ಕಲಬುರಗಿ | ವೈದಿಕಶಾಹಿ ದಬ್ಬಾಳಿಕೆ ಆತಂಕಕಾರಿ ಬೆಳವಣಿಗೆ: ಕೆ ನೀಲಾ

Date:

ಸಾಹಿತ್ಯ ಸಮ್ಮೇಳನ ಮುಖ್ಯವಾಗಿ ಸಮಸ್ತ ಕನ್ನಡಿಗರ, ದುಡಿಯುವ ವರ್ಗದ ಸಮಗ್ರ ಅಭಿವೃದ್ಧಿ ಹಾಗೂ ಅವರ ನಡುವಿನ ಸಾಂಸ್ಕೃತಿಕ ತಲ್ಲಣಗಳ ಕುರಿತಂತೆ ಚರ್ಚಿಸುವ ಸಾಹಿತ್ಯಿಕ ವೇದಿಕೆಯಾಗಿದೆ. ಅಂತಹ ಗಂಭೀರ ವಿಚಾರಗಳು ಬೆಳಕಿಗೆ ಬರುವ ಮುನ್ನವೆ, ನಾಡಿನ ಸಮಸ್ತ ನಾಗರೀಕರ ಆಹಾರ ಸಂಸ್ಕೃತಿಯ ಮೇಲೆ ವೈದಿಕಶಾಹಿ ದಬ್ಬಾಳಿಕೆಯು ಈ ಮೂಲಕ ಅನಾವರಣವಾಗಿರುವುದು ಆತಂಕಕಾರಿಯಾಗಿದೆ ಎಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿರುವ ಅವರು, ಸಾಹಿತ್ಯ ಸಮ್ಮೇಳನದ ಅತಿಥಿಗಳು, ಸಾಹಿತಿಗಳು, ಸಾಹಿತ್ಯ ಪ್ರೇಮಿಗಳಿಗೆ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಅಡುಗೆಯ ಮೂಲಕ ಆತಿಥ್ಯ ನೀಡಬೇಕೆಂದು ಮಂಡ್ಯ ಜಿಲ್ಲೆಯ ಜನತೆ ಬಯಸಿರುವುದು ಸರಿ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಆಹಾರವು ವ್ಯಕ್ತಿಯ ವೈಯಕ್ತಿಕ ಹಕ್ಕಾಗಿದೆ. ಅವರು ಇಷ್ಢ ಪಡುವ ಆಹಾರ ತಿನ್ನಲು ಅವರು ಬದ್ಧರಾಗಿದ್ದಾರೆ. ಯಾರ ಮೇಲೂ ಮತ್ತೊಬ್ಬರ ಆಹಾರ ಪದ್ಧತಿಯನ್ನು ಬಲವಂತವಾಗಿ ಹೇರುವುದು ಅಪರಾಧವಾಗುತ್ತದೆ. ಆದರೆ, ಇಲ್ಲಿ ಭಾಗಿಯಾಗುವ ಎಲ್ಲ ನಾಗರೀಕರು, ಗಣ್ಯರು, ಸಾಹಿತಿಗಳು ನಾಡಿನ ವೈವಿದ್ಯಮಯವಾದ ಆಹಾರ ಸೇವಿಸುವವರು ಆಗಿರುತ್ತಾರೆಂಬುದನ್ನು ಮತ್ತು ಈ ತಾರತಮ್ಯವು ಈ ಎಲ್ಲರನ್ನು ಅಪಮಾನಿಸುತ್ತದೆಂಬುದನ್ನು ಇದೇ ಸಂದರ್ಭದಲ್ಲಿ ಗಮನಿಸಲೇಬೇಕಾಗಿದೆ ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತ್ಯೋತ್ಸವದ ಆಹಾರ ವ್ಯವಸ್ಥೆಯು ಕನ್ನಡ, ಕರ್ನಾಟಕಮಯವಾಗಿರುವಂತೆ ನೋಡಿಕೊಳ್ಳುವುದು ಅಗತ್ಯವಿದೆ. ಆದರೆ, ಅದರಲ್ಲಿ ತಾರತಮ್ಯದ ನೀತಿ ಅನುಸರಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದು ಖಂಡನೀಯ ಎಂದು ಖಂಡಿಸಿದ್ದಾರೆ.

ವೈದಿಕಶಾಹಿಗಳು, ಹಿಂದುತ್ವವಾದಿ ಮತಾಂಧರು ಕರ್ನಾಟಕದ ಮತ್ತು ಕನ್ನಡ ನೆಲದ ಆಹಾರ ಸಂಸ್ಕೃತಿ ಹಾಗೂ ಪದ್ಧತಿಗೆ ವಿರುದ್ಧವಾಗಿ, ಅದರ ಮೇಲೆ ವೈದಿಕಶಾಹಿಯ, ಈರುಳ್ಳಿ ಬೇಡ, ಬೆಳ್ಳುಳ್ಳಿ ಬೇಡಾ ಹಾಗೂ ಮಾಂಸ, ಮೀನು, ಮೊಟ್ಟೆ ವರ್ಜ್ಯವೆಂದು, ಅದು ತುಚ್ಛವೆಂದು, ತನ್ನದೆ ಆಹಾರ ಪದ್ಧತಿಯನ್ನು ಬಲವಂತವಾಗಿ ಹೇರುತ್ತಿರುವುದನ್ನು ನಾಡಿನ ಜನತೆ ತೀವ್ರವಾಗಿ ವಿರೋದಿಸುತ್ತಿದ್ದಾರೆ. ಸಿಪಿಐಎಂ ಇಂತಹ ಸರ್ವಾಧಿಕಾರಿ ನಿಲುಮೆಯನ್ನು ಬಲವಾಗಿ ಪ್ರತಿರೋಧಿಸುತ್ತದೆ ಎಂದು ಕಿರಿಕಾರಿದ್ದಾರೆ.

ಇಂತಹ ಸಂದರ್ಭದಲ್ಲಿ ಇಂತಹ ವಿಚಾರಗಳನ್ನು ಮತ್ತಷ್ಟು ಎಚ್ಚರಿಕೆಯಿಂದ ಸಮ್ಮೇಳನದ ಸಂಘಟಕರು ಮತ್ತು ಆಯೋಜಕರು ಗಮನಿಸಬೇಕಾಗುತ್ತದೆ. ಸಮಸ್ತ ನಾಗರೀಕರ ಆಹಾರದ ಹಕ್ಕಿಗೆ ಧಕ್ಕೆ ಬರದಂತೆ ಆಯೋಜಿಸುವ ಹೊಣೆಗಾರಿಕೆಯನ್ನು ತೋರಬೇಕಾಗುತ್ತದೆ.

ಇದನ್ನೂ ಓದಿದ್ದೀರಾ? : ಕಲಬುರಗಿ | ಕಾರು-ಲಾರಿ ಮುಖಾಮುಖಿ ಡಿಕ್ಕಿ : ದಂಪತಿ ಸಾವು

ಈ ವೈವಿದ್ಯಮಯ ಆಹಾರ ಸಂಸ್ಕೃತಿ ಕೇವಲ ಆಹಾರದ ಹಕ್ಕಿನ ಪ್ರಶ್ನೆ ಮಾತ್ರವೇ ಆಗಿಲ್ಲ. ಅದು ನಾಡಿನ ಬಹು ಸಂಖ್ಯಾತ ದುಡಿಯುವ ಜನತೆಯ ಬದುಕಿನ ಹಾಗೂ ದುಡಿಮೆಯ ಆಧಾರವೂ ಆಗಿದೆ ಎಂಬುದನ್ನು ವಿಶೇಷವಾಗಿ ಗಮನಿಸಬೇಕು. ಆದ್ದರಿಂದ ಅದು ಆಹಾರದ ಹಕ್ಕಿನ ಪ್ರಶ್ನೆ ಮಾತ್ರವಲ್ಲಾ. ಬದುಕುವ ಹಕ್ಕಿನ ಪ್ರಶ್ನೆಯೂ ಆಗಿದೆ. ಇದನ್ನು ಲಘುವಾಗಿ ಯಾರೂ ಪರಿಗಣಿಸುವುದು ಉಚಿತವಲ್ಲ ಎಂದು ಕೆ ನೀಲಾ ಖಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...