ಉತ್ತರ ಕನ್ನಡ | ಅವೈಜ್ಞಾನಿಕ ಮೀನುಗಾರಿಕೆ; ಸಮುದ್ರದಲ್ಲಿ ಮೀನು ಕ್ಷಾಮ

Date:

ಬರ ಕೇವಲ ರೈತರನ್ನು ಕಾಡುತ್ತಿಲ್ಲ, ಸಮುದ್ರ ಮೀನುಗಾರಿಕೆಗೂ ಈ ಬಾರಿ ಬರ ಆವರಿಸಿದೆ. ನಿರಂತರ ಮೀನುಗಾರಿಕೆ ಚಟುವಟಿಕೆಯಲ್ಲಿ ಇರುತ್ತಿದ್ದ ಕರಾವಳಿ ಭಾಗದಲ್ಲಿ ಮೌನ ಆವರಿಸಿದೆ. ಮೂರು ತಿಂಗಳು ಮೀನು ಬೇಟೆಯಾಡಿದ್ದ ಬೋಟುಗಳಲ್ಲಿ ಬಹುತೇಕ ಮೀನುಗಾರಿಕಾ ಬೋಟ್‌ಗಳು ಮೀನು ಕೊರತೆಯ ಕಾರಣಕ್ಕೆ ದಡದಲ್ಲೇ ಲಂಗರು ಹಾಕಿವೆ.

ಆಳಸಮುದ್ರದ ಮೀನುಗಾರಿಕೆ ಮಾಡತ್ತಿದ್ದ ಪರ್ಸಿನ್ ಬೋಟ್‌ಗಳು ಕೂಡ ಬಂದರಿನಲ್ಲಿ ಬಿಡೂ ಬಿಟ್ಟಿವೆ.  ಕೆಲಸ ಹುಡುಕಿ ಹೊರರಾಜ್ಯದಿಂದ ಬರುತ್ತಿದ್ದ ಕಾರ್ಮಿಕರ ಸಂಖ್ಯೆ ಸಹ ಕ್ಷೀಣಿಸಿದೆ. ಹೀಗಾಗಿ ಮೀನುಗಾರಿಕೆ ಚಟುವಟಿಕೆಗೆ ಹಿನ್ನಡೆಯಾಗಿದ್ದು, ಸಮುದ್ರದ ದಡದಲ್ಲಿ ಹಲವು ದಿನಗಳಿಂದ ಲಂಗರು ಹಾಕಿರುವ ಸಾಲು ಬೋಟುಗಳು ಕಾಣುತ್ತಿವೆ.

ಜಿಲ್ಲೆಯಲ್ಲಿ 1,113 ಪರ್ಸಿನ್, 4,027 ಟ್ರಾಲರ್ ಬೋಟುಗಳಿವೆ. ಬಹುತೇಕ ಬಂದರುಗಳಲ್ಲಿ ಪರ್ಸಿನ್, ಟ್ರಾಲರ್ ಬೋಟುಗಳು ದಡದಲ್ಲೇ ಉಳಿದಿದ್ದು, ಮೀನು ಬೇಟೆಗೆ ಉತ್ಸಾಹ ತೋರಿಸುತ್ತಿಲ್ಲ. ಮೀನುಗಳು ಸಿಗದೆ, ಮೀನುಗಾರಿಕೆ ಆಧರಿಸಿ ಜೀವನ ಸಾಗಿಸುತ್ತಿರುವ 15ಸಾವಿರಕ್ಕೂ ಹೆಚ್ಚು ಕುಟುಂಬಗಳು ಅತಂತ್ರವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಳ ಸಮುದ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮೀನುಗಳು ಸಿಗುತ್ತಿಲ್ಲ. ದಡಕ್ಕೆ ಸಮೀಪದಲ್ಲಿ ಮೀನು ಸಿಗುತ್ತಾವಾದರೂ, ಲೋಳೆ ಮೀನುಗಳು ಹೆಚ್ಚಾಗಿರುವುದರಿಂದ ಬಲೆ ಬೀಸುವುದು ಕಷ್ಟವಾಗಿದೆ. ಇದರಿಂದ ಮೀನು ಸಿಗದೆ ಸಂಕಷ್ಟ ಎದುರಿಸುತ್ತಿದ್ದೇವೆ. ಇಂತಹ ಸ್ಥಿತಿ ಇದೇ ವರ್ಷ ಎದುರಾಗಿದೆ ಎಂದು ಬೋಟ್‌ ಮಾಲೀಕರು ಸಂಕಷ್ಟ ತೋಡಿಕೊಳ್ಳುತ್ತಾರೆ.

ಒಂದು ತಿಂಗಳಿನಿಂದಲೂ ಮೀನು ಸಿಗದೆ ಆರ್ಥಿಕ ಸಂಕಷ್ಟ ಎದುರಾಗಿದೆ. ಬೋಟುಗಳನ್ನು ನೀರಿಗಿಳಿಸಿದರೆ ಕನಿಷ್ಠ ₹15 ಸಾವಿರ ಮೌಲ್ಯದ ಮೀನುಗಳಾದರೂ ಲಭಿಸಬೇಕು. ಆಗ ಮಾತ್ರ ಡೀಸೆಲ್ ವೆಚ್ಚ, ಕಾರ್ಮಿಕರ ವೇತನದ ವೆಚ್ಚ ನಿಭಾಯಿಸಬಹುದು. ಆದರೆ, ಇತ್ತೀಚಿನ ದಿನಗಳಲ್ಲಿ ಒಂದು ಸಾವಿರ ಮೌಲ್ಯದಷ್ಟು ಮೀನು ಕೂಡ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಬಿನ್ ಬೋಪಣ್ಣ, ಮಳೆ ಕೊರತೆ ಜೊತೆಗೆ ಹವಾಮಾನ ವೈಪರೀತ್ಯದ ಕಾರಣ ಮೀನು ಇಳುವರಿ ಕಡಿಮೆಯಾಗಿರುವ ಸಾಧ್ಯತೆ ಇದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಮಸ್ಯೆಯಾಗಿ ಜನವರಿಯಲ್ಲಿ ಎಲ್ಲವೂ ಸರಿಯಾಗಿತ್ತು ಎಂದು ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನೆರೆಯ ಗೋವಾ ಮಹಾರಾಷ್ಟ್ರ ಭಾಗದಲ್ಲಿ ವ್ಯಾಪಕವಾಗಿದೆ ಅವೈಜ್ಞಾನಿಕ ಮೀನುಗಾರಿಕೆಯಿಂದ ಸಮುದ್ರದಲ್ಲಿ ಮೀನು ಕ್ಷಾಮ ಉಂಟಾಗಿದೆ. ಮೀನು ಮರಿ ಮೊಟ್ಟೆಗಳನ್ನು ಹಾಳುಗೆಡವುವ ಬುಲ್ ಟ್ರಾಲ್ ಬೆಳಕಿನ ಮೀನುಗಾರಿಕೆ ಚಟುವಟಿಕೆ ಅವ್ಯಾಹತವಾಗಿ ನಡೆದಿರುವುದು ಈಗ ಮೀನು ಕೊರತೆ ಎದುರಾಗಲು ಮುಖ್ಯ ಕಾರಣ ಎನ್ನುತ್ತಾರೆ ತಜ್ಞರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...