ಬೀದರ್‌ | ಕನ್ನಡ ಭಾಷೆಯನ್ನು ದೇವ ಭಾಷೆಯನ್ನಾಗಿ ಮಾಡಿದ್ದು ವಚನಕಾರರು

Date:

ಜಗತ್ತಿನಲ್ಲಿ ಕನ್ನಡ ಭಾಷೆ, ಸರ್ವ ಶ್ರೇಷ್ಠ ಭಾಷೆಯಾಗಿದೆ. ಕನ್ನಡ ಭಾಷೆಯನ್ನು ದೇವಭಾಷೆಯನ್ನಾಗಿ ಮಾಡಿದ ಕೀರ್ತಿ ಶರಣ ಸಂಕುಲಕ್ಕೆ ಸಲ್ಲುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣ ಪಡೆದರೆ ಉತ್ತಮ ಜೀವನವನ್ನು ನಡೆಸಲು ಸಾಧ್ಯವಿದೆ ಎಂದು ಚಿಂತಕ ಶಿವಶಂಕರ ತರನ್ನಳ್ಳಿ ಹೇಳಿದರು.

ಚಿಟಗುಪ್ಪ ತಾಲೂಕಿನ ಕಂದಗೂಳ ಗ್ರಾಮದ ಡಾ.ಚನ್ನಬಸವ ಪಟ್ಟದ್ದೇವರು ಗುರುಕುಲ ಪ್ರೌಢ ಶಾಲೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಜಾನಪದ ಪರಿಷತ್ತು ಆಯೋಜಿಸಿದ್ದ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಮತ್ತು ಸಂಸ್ಥಾಪಕ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಶರಣರು ಕನ್ನಡ ಭಾಷೆಗೆ ಆದ್ಯತೆ ನೀಡಿದ್ದರು ಅನಕ್ಷರಸ್ಥ ಶರಣರನ್ನು ಅಕ್ಷರಸ್ಥರನ್ನಾಗಿ ಮಾಡಿದ ಪರಿಣಾಮದಿಂದಲೇ ಇಷ್ಟೊಂದು ವಚನಗಳು ನಮಗೆ ದೊರೆಯುತ್ತವೆ. ಪ್ರತಿಯೊಬ್ಬ ಶರಣ ಶರಣೆಯರಿಗೂ ಕನ್ನಡದಲ್ಲಿ ವಚನಗಳನ್ನು ರಚಿಸುವಂತೆ ಪ್ರೇರೇಪಿಸಿದರು ಎಂಬುದು ಸಮಾಜ ಯಾವತ್ತು ಮರೆಯಬಾರದು. ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಶರಣರ ವಿಚಾರಧಾರೆಯನ್ನ ಮನ, ಮನೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತಿಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಗತಿಪರ ಚಿಂತಕಿ ಇಂದುಮತಿ ಗಾರಂಪಳ್ಳಿ ಮಾತನಾಡಿ, “ಪ್ರತಿಯೊಬ್ಬರ ಒಳಗೂ ಬಸವಾದಿ ಶರಣರ ಚಿಂತನೆಗಳಿವೆ. ಅದನ್ನು ಅರಿತುಕೊಳ್ಳಬೇಕು. ಅರಿವೇ ಗುರು ಎಂದು ತಿಳಿದು ಸಾಗಬೇಕು. ಶರಣರು ನುಡಿದಂತೆ ನಡೆದು ತೋರಿಸಿದ್ದಾರೆ. ಶರಣರ ಸೂಳ್ನುಡಿಗಳನ್ನು ಯಾವಾಗಲೂ ನೆನಪಿಸಿಕೊಳ್ಳಬೇಕು. ವಚನ ಸಾಹಿತ್ಯ ಬದುಕಿನ ಸಂದೇಶ ಕೊಡುತ್ತದೆ. ವಚನ ಸಾಹಿತ್ಯ ಇಂದಿನ ಸಮಾಜಕ್ಕೆ ದಾರಿದೀಪವಾಗಿದೆ” ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಬಸವರಾಜ ಕಾಳಪ್ಪ ಮಾತನಾಡಿ, ವಿಶ್ವ ಸಾಹಿತ್ಯಕ್ಕೆ ಪ್ರಜಾಪ್ರಭುತ್ವ ಆಶಯಗಳನ್ನು ಹೊತ್ತ ವಚನ ಸಾಹಿತ್ಯವನ್ನು ಶರಣರು ವಿಶೇಷ ಕೊಡುಗೆಯಾಗಿ ನೀಡಿದ್ದಾರೆ. ಆಡುಭಾಷೆಯಲ್ಲಿ ಸರಳವಾಗಿ ವಚನಗಳನ್ನು ರಚಿಸಿ, ಜೀವನಾಭುವ ಸಂದೇಶ ಸಾರಿದ್ದಾರೆ” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕಿಯರು ಸಾವು

ಸಾಹಿತಿ ಗುಂಡಪ್ಪ ಸಂಗಮಕರ್, ಚಂದ್ರಶೇಖರ ತಂಗಾ ಮುಸ್ತರಿ, ಪ್ರಾಚಾರ್ಯ ರೇಖಾ ಮಂಜುನಾಥ್ ಮಾತನಾಡಿದರು. ಹಿರಿಯ ಚಿಂತಕ ಶರಣ ಬಂಡೆಪ್ಪ ಮೂಲಗೆ ಕಾರ್ಯಕ್ರಮದ ಆಧ್ಯಕ್ಷತೆವಹಿಸಿ ಮಾತನಾಡಿದರು. ಪರಿಷತ್ತಿನ ಅಧ್ಯಕ್ಷ ಸಂಗಮೇಶ ಎನ್ ಜವಾದಿ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶರಣ ಮಾಹಾದೇವ ಶೆಟಗಾರ ನಿರೂಪಿಸಿದರು.ಶರಣ ರಾಜು ದೇವಣಿ ಸರ್ವರನ್ನು ವಂದಿಸಿದರು. ಕಾರ್ಯಕ್ರಮದಲ್ಲಿ ರಾಘವೇಂದ್ರ ಕುಲಕುರ್ಣೀ,ರಮೇಶ ಗೌಡಗಾಂವೆ, ಶರಣ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು, ಶಾಲಾ ಸಿಬ್ಬಂದಿ, ಮಕ್ಕಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...