ಕೋಮು ದ್ವೇಷ ಪ್ರಕರಣ: ವಿಕ್ರಮ್ ಹೆಗಡೆ ವಿರುದ್ಧ ವಿಚಾರಣೆ ಹಿಂಪಡೆಯಲು ಮುಂದಾಗಿದೆಯೇ ಸರ್ಕಾರ?

Date:

ಪ್ರಚೋದನಾಕಾರಿ ತಪ್ಪು ಸಂದೇಶಗಳನ್ನು ಹರಡುವ ಮೂಲಕ ಮುಸ್ಲಿಂ ಸಮುದಾಯದ ಕುರಿತು ದ್ವೇ‍ಷ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದುತ್ವ ಕೋಮುವಾದಿ, ಪೋಸ್ಟ್‌ ಕಾರ್ಡ್‌ ಸಂಪಾದಕ ಮಹೇಶ್ ಹೆಗಡೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ.

2017ರಲ್ಲಿ ಮಹೇಶ್ ಹೆಗಡೆ ಮತ್ತು ವಿವೇಕ ಶೆಟ್ಟಿ ಎಂಬಾತನ ವಿರುದ್ಧ ಕಾರವಾರದಲ್ಲಿ ಅಂದಿನ ತಹಶೀಲ್ದಾರ್ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ‘ಸಿ’ ರಿಪೋರ್ಟ್‌ ಸಲ್ಲಿಸಿದ್ದಾರೆ. ನ್ಯಾಯಾಲಯವು ವರದಿಯನ್ನು ಒಪ್ಪಿಕೊಂಡಿದೆ.

ಸಿ ರಿಪೋರ್ಟ್‌ ಆಧರಿಸಿ ಪ್ರಕರಣವನ್ನು ವಿಚಾರಣೆಯಿಂದ ಹಿಂಪಡೆದುಕೊಳ್ಳಲು ಯಾವುದೇ ಅಭ್ಯಂತರವಿಲ್ಲ ಎಂದು ಕಾರವಾರ ಪೊಲೀಸ್ ಇನ್ಸ್‌ಪೆಕ್ಟರ್‌ ಅಕ್ಟೋಬರ್ 1 ರಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣ ಕುರಿತು ನಡೆಸಿದ ತನಿಖೆಯಿಂದ ಆರೋಪಿತರು ಪತ್ತೆಯಾಗದ ಕಾರಣ ಸದರಿ ಪ್ರಕರಣವನ್ನು ತುರ್ತು ನಾಪತ್ತೆ ಎಂದು ಪರಿಗಣಿಸಿ ಸಿಜೆಎಂ ನ್ಯಾಯಾಲಯಕ್ಕೆ 2021ರ ಏಪ್ರಿಲ್‌ 8ರಂದು ‘ಸಿ’ ಅಂತಿಮ ವರದಿಯನ್ನು ಸಲ್ಲಿಸಲಾಗಿತ್ತು. ವರದಿಯನ್ನು 2021ರ ಅಕ್ಟೋಬರ್‌ 29ರಂದು ನ್ಯಾಯಾಲಯವು ಅಂಗೀಕರಿಸಿದೆ. ಆದ್ದರಿಂದ  ಪ್ರಕರಣವನ್ನು ಅಭಿಯೋಜನೆಯಿಂದ ಹಿಂಪಡೆದುಕೊಳ್ಳಲು ಯಾವುದೇ ಅಭ್ಯಂತರ ಇರುವುದಿಲ್ಲ” ಎಂದು ಪೊಲೀಸ್‌ ಇನ್ಸ್‌ಪೆಕ್ಟರ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣವನ್ನು ಹಿಂಪಡೆಯುವ ಸಂಬಂಧ ಗೃಹ ಸಚಿವ ಡಾ ಜಿ ಪರಮೇಶ್ವರ್‌ ಅವರ ಆದೇಶಕ್ಕೆ ಕಡತವನ್ನು ಮಂಡಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣವೇನು?

ಹೊನ್ನಾವರದ ಪರೇಶ್‌ ಮೇಸ್ತಾ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಉಂಟು ಮಾಡುವಂತಹ, ಪ್ರಚೋದನಾಕಾರಿ ಸಂದೇಶಗಳನ್ನು ರವಾನಿಸಿ ಸಾರ್ವಜನಿಕ ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‌ ಕಾರ್ಡ್‌ ವೆಬ್‌ಸೈಟ್‌ನಲ್ಲಿ ಸಂದೇಶಗಳನ್ನು ಬಿತ್ತರಿಸಲಾಗಿತ್ತು. ಆ ಸಂದೇಶಗಳು ಎರಡು ಕೋಮಿನ ನಡುವೆ ದ್ವೇಷದ ಭಾವನೆ ಬೆಳೆಯಲು ಕಾರಣವಾಗಿದ್ದವು. ಹೀಗಾಗಿ, ಪೋಸ್ಟ್‌ ಕಾರ್ಡ್‌ ನ್ಯೂಸ್‌ ಜಾಲತಾಣದ ಮುಖ್ಯಸ್ಥ ವಿವೇಕ ಶೆಟ್ಟಿ ಮತ್ತು ಮಹೇಶ ಹೆಗಡೆ ವಿರುದ್ಧ ಕಾರವಾರ ತಹಶೀಲ್ದಾರ್ ಗೋವಿಂದ ನಾಯ್ಕ ದೂರು ದಾಖಲಿಸಿದ್ದರು.

ಅವರ ದೂರನ್ನಾಧರಿಸಿ ಇಬ್ಬರೂ ಆರೋಪಿಗಳ ವಿರುದ್ಧ ಐಪಿಸಿ 183, ಕಲಂ 153, 153 (ಎ) 505 (2) ಅಡಿಯಲ್ಲಿ 2017ರ ಡಿಸೆಂಬರ್‌ 14ರಂದು ಎಫ್‌ಐಆರ್‌ ಕೂಡ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು 2021ರ ಏಪ್ರಿಲ್‌ 8ರಂದು ನ್ಯಾಯಾಲಯಕ್ಕೆ ‘ಸಿ’ ಅಂತಿಮ ವರದಿಯನ್ನು ಸಲ್ಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...