ಬೀದರ್‌ | ರಾಜಾಶ್ರಯ ಇಲ್ಲದೇ ರಚಿತಗೊಂಡಿದ್ದು ವಚನ ಸಾಹಿತ್ಯ : ಶಿವಕುಮಾರ್‌ ಕಟ್ಟೆ

Date:

ಯಾವುದೇ ರೀತಿಯ ರಾಜಾಶ್ರಯ ಇಲ್ಲದೇ ರಚಿತಗೊಂಡ ವಚನ ಸಾಹಿತ್ಯಕ್ಕೆ ಭಾರತೀಯ ಸಾಹಿತ್ಯ ಪರಂಪರೆಯಲ್ಲಿಯೇ ಹೆಚ್ಚಿನ ಮೌಲ್ಯವಿದೆ ಎಂದು ಸಾಹಿತಿ ಶಿವಕುಮಾರ ಕಟ್ಟೆ ಹೇಳಿದರು.

ವಚನಾಮೃತ ಕನ್ನಡ ಸಂಘದಿಂದ ಜ್ಞಾನನಿಧಿ ಚೆನ್ನಬಸವಣ್ಣನವರ ಕುರಿತು ನಗರದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ʼಲೋಕಸಭೆ, ವಿಧಾನಸಭೆಯಲ್ಲಿ ಸಂಸದೀಯ ವ್ಯವಾಹಾರಗಳ ಸಚಿವರು ಹೇಗೆ ಕಾರ್ಯಕಲಾಪಗಳನ್ನು ನಡೆಸಿಕೊಂಡು ಹೋಗುತ್ತಾರೋ ಹಾಗೆಯೇ 12ನೇ ಶತಮಾನದಲ್ಲಿ ಕಲ್ಯಾಣದ ಅನುಭವ ಮಂಟಪದ ಚರ್ಚೆ, ಸಂವಾದ ಎಲ್ಲವುಗಳು ಚೆನ್ನಬಸವಣ್ಣನವರು ಬರಹ ರೂಪದಲ್ಲಿ ದಾಖಲಿಸಿದ್ದರುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕ ಶಿವಲಿಂಗ ಹೇಡೆ ವಿಶೇಷ ಉಪನ್ಯಾಸ ನೀಡಿ, ʼಚೆನ್ನಬಸವಣ್ಣ ಅವಿರಳ ಜ್ಞಾನಿ, ಷಟಸ್ಥಲ ಸಿದ್ಧಾಂತದ ರೂವಾರಿ. ಬಾಲ್ಯದಲ್ಲಿಯೇ ಒಳ್ಳೆಯ ಜ್ಞಾನ ಸಂಪಾದಿಸುವ ಪರಿಸರ ಸಿಕ್ಕಿತು. ಬಸವಣ್ಣನವರು ಗುರುಗಳ ಹತ್ತಿರ ಪಾಠ ಕಲಿಯುವಾಗ ದೂರದಿಂದಲೇ ಮಾತುಗಳನ್ನು ಕಿವಿಗೊಟ್ಟು ಕೇಳಿ ಅಪಾರವಾದ ಜ್ಞಾನ ಸಂಪಾದಿಸಿದ್ದರು. ನಮ್ಮ ಬದುಕು ಹಸನಾಗಿಸಲು ನಾವು ಹೇಗೆ ಸಂವಿಧಾನ ರಚಿಸಿಕೊಂಡಿದ್ದೆವೊ ಹಾಗೆಯೇ ಅಂದಿನ ಬದುಕಿಗೆ ಅಷ್ಟಾವರಣ, ಪಂಚಾಚಾರ, ಷಟಸ್ಥಲದ ಚೌಕಟ್ಟು ಹಾಕಿಕೊಂಡು ಸಾಧನೆಗೆ ಮೆಟ್ಟಿಲುಗಳನ್ನು ಹಾಕಿಕೊಟ್ಟವರು ಚೆನ್ನಬಸವಣ್ಣʼ ಎಂದು ಪ್ರತಿಪಾದಿಸಿದರು.

ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪಾ ಮಾಸಿಮಾಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಸಂಜೀವಕುಮಾರ ಅತಿವಾಳೆ, ಜಾನಪದ ಅಕಾಡೆಮಿ ಸಹ ಸದಸ್ಯ ವಿಜಯಕುಮಾರ ಸೋನಾರೆ, ಪರಮೇಶ್ವರ ಭೂಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು.

WhatsApp Image 2025 01 10 at 6.06.13 PM
ಕಾರ್ಯಕ್ರಮದಲ್ಲಿ ಸಾಧಕರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಸಾಹಿತಿಗಳಾದ ಎಸ್.ಎಸ್. ಹೊಡಮನಿ, ರಮೇಶ ಬಿರಾದಾರ, ನಿಜಲಿಂಗ ರಗಟೆ, ಎಂ.ಎ.ಪಾಟೀಲ, ಬಸವಾ ಮಳ್ಳಿ, ಉಮಾದೇವಿ ಬಾಪೂರೆ, ರೇಣುಕಾ ಮಳ್ಳಿ, ಸ್ವರೂಪರಾಣಿ ನಾಗೂರೆ, ಅಂಬಿಕಾ ಬಿರಾದಾರ, ಗೀತಾಂಜಲಿ ಪಾಟೀಲ ಚೆನ್ನಬಸವಣ್ಣನವರ ಕುರಿತು ಕವಿತೆ ವಾಚಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಆಸ್ತಿಗಾಗಿ ತಂದೆ, ತಾಯಿಯನ್ನು ಕೊಂದ ಮಗ; ಬೆಚ್ಚಿಬಿದ್ದ ಜನ

ಜಿಜಾಮಾತಾ ಕನ್ಯಾ ಪ್ರೌಢ ಶಾಲೆಯ ಮಕ್ಕಳು ನಾಡಗೀತೆ ನಡೆಸಿಕೊಟ್ಟರು. ಸಂತೋಷ ಮಂಗಳೂರೆ ನಿರೂಪಿಸಿದರು. ಪರಮೇಶ್ವರ ಬಿರಾದಾರ ಸ್ವಾಗತಿಸಿದರು, ಬಸವರಾಜ ಬಿರಾದಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...