ಉತ್ತರ ಕನ್ನಡ | ಪೌರ ಕಾರ್ಮಿಕರ ಸೇವೆಯನ್ನೂ ಗೌರವಿಸಿ: ಚಂದ್ರಕಲಾ

Date:

ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರ ಸೇವೆಗೆ ಗೌರವ ನೀಡುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕಾರ್ಮಿಕ ಇಲಾಖೆಯಿಂದ ನಿಗಧಿಪಡಿಸಿರುವ ವೇತನವನ್ನು ನೀಡಬೇಕು. ಗುತ್ತಿಗೆದಾರರು ಇ.ಎಸ್.ಐ ಹಾಗೂ ಪಿ.ಎಫ್. ಕಡಿತ ಮಾಡುತ್ತಿರುವುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಕೆಲಸದ ಅವಧಿಯಲ್ಲಿ ಸೂಕ್ತ ಸುರಕ್ಷತಾ ಉಪಕರಣಗಳನ್ನು ಒದಗಿಸಬೇಕು. ಉತ್ತಮ ಗುಣಮಟ್ಟದ ಬೆಳಗಿನ ಉಪಹಾರ ನೀಡಬೇಕು. ಕೆಲಸದ ನಂತರ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಸೌಲಭ್ಯ ಕಲ್ಪಿಸಬೇಕು. ನಿಯಮಿತ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್‌ಗಳನ್ನು ನಡೆಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯ ಸಫಾಯಿ ಕರ್ಮಚಾರಿಗಳಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸುವ ಕೆಲಸವನ್ನು ಆದ್ಯತೆಯಲ್ಲಿ ಕೈಗೊಳ್ಳಬೇಕು. ಈಗಾಗಲೇ ನಿರ್ಮಾಣ ಪೂರ್ಣಗೊಂಡ ಮನೆಗಳನ್ನು ತಕ್ಷಣ ಹಸ್ತಾಂತರಿಸಬೇಕು. ಜಿಲ್ಲೆಯ ಯಾವ ಭಾಗದಲ್ಲೂ ಮ್ಯಾನ್ಯುಯಲ್ ಸ್ಕಾವೆಂಜಿಂಗ್ ಪದ್ಧತಿ ನಡೆಯದಂತೆ ಎಚ್ಚರವಹಿಸಬೇಕು. ಈ ಅನಿಷ್ಠ ಪದ್ಧತಿ ಕುರಿತು ಹೆಚ್ಚು ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳ ಸ್ವಚ್ಛತೆ ಮಾಡಿಸಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಫಾಯಿ ಕರ್ಮಚಾರಿಗಳ ಮೇಲೆ ಗುತ್ತಿಗೆದಾರರಿಂದ ಯಾವುದೇ ರೀತಿಯ ಶೋಷಣೆ ನಡೆಯದಂತೆ ಅಧಿಕಾರಿಗಳು ನಿಗಾವಹಿಸಬೇಕು. ವಾರದ ರಜೆ ಸೇರಿದಂತೆ ಅಗತ್ಯ ರಜೆಯನ್ನು ಅವರಿಗೆ ನೀಡಬೇಕು ಹಾಗೂ ರಜಾ ಅವಧಿಯಲ್ಲಿ ವೇತನವನ್ನು ಕಡಿತಗೊಳಿಸಬಾರದು. ಪ್ರತೀ ತಿಂಗಳು ಅವರಿಗೆ ವೇತನ ಚೀಟಿಯನ್ನು ವಿತರಿಸಬೇಕು ಎಂದು ಅವರು ಹೇಳಿದರು.ಇದೇ ಸಂದರ್ಭದಲ್ಲಿ, ಮೋರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳ ದಾಖಲಾತಿಗೆ ವಿಶೇಷ ಮೀಸಲಾತಿ ಸೌಲಭ್ಯವಿದ್ದು, ಮಕ್ಕಳನ್ನು ಇಂತಹ ಶಾಲೆಗಳಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಅಧಿಕಾರಿಗಳು ಪೋಷಕರಿಗೆ ಮಾಹಿತಿ ನೀಡಬೇಕು. ಇದರಿಂದ ಮಕ್ಕಳಿಗೆ ಅತ್ಯುತ್ತಮ ಶೈಕ್ಷಣಿಕ ಸೌಲಭ್ಯ ದೊರಕುತ್ತದೆ ಎಂದು ಆಯೋಗದ ಸಂಶೋಧನಾ ಅಧಿಕಾರಿ ಮಹಾದೇವ ಸ್ವಾಮಿ ಹೇಳಿದರು.

ಈ‌ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಕ್ರಮ ಬಡ್ಡಿ ದಂಧೆ ನಿಯಂತ್ರಣ, ಬ್ಯಾಂಕ್‌ಗಳಲ್ಲಿ ಭದ್ರತೆ ಹೆಚ್ಚಿಸಲು ಎಸ್‌ಪಿ ಸೂಚನೆ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ನಗರಸಭೆ ಪೌರಾಯುಕ್ತ ಜಗದೀಶ್ ಹುಲಿಗೆಜ್ಜಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ...

ಕಾರವಾರ | ‘ಆಪರೇಷನ್ ಕ್ಲೀನ್’ ದಾಳಿ: ಫುಟ್‌ಪಾತ್ ಅತಿಕ್ರಮಣಕಾರರಿಗೆ ಮಂಜಾನೆ ಶಾಕ್

ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ...

ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ಭಾರತೀಯ ನೌಕಾಪಡೆಯ ಇತಿಹಾಸದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ 'ಕದಂಬ' ನೌಕಾನೆಲೆಯು...

ಉತ್ತರ ಕನ್ನಡ | ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ; ಅರ್ಜಿ ಆಹ್ವಾನ

ಉತ್ತರ ಕನ್ನಡ: ತೋಟಗಾರಿಕೆ ಇಲಾಖೆಯ ವತಿಯಿಂದ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ...