ವಿ.ಬಿ.ಜಿ ರಾಮ್​ ಜಿ ಯೋಜನೆ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಪಾಲಿಗೆ ಮರಣ ಶಾಸನ : ಡಾ.ಅನಿಲ್ ಕುಮಾರ್

Date:

ಬಾಗೇಪಲ್ಲಿ: ನೂತನವಾಗಿ ಜಾರಿಗೆ ತಂದಿರುವ ವಿ.ಬಿ ಜಿ ರಾಮ್​ ಜಿ ಕಾಯ್ದೆಯನ್ನು ಹಿಂಪಡೆದು ಹಿಂದಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಹಾಗೂ ಸಿಪಿಐಎಂ ಪಕ್ಷದ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ಪಟ್ಟಣದ ಡಾ.ಅಂಬೇಡ್ಕರ್ ಪುಥಳಿ ಮುಂದೆ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಉಪವಾಸ ಸತ್ಯಾಗ್ರಹ ನಡೆಸಿದರು.

ಕೇಂದ್ರ ಸರ್ಕಾರಿ ಜಾರಿಗೆ ತಂದಿರುವ ವಿ.ವಿ ಜಿ ರಾಮ್​ ಜಿ ಯೋಜನೆ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಿದೆ. ಇದು ವಲಸೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಹಾಗೂ ಪ್ರಜಾ ವೈದ್ಯಾ ಡಾ.ಅನಿಲ್ ಕುಮಾರ್ ಅವುಲಪ್ಪ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ 2025ರಲ್ಲಿ ಕೃಷಿ ಕೂಲಿಕಾರರಿಗೆ ಉದ್ಯೋಗ ಹಕ್ಕಿಗಾಗಿ ಕಾಯ್ದೆಯನ್ನು ಅನುಷ್ಠಾನ ಮಾಡಲಾಗಿತ್ತು. ಗ್ರಾಮೀಣ ಪ್ರದೇಶದಿಂದ ನಗರದತ್ತ ಕೃಷಿ ಕೂಲಿ ಕಾರ್ಮಿಕರ ವಲಸೆ ತಡೆಯುವುದು ಸಮಾನ ಕೂಲಿ ಆರ್ಥಿಕ ಚೈತನ್ಯದಿಂದ ಗ್ರಾಮ ಸ್ವರಾಜ್ಯವನ್ನು ಕಾಣಲು ಸಾಧ್ಯವಾಗುತ್ತಿತ್ತು ಸಾವಿರಾರು ಕೆರೆ ಕಟ್ಟೆಗಳು ಕಾಲುವೆಗಳು ಅಭಿವೃದ್ಧಿಯಾಗಿದ್ದವು, ಕೃಷಿ ಚಟುವಟಿಕೆಗಳಿಗೂ ಕಾಯ್ದೆ ಅನುಕೂಲವಾಗಿತ್ತು. ಒಟ್ಟಾರೆ ಗ್ರಾಮೀಣಾಭಿವೃದ್ಧಿಯಲ್ಲಿ ನರೇಗಾ ಪ್ರಮುಖ ಪಾತ್ರ ವಹಿಸಿತ್ತು.
ಆದರೆ ಇದೀಗ ಜಾರಿಯಾಗುತ್ತಿರುವ ವಿ.ಬಿ. ಜಿ ರಾಮ್​ ಜಿ ಯೋಜನೆ ಎಂ.ಜಿ.ಎನ್​.ಆರ್​.ಇ.ಜಿ.ಎ ಆಶಯಗಳಿಗೆ ತದ್ವಿರುದ್ಧವಾಗಿದೆ. ಗುರ್ತಿಸಿದ ಪ್ರದೇಶಗಳಿಗಷ್ಟೇ ಅನುದಾನ ಮತ್ತು ಕೆಲಸ ದೊರೆಯುತ್ತಿದೆ ಇದರಿಂದ ಕೆಲಸ ಕೇಳುವ ಹಕ್ಕು ಮತ್ತು ಬೇಡಿಕೆ ಸಂಪೂರ್ಣ ನಾಶವಾಗಲಿದೆ.

ಶೇ.60:40 ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುದಾನ ನೀಡಬೇಕು ಎಂಬ ನಿಯಮವನ್ನು ಸೇರಿಸಲಾಗಿದೆ ಆರ್ಥಿಕ ಹಿನ್ನಡೆಯಲ್ಲಿರುವ ರಾಜ್ಯಗಳ ಬಳಿ ಶೇ.40 ರಷ್ಟು ಅನುದಾನವಿಲ್ಲದೆ ಕೂಲಿ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗುತ್ತದೆ ಗ್ರಾಮೀಣಾಭಿವೃದ್ಧಿಯೂ ಕುಂಠಿತವಾಗಲಿದೆ ಲಿಂಗ ಸಮಾನತೆ ಮತ್ತು ಸಮಾನ ಕೂಲಿಗೆ ದೊಡ್ಡ ಪೆಟ್ಟು ಬೀಳಲಿದೆ ಗುತ್ತಿಗೆದಾರರಿಗೆ ನರೇಗಾ ಯೋಜನೆಯಲ್ಲಿ ನಿಷೇಧಿಸಲಾಗಿತ್ತು. ಆದರೆ ಈಗ ಗುತ್ತಿಗೆದಾರರಿಗೆ ಅವಕಾಶ ಮಾಡಿಕೊಡಲಾಗಿದ್ದು ಉಳ್ಳವರಿಗೆ ಅನುಕೂಲ ಮಾಡುವ ಯೋಜನೆ ಇದಾಗಿದೆ ಎಂದರು.

ಜಿ ರಾಮ್​ ಜಿ ಮತ್ತೊಂದು ದುರ್ಬಳಕೆಯ ಯೋಜನೆಯಾಗಿದೆ ಸ್ವರಾಜ್ಯದ ಕಸನನ್ನು ಕಂಡ ಮಹಾತ್ಮ ಗಾಂಧಿಯನ್ನು ಮರೆ ಮಾಚಲಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಯೋಜನೆಯನ್ನು ಹಿಂಪಡೆಯಬೇಕು ಹಿಂದಿನ ನರೇಗಾ ಯೋಜನೆಯನ್ನು ಉಳಿಸಬೇಕು ಎಂದು ಹೇಳಿದರು.

ಸಿಪಿಐಎಂ ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮ ರೆಡ್ಡಿ ಮಾತನಾಡಿ ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ವರ್ಷವಿಡೀ ಉದ್ಯೋಗ ಒದಗಿಸುತ್ತಾ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ‘ವಿಬಿ ಗ್ರಾಮ್ ಜಿ’ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಇದು ಮಹಾತ್ಮ ಗಾಂಧಿಯವರ ಚಿಂತನೆ ಮತ್ತು ಅವರ ಗ್ರಾಮ ಸ್ವರಾಜ್ಯದ ಆಶಯದ ಮೇಲಿನ ಗದಾಪ್ರಹಾರ. ಕೇಂದ್ರ ಸರ್ಕಾರವು ಈ ಜನವಿರೋಧಿ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಮರು ಜಾರಿ ಮಾಡುವ ವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಸಿಪಿಐಎಂ ಪಕ್ಷದ ಮುಖಂಡ ಚನ್ನರಾಯಪ್ಪ ಮಾತನಾಡಿ ಮನರೇಗಾ ಪುನರ್ಸ್ಥಾಪನೆಯಾಗುವವರೆಗೂ ಹೋರಾಟ
ಇಂತಹ ಜನವಿರೋಧಿ ಕಾಯ್ದೆ ತರಲು ಕೇಂದ್ರಕ್ಕೆ ಆರ್ ಎಸ್ ಎಸ್ ಪ್ರೇರಣೆ ನೀಡಿದ್ದು ಬಡಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಬಾರದು ಎಂಬುದು ಬಿಜೆಪಿ ಆರ್ ಎಸ್ ಎಸ್ ನ ದುರುದ್ದೇಶ. ಆದ್ದರಿಂದ ಕೇಂದ್ರದ ಈ ಕಾಯ್ದೆಯನ್ನು ರದ್ದುಗೊಳಿಸಿ ಮನರೇಗಾ ಹೋರಾಟವನ್ನುಪುನರ್ಸ್ಥಾಪಿಸಬೇಕೆಂದು ಹೋರಾಟ ನಡೆಸಲಾಗುತ್ತಿದೆ ಈ ಸಂಬಂಧ ಗ್ರಾಮ ತಾಲ್ಲುಕು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಫೆಬ್ರವರಿ 12 ಎಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ತಂಗಿಯನ್ನು ನಿಂದಿಸಿದ್ದಕ್ಕೆ 5 ಬಾರಿ ದೂರು ಕೊಟ್ಟರೂ ಪೊಲೀಸರು ಕ್ಯಾರೇ ಅನ್ನಲಿಲ್ಲ, ಅದಕ್ಕೆ ನಾನೇ ಕೊಂದೆ!

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ನಾಗರಾಜ್ ಮಸಣ ಕಾರ್ಮಿಕ ಸಂಘಟನೆಯ ಜಿಲ್ಲಾ ಸಂಚಾಲಕ ಮುನಿಯಪ್ಪ ಕೆ ದಲಿತ ಹಕ್ಕುಗಳ ಸಮಿತಿ ರಾಜ್ಯ ಕಾರ್ಯದರ್ಶಿ ಜಿ ಕೃಷ್ಣಪ್ಪ ಸಿಐಟಿಯು ಮುಖಂಡ ಮುಸ್ತಾಫ,ತಾಲ್ಲೂಕು ಸಮಿತಿ ಸದಸ್ಯರು. ರಫಿಕ್,ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಡಿ.ಟಿ ಮುನಿಸ್ವಾಮಿ ,ಅಶ್ವತ್ಥಪ್ಪಕೃಷ್ಣಪ್ಪ, ರಾಮಾಂಜಿ ಹಾಗೂ ಕಾರ್ಮಿಕರು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...