ಫೇಸ್ಬುಕ್ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಕಮೆಂಟ್ ಹಾಕಿರುವ ಪುತ್ತೂರು ನೆಹರೂ ನಗರದಲ್ಲಿರುವ ಪುತ್ತೂರು ಕನ್ಸ್ಟ್ರಕ್ಷನ್ ಮಾಲೀಕ ವಸಂತಭಟ್ ತಾನು ಮಾಡಿದ ತಪ್ಪಿಗೆ ಮಂಗಳವಾರ ಕ್ಷಮೆ ಕೇಳಿದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕನ್ಸ್ಟ್ರಕ್ಷನ್ ಮಾಲೀಕ ವಸಂತಭಟ್ ಕಮೆಂಟ್ ಹಾಕಿರುವುದನ್ನು ಖಂಡಿಸಿ ಪುತ್ತೂರು ಬ್ಲಾಕ್ ಸೋಶಿಯಲ್ ಮೀಡಿಯಾ ಘಟಕದ ಅಧ್ಯಕ್ಷ ಸುಪ್ರಿತ್ ಕಣ್ಣಾರಾಯ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.
ಈ ಸುದ್ದಿ ಓದಿದ್ದೀರಾ? ಕಾರವಾರ | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ನೀಡದಿದ್ದರೆ ರಾಜಕೀಯ ನಿವೃತ್ತಿ :ಶಾಸಕ ಸತೀಶ್ ಸೈಲ್
ಈ ನಡುವೆ ಆರೋಪಿ ವಸಂತಭಟ್ ಮಂಗಳವಾರ ಶಾಸಕರ ನಿವಾಸಕ್ಕೆ ಭೇಟಿ ನೀಡಿದ್ದು, ʼನಾನು ತಪ್ಪು ಮಾಡಿದ್ದೇನೆ, ನನ್ನನ್ನು ಕ್ಷಮಿಸಿ. ಇನ್ನೆಂದೂ ಕೆಟ್ಟ ಕಮೆಂಟ್ ಹಾಕುವುದಿಲ್ಲ, ನನ್ನನ್ನು ಕ್ಷಮಿಸಿ, ನನ್ನನ್ನು ಪೊಲೀಸರು ಹುಡುಕುತ್ತಿದ್ದಾರೆ, ನನ್ನನ್ನು ಬಂಧಿಸದಂತೆ ಪೊಲೀಸರಿಗೆ ಹೇಳಿʼ ಎಂದು ಬೇಡಿಕೊಂಡಿದ್ದಾರೆ. ನೀವು ಕೆಟ್ಟ ಕಮೆಂಟ್ ಯಾಕೆ ಹಾಕುತ್ತೀರಿ? ನಾನು ನಿಮಗೇನಾದರೂ ಅನ್ಯಾಯ ಮಾಡಿದ್ದೇನಾ? ವಿದ್ಯಾವಂತರಿದ್ದೀರಿ, ಸಬ್ಯರಿದ್ದೀರಿ ಯಾಕೆ ಇಂಥ ಕೆಲಸಕ್ಕೆ ಹೋಗುತ್ತೀರಿ ಎಂದು ಕೇಳಿದ ಶಾಸಕರು ಮುಂದೆ ಇಂಥ ನೀಚ ಕೆಲಸಕ್ಕೆ ಹೋಗಬೇಡಿ ಎಂದು ಬುದ್ದಿವಾದ ಹೇಳಿ ಕ್ಷಮಿಸಿ ಕಳುಹಿಸಿದ್ದಾರೆ.





