ಬೀದರ್‌ | ವಚನಕಾರರ ಜೀವನ ಮೌಲ್ಯಗಳು ಮನುಕುಲಕ್ಕೆ ಮಾದರಿ : ಸಿದ್ರಾಮಪ್ಪ ಮಾಸಿಮಾಡೆ

Date:

ವಚನ ಸಾಹಿತ್ಯವನ್ನು ಅಧ್ಯಯನ ಮತ್ತು ಬೋಧನೆಗೆ ಸೀಮಿತಗೊಳಿಸದೆ ಅದರ ವಿಚಾರಗಳನ್ನು ಮೈಗೂಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದು ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.

ವಚನಾಮೃತ ಕನ್ನಡ ಸಂಘದಿಂದ ನಗರದಲ್ಲಿ ಏರ್ಪಡಿಸಿದ್ದ ವಚನಕಾರ್ತಿಯರ ಕುರಿತ ಕವಿಗೋಷ್ಠಿಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ, ʼಮಾನವೀಯ ಮೌಲ್ಯ ಒಳಗೊಂಡಿರುವ ಬದುಕು ಕಟ್ಟಿಕೊಳ್ಳಲು ವಚನ ಸಾಹಿತ್ಯದ ಅಧ್ಯಯನ ಹಾಗೂ ಅದರ ಪಾಲನೆ ಪ್ರಸ್ತುತ ತುಂಬ ಅಗತ್ಯವಾಗಿದೆ.

ʼಬಸವಾದಿ ಶರಣರು ನುಡಿದಂತೆ ನಡೆದು ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಶರಣರ ಬದುಕೇ ನಮಗೆ ಆದರ್ಶವಾಗಿದೆ. ಬಸವಾದಿ ಶರಣರ ವಚನಗಳಲ್ಲಿ ನೈತಿಕತೆ, ಮಾನವೀಯ ಮೌಲ್ಯಗಳ ಸಾರವನ್ನು ಪ್ರತಿ ಮನ-ಮನೆಗೂ ಮುಟ್ಟಿಸುವ ಧೈಯ ವಚನಾಮೃತ ಕನ್ನಡ ಸಂಘ ಹೊಂದಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 04 at 4.11.19 PM 1 1

ಸಾಹಿತ್ಯಾರಾಧಕ ಗುರುಸಿದ್ಧಪ್ಪಾ ಬಿರಾದರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ʼವಿಶ್ವಕ್ಕೆ ಪ್ರಜಾಪ್ರಭುತ್ವ ಕಲ್ಪನೆ ಮೊದಲು ನೀಡಿದ್ದು ಬಸವಾದಿ ಶರಣರು, ಅಂತಹ ಅಮೂಲ್ಯ ಸಾಹಿತ್ಯದ ಸಾರ ನೀಡಿದ ಶರಣರು ನಮಗೆ ಆದರ್ಶರಾಗಿದ್ದಾರೆ. ಶರಣರ ವಚನಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಳ್ಳೋಣʼ ಎಂದರು.

ಉಪನ್ಯಾಸಕಿ ಡಾ.ಜಗದೇವಿ ಮೈನಾಳೆ ಮಾತನಾಡಿ, ʼವಚನಾಕಾರ್ತಿಯರು ತಮ್ಮ ವಚನಗಳ ಮುಖಾಂತರ ಮಾನವ ಕುಲದ ಸಂಬಂಧ ಗಟ್ಟಿಗೊಳಿಸುವ ಕೆಲಸ ಮಾಡಿದ್ದಾರೆ. ಸ್ತ್ರೀಯರಿಗೆ ಸಮಾನತೆ ಇಲ್ಲದ ಕಾಲಘಟ್ಟದಲ್ಲಿ ಪುರುಷರೊಂದಿಗೆ ಕಾಯಕದಲ್ಲಿ ತೊಡಗಿ ಸಮಾನತೆ ಎತ್ತಿ ಹಿಡಿದಿದ್ದರು. ವಚನಕಾರ್ತಿಯರ ವಚನಗಳಿಂದ ಸಮಾಜದಲ್ಲಿನ ಶೋಷಣೆ, ಹಿಂಸೆ, ಅನಾಚಾರಗಳು ನಿರ್ಮೂಲನೆ ಮಾಡಬಹುದುʼ ಎಂದು ವಿಶ್ಲೇಷಿಸಿದರು.

ಇದೇ ಸಂದರ್ಭದಲ್ಲಿ ಸಾಹಿತಿಗಳಾದ ಶಂಭುಲಿಂಗ ವಾಲ್ಗೊಡ್ಡಿ, ಸುಭಾಷ ಮಾಸಿಮಾಡೆ, ಅಶೋಕ ಬೋಗಾರ, ಪ್ರವೀಣ ಅವರನ್ನು ಸನ್ಮಾನಿಸಲಾಯಿತು.

ಬಸವಭಕ್ತಿ ಮಾಶೆಟ್ಟಿ, ಎಸ್.ಎಸ್. ಹೊಡಮನಿ, ಹಂಸಕವಿ, ಬಾಲಾಜಿ ಕುಂಬಾರ, ನಾಗೇಶ ಸ್ವಾಮಿ, ಶ್ರೀದೇವಿ ಸೋಮಶೆಟ್ಟಿ, ಶಿಲ್ಪಾ ಮಜಗೆ, ಭಕ್ತಿ ಪಾಟೀಲ್ ವಚನಕಾರ್ತಿಯರ ಕುರಿತಾದ ಸ್ವರಚಿತ ಕವನ ವಾಚಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಕಾರ್ಯಕ್ರಮದಲ್ಲಿ ಪ್ರಮುಖರಾದ ಬಿ.ಎಂ.ಬಿರಾದಾರ್, ಸಿದ್ರಾಮ ಸಪಾಟೆ, ಸತ್ಯಮೂರ್ತಿ, ಬಸಯ್ಯಾ ಸ್ವಾಮಿ, ಬಸವರಾಜ ಪಾಟೀಲ್, ಬಸವರಾಜ ರುದನೂರ, ಸಂತೋಷ ಮಂಗಳೂರೆ, ಸ್ವರೂಪರಾಣಿ ನಾಗೂರೆ, ಸುಮೀತ, ಡಾ.ಸೂರ್ಯಕಾಂತ ಚಿದ್ರೆ, ಪದ್ಮರಾಜ ಅಜಿತಮಣಿ, ರೇಣುಕಾ ಎನ್.ಬಿ., ಶ್ರೀಕಾಂತ ಬಿರಾದಾರ್ ಸೇರಿದಂತೆ ಸಾಹಿತ್ಯಾಸಕ್ತರು ಉಪಸ್ಥಿತರರಿದ್ದರು. ಬಸವರಾಜ ಬಿರಾದಾರ್ ಸ್ವಾಗತಿಸಿದರು. ಪರಮೇಶ್ವರ ಬಿರಾದಾರ್ ನಿರೂಪಿಸಿದರು. ಬಸವರಾಜ ಮೂಲಗೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...