ಉತ್ತರ ಕನ್ನಡ | ಗೋವಾದ ನೇತ್ರಾವಳಿಯಲ್ಲಿ ಸಮೀಕ್ಷೆ ಆರಂಭಿಸಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ

Date:

ಕಾರವಾರ ತಾಲ್ಲೂಕು ಕೇಂದ್ರದಿಂದ 70 ಕಿಲೋ ಮೀಟರ್ ದೂರವಿರುವ ಕಮರಗಾಂವ್ ದಟ್ಟಾರಣ್ಯದ ನಡುವೆ ಇದೆ. ಅಲ್ಲಿ ಇಂಟರ್‌ನೆಟ್ ಇರಲಿ, ವಿದ್ಯುತ್‌ ಪೂರೈಕೆ ಕೂಡ ಇಲ್ಲಾ. ಗ್ರಾಮ ಪಂಚಾಯಿತಿ ಕೇಂದ್ರವಾದ ಘೋಟೆಗಾಳಿ ಗ್ರಾಮ ಕೂಡ 16 ಕಿ.ಮೀ. ದೂರವಿದೆ. ಅಲ್ಲಿಗೆ ರಸ್ತೆಯೂ ಸರಿಯಾಗಿಲ್ಲ. ತಾಲೂಕು ಕೇಂದ್ರ ಕಾರವಾರಕ್ಕೆ ಬರಬೇಕು ಎಂದರೆ ಗೋವಾ ರಾಜ್ಯದ ಮೂಲಕ 125 ಕಿ.ಮೀ. ಪ್ರಯಾಣಿಸಿ ಬರಬೇಕು. ಇದು ಕಮರಗಾಂವ ಗ್ರಾಮಸ್ಥರ ನಿತ್ಯದ ಗೋಳು. ಇವರಿಗೆ ಗೋವಾ ರಾಜ್ಯದ ಊರುಗಳೇ ಸಮೀಪ.

ಹಾಗಾಗಿ ಸಮೀಪವಿರುವ ಗೋವಾ ರಾಜ್ಯದ ನೇತ್ರಾವಳಿಯಲ್ಲಿ ಸೋಮವಾರ ಸಮೀಕ್ಷೆಯ ಶಿಬಿರ ಆಯೋಜಿಸಲಾಗಿದೆ ಗೋವಾದಲ್ಲಿ ನಡೆಯುವ ಶಿಬಿರಕ್ಕೆ ಸಿಬ್ಬಂದಿ ಜತೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ ಶಶಿ, ತಹಸೀಲ್ದಾರ ನಿಶ್ಚಲ ನರೋನಾ ಕೂಡ ತೆರಳಲಿದ್ದಾರೆ. ಹಾಗೂ  ವಿದ್ಯುತ್‌ ಸಂಪರ್ಕ ಇಲ್ಲದ ಮನೆಗಳಿಗೆ ಹೆಸ್ಕಾಂ ಸಿಬ್ಬಂದಿ ಯುಎಚ್ ಐಡಿ ಅಂಟಿಸಿದ್ದಾರೆ. ಶನಿವಾರ ಕಾಡು ದಾರಿಯ ಮೂಲಕವೇ ಕಂದಾಯ ಇಲಾಖೆಯ ಅಧಿಕಾರಿಗಳು ಹೋಗಿ ಯುಎಚ್ ಐಡಿ ಇರುವ ಮನೆ ವಿವರ ಹಾಗೂ ವಿದ್ಯುತ್ ಸಂಪರ್ಕ ಇಲ್ಲದೇ ಇರುವ ಮನೆಗಳ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಹಾಗೂ ಸಮೀಕ್ಷೆ ಮಾಡುವಾಗ ಜಿಗಣೆ ಕಾಟದಿಂದ ನರಳಿದ್ದು ಹಾಗೂ ವಿದ್ಯುತ್ ಇಲ್ಲದೆ ಇರುವುದರಿಂದ ಚಾರ್ಜಿಂಗ್ ಬಲ್ಬ್ ಹಿಡಿದು ಸಮೀಕ್ಷೆ ಮಾಡಿದ್ದು ಕಂಡುಬಂದಿದೆ.

ಒಟ್ಟು 32 ಮನೆ ಗ್ರಾಮದಲ್ಲಿರುವುದು. ಮತ ಪಟ್ಟಿಯಲ್ಲಿ ಇರುವವರ ಸಂಖ್ಯೆ 130

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮರಗಾಂವ ಗ್ರಾಮದ ಎಲ್ಲಾ ಮನೆಗಳ ದಾಖಲೆ ಸಂಗ್ರಹ ಮಾಡಲಾಗಿದೆ. ಗ್ರಾಮದಿಂದ ಗೋವಾದ ನೇತ್ರಾವಳಿಗೆ ವಾಹನದ ವ್ಯವಸ್ಥೆ ಮಾಡಿದ್ದು ಅಲ್ಲಿಯೂ ಸಮೀಕ್ಷೆ ಶಿಬಿರ ಆರಂಭಿಸಲ್ಲಿದ್ದೆವೆ ಎಂದು ಕಾರವಾರ ತಹಶಿಲ್ದಾರ ನಿಶ್ಚಲ ನರೋನಾ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ...

ಕಾರವಾರ | ‘ಆಪರೇಷನ್ ಕ್ಲೀನ್’ ದಾಳಿ: ಫುಟ್‌ಪಾತ್ ಅತಿಕ್ರಮಣಕಾರರಿಗೆ ಮಂಜಾನೆ ಶಾಕ್

ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ...

ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ಭಾರತೀಯ ನೌಕಾಪಡೆಯ ಇತಿಹಾಸದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ 'ಕದಂಬ' ನೌಕಾನೆಲೆಯು...

ಉತ್ತರ ಕನ್ನಡ | ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ; ಅರ್ಜಿ ಆಹ್ವಾನ

ಉತ್ತರ ಕನ್ನಡ: ತೋಟಗಾರಿಕೆ ಇಲಾಖೆಯ ವತಿಯಿಂದ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ...