ಬೀದರ್‌ | ವಚನಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪ್ರೇರಣೆ : ಡಾ. ಗಂಗಾಬಿಕಾ ಪಾಟೀಲ್

Date:

ಮಕ್ಕಳ ಮನಸ್ಸು ಹಸಿಗೋಡೆಯಂತೆ ಅವರಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಉತ್ತಮ ಸಂಸ್ಕಾರ ಬಿತ್ತಿದರೆ ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ರೂಪಗೊಳ್ಳಲು ಸಾಧ್ಯ ಎಂದು ಬಸವ ಸೇವಾ ಪ್ರತಿಷ್ಠಾನ ಬಸವಗಿರಿಯ ಅಧ್ಯಕ್ಷರಾದ ಡಾ.ಗಂಗಾಂಬಿಕಾ ಪಾಟೀಲ್ ನುಡಿದರು.

‌ಬೀದರ್ ನಗರದ ಶರಣ ಉದ್ಯಾನದಲ್ಲಿ ಬಸವ ಸೇವಾ ಪ್ರತಿಷ್ಠಾನ ವತಿಯಿಂದ ನಡೆದ ಶರಣ ಸಂಗಮ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ಜಯಂತ್ಯುತ್ಸವ, ಮಕ್ಕಳ ಸಮಾವೇಶ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿಕೊಂಡು ಮಾತನಾಡಿದರು. ‌

ʼಮಕ್ಕಳಲ್ಲಿ ಬಸವಾದಿ ಶರಣರ ವಚನಗಳ ಮೌಲ್ಯಗಳನ್ನು ಮಕ್ಕಳ ಬಿತ್ತಿ ಅವರ ವ್ಯಕ್ತಿತ್ವ ವಿಕಸನಕ್ಕೆ ಪ್ರೇರಣೆ ನೀಡಬೇಕು. ಮಕ್ಕಳಲ್ಲಿ ಅದ್ಬುತವಾದ ಶಕ್ತಿಯಿರುತ್ತದೆ. ಅವರನ್ನು ಕಡೆಗಣಿಸದೆ ಅವರಿಗೆ ಉತ್ತಮ ಸಂಸ್ಕಾರ ನೀಡಬೇಕು. ಇಂದಿನ ಮಕ್ಕಳೇ ನಾಳಿನ ಶರಣರಾಗುತ್ತಾರೆ. ನಮ್ಮನ್ನು ನೋಡಿ ಮಕ್ಕಳು ಅನುಕರಿಸುವುದರಿಂದ ನಮ್ಮ ನಡೆ-ನುಡಿ ಒಂದಾಗಿರಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಮಕ್ಕಳ ಪರಿಷತ್ತು ಅಧ್ಯಕ್ಷೆ ಪಾರ್ವತಿ ಸೋನಾರೆ ಮಾತನಾಡಿ, ʼಮಕ್ಕಳಲ್ಲಿ ಅದ್ಭುತವಾದ ಪ್ರತಿಭೆ ಮತ್ತು ಶಕ್ತಿಯಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕು. ಎಳೆಯ ಮಕ್ಕಳಿಗೆ ವಚನಗಳನ್ನು ಮುಟ್ಟಿಸುವಂತಹ ಇಂತಹ ಕಾರ್ಯಗಳು ಶ್ಲಾಘನೀಯʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೀದರ ಸರಕಾರಿ ಬಾಲಕರ ಬಾಲಮಂದಿರದ ಅಧಿಕ್ಷಕರಾದ ರೂಪಾ ಕೋಟೆಗೌಡರ್ ಉದ್ಘಾಟಿಸಿ ಮಾತನಾಡಿ, ʼಸಂಸ್ಕಾರಯುತ ಮಕ್ಕಳೇ ದೇಶದ ನಿಜವಾದ ಆಸ್ತಿ, ಜೀವನ ಸಾರ್ಥಕವಾಗಲು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ವಚನಗಳು ಮಾನವೀಯ ಮೌಲ್ಯಗಳ ಆಗರವಾಗಿವೆʼ ಎಂದರು.

ಪಾಪನಾಶ ದೇವಸ್ಥಾನ ಮಂದಿರದ ಅಧ್ಯಕ್ಷ ಚಂದ್ರಕಾಂತ ಶೆಟಕಾರ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು. ಬಸವಣಪ್ಪಾ ನೇಳಗೆ, ಅಶೋಕ ಮಾನಕಾರಿ ಉಪಸ್ಥಿತರಿದ್ದರು.

ಮಕ್ಕಳಾದ ಪ್ರಿಶಾ ಕ್ಯಾಸ, ದಕ್ಷೇಶ ಸಾವಲೆ ಧ್ವಜಾರೋಹಣಗೈದರು. ಬಸವಕಿರಣ, ಅರುಣ ಗುರುಪೂಜೆ ನಡೆಸಿಕೊಟ್ಟರು,
ಜಗದೇವಿ ಸಂಜುಕುಮಾರ ಚಾಂಬಳೆ ಭಕ್ತಿ ದಾಸೋಹಗೈದರು. ನೇಹಾ ವೀರಶೆಟ್ಟಿ ನಿರೂಪಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ; ವೃದ್ಧನ ಬಂಧನ

ಗಮನ ಸೆಳೆದ ಮಕ್ಕಳ ಮಾತು: ಮಕ್ಕಳು ಅಷ್ಠಾವರಣ, ಪಂಚಾಚಾರ, ಷಟಸ್ಥಲ, ಶರಣ ಚರಿತ್ರೆ ಹಾಗೂ ಅನುಭವ ಮಂಟಪ ಕುರಿತು ಮಾತನಾಡಿ ಸಭಿಕರ ಗಮನ ಸೆಳೆದರು. ಮಕ್ಕಳಿಂದಲೇ ವಚನ ಪಠಣ, ವಚನ ನೃತ್ಯಗಳು ಜರುಗಿದವು. ಪ್ರೊ. ಸಂಗ್ರಾಮ ಎಂಗಳೆ ಅವರ ನಿರ್ದೇಶನದಲ್ಲಿ ಮಕ್ಕಳಿಂದ ಮೂಡಿ ಬಂದ ʼಭೂಮಿತಾಯಿʼ ನಾಟಕ ಗಮನ ಸೆಳೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...