕ ವಿದ್ಯಾರ್ಥಿಗಳು ಶಾಲೆ ತೊರೆದಿದ್ದಾರೆ. ಈ ಹಿಂದೆ 200 ವಿದ್ಯಾರ್ಥಿಗಳು ಇದ್ದರು. ಈಗ ವಿದ್ಯಾರ್ಥಿಗಳ ಸಂಖ್ಯೆ 120ಕ್ಕೆ ಕುಸಿದಿದೆ” ಎಂದು ಅವರು ತಿಳಿಸಿದ್ದಾರೆ.

“ಶಾಲೆಯ ಹಿಂಭಾಗದಲ್ಲಿರುವ ಖಾಸಗಿ ಮನೆಗೆ ಚರಂಡಿ ಇಲ್ಲ. ಹೆಚ್ಚೆಂದರೆ, ನಾನು ಒಳಚರಂಡಿಯನ್ನು ನಿರ್ಮಾಣ ಮಾಡಬಹುದು. ನಾವು ಅದನ್ನು ಶೀಘ್ರದಲ್ಲೇ ಮಾಡುತ್ತೇವೆ” ಎಂದು ಮುಖ್ಯಾಧಿಕಾರಿ ಚಂದ್ರಶೇಖರ ಬಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...