ಶಿಡ್ಲಘಟ್ಟ | ಮಾಜಿ ಸಚಿವ ವಿ.ಮುನಿಯಪ್ಪ ಹುಟ್ಟುಹಬ್ಬ ಆಚರಣೆ

Date:

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಪಕ್ಷದಲ್ಲಿ ಸಂಘಟನಾ ಚತುರ ಎಂದು ಖ್ಯಾತಿ ಹೊಂದಿರುವ ಮಾಜಿ ಸಚಿವ ಹಾಗೂ ಮಾಜಿ ಶಾಸಕ ವಿ.ಮುನಿಯಪ್ಪ ಅವರಿಗೆ 78ರ ಹುಟ್ಟು ಹಬ್ಬದ ಸಂಭ್ರಮದ ಹಿನ್ನೆಲೆ ಬೆಳಗ್ಗೆಯಿಂದಲೇ ಅವರ ನಿವಾಸ ಸ್ಥಳ ಹಂಡಿಗ್ನಾಳ ಗ್ರಾಮಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳು ಮೈಸೂರು ಪೇಟ ತೊಡಿಸಿ ಹೂಮಾಲೆ ಹಾಕಿ, ಕೇಕ್‌ ಕತ್ತರಿಸುವ ಮೂಲಕ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಕರ್ನಾಟಕ ರಾಜ್ಯದ ರೇಷ್ಮೆ, ಇಂಧನ ಮತ್ತು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರಾಗಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ ಮಾಜಿ ಸಚಿವ ವಿ ಮುನಿಯಪ್ಪ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಈಗಲೂ ಶಾಶ್ವತವಾಗಿ ನಿಂತಿವೆ.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತ ಕೇಂದ್ರ ತಾಲೂಕ ಕಚೇರಿ, ಸಾಮರ್ಥ್ಯ ಸೌಧ, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜೋಡಿ ರಸ್ತೆ, ಪ್ರವಾಸಿ ಮಂದಿರ ನವೀಕರಣ, ಶಿಡ್ಲಘಟ್ಟ ನಗರ ಸಭೆಗೆ ಆದಾಯವನ್ನು ಹೆಚ್ಚಿಸಲು ವಾಣಿಜ್ಯ ಮಳಿಗೆಗಳ ನಿರ್ಮಾಣ ಮತ್ತು ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ನೆಹರು ಕ್ರೀಡಾಂಗಣವನ್ನು ನಿರ್ಮಿಸಿ, ಸರ್ಕಾರಿ ಶಾಲೆಗಳ ಮತ್ತು ಅಂಗನವಾಡಿ ಕೇಂದ್ರಗಳ ನಿರ್ಮಾಣದ ಜೊತೆಗೆ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೊಸದಾಗಿ ನಿರ್ಮಾಣ ಮಾಡಿ ಅಭಿವೃದ್ಧಿಯ ಹರಿಕಾರ ಎಂದು ಹೆಸರು ಮಾಡಿದ್ದ ಮಾಜಿ ಸಚಿವರ ಕಾರ್ಯವೈಖರಿಯನ್ನು ಈಗಲೂ ಸಹ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಿಸಿದಕ್ಕಾಗಿ ಸಂತಸ ವ್ಯಕ್ತಪಡಿಸಿದ ಮಾಜಿ ಸಚಿವರು, ತಮ್ಮ ಅಭಿಮಾನ ಪ್ರೀತಿಗೆ ನಾನು ಸದಾ ಚಿರಋಣಿಯಾಗಿರುತ್ತೇನೆ ತಮ್ಮೆಲ್ಲರ ಸಹಕಾರ ಮತ್ತು ಬೆಂಬಲದಿಂದ ಕ್ಷೇತ್ರದ ಶಾಸಕನಾಗಿ ಮತ್ತು ಮಂತ್ರಿಯಾಗಿ ಕೈಲಾದಷ್ಟು ಸೇವೆ ಮಾಡಿದ್ದೇನೆ ಈ ಕ್ಷೇತ್ರ ಇಡೀ ಕರ್ನಾಟಕದಲ್ಲಿ ಮಾದರಿಯಾಗಿ ಅಭಿವೃದ್ಧಿ ಹೊಂದಬೇಕು ಅದೇ ನನ್ನ ಕನಸು ಅದನ್ನು ನನಸು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್. ಮುನಿಯಪ್ಪ,ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವಿ.ಸುಬ್ರಮಣಿ, ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು, ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಆನಂದ್, ಕೆಎಂಎಫ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ ಮುತ್ತೂರು ಚಂದ್ರೇಗೌಡ, ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಭೀಮೇಶ್, ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ಸುಗಟೂರು ನಾಗೇಶ್, ದಾಮೋದರ್, ಮುರಳಿ, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...