ಧರ್ಮಸ್ಥಳ ದೇವಸ್ಥಾನದ ಮಾಹಿತಿ ನೀಡಲು ವೀರೇಂದ್ರ ಹೆಗ್ಗಡೆ ನಿರಾಕರಣೆ

Date:

ಧರ್ಮಸ್ಥಳ ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರರು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ತಿಳಿಸಿದ್ದಾರೆ. ಈ ವರದಿಯ ಪ್ರತಿಯನ್ನು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಸೋಮನಾಥ ನಾಯಕ್‌ ಅವರಿಗೆ ಕಳಿಸಿದ್ದಾರೆ.

ಯಾವುದೇ ಮಾಹಿತಿಯನ್ನು ನೀಡಲು ನಿರಾಕರಿಸಿರುವ ಕಾರಣದಿಂದಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಮತ್ತು ನಿಯಮ 2002ರ ಸೆಕ್ಷನ್ 53ರಂತೆ ನೋಂದಣಿ ಮಾಡಲು ಪ್ರಸ್ಥಾವನೆ ಸಲ್ಲಿಸಲು ಅಸಾಧ್ಯವಾಗಿದೆ ಎಂದು ತಹಶೀಲ್ದಾರರು ಹೇಳಿದ್ದಾರೆ. ಇದಾದ ಬೆನ್ನಲ್ಲೇ ಮಾಹಿತಿ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿರುವ ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ, ನಾಗರಿಕ ಸೇವಾ ಟ್ರಸ್ಟ್‌ ಅನುಮಾನವನ್ನು ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ? ಸೌಜನ್ಯ ಪ್ರಕರಣ: ಓದುಗರಿಗೆ ದ್ರೋಹ ಬಗೆದ ‘ಹೆಗ್ಗಡೆವಾಣಿ’ಗೆ ನಾಗರಿಕ ಸೇವಾ ಟ್ರಸ್ಟ್ ಪತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನದ ಹೆಸರು & ವಿಳಾಸ, ದೇವಾಲಯದ ಮೂಲ ಮತ್ತು ಇತಿಹಾಸ, ದೇವಸ್ಥಾನದ ಭೂಮಿ, ಕಟ್ಟಡ, ಠೇವಣಿಗಳ ಮತ್ತು ಚಿನ್ನಾಭರಣಾದಿ ಸಕಲ ಚರ ಸೊತ್ತುಗಳ ವಿವರ, ವಾರ್ಷಿಕ ಆದಾಯ ಮತ್ತು ಖರ್ಚಿನ ವಿವರ ( ಆಡಿಟ್ ಆದ ಲೆಕ್ಕಪತ್ರದ ಪ್ರತಿಸಹಿತ) ನೀಡಬೇಕು. ಆದರೆ ಈ ಮಾಹಿತಿಯನ್ನು ನೀಡಲು ಧರ್ಮಾಧಿಕಾರಿಗಳು ನಿರಾಕರಿಸಿದ್ದಾರೆ.

ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ1

ಇದಾದ ಬೆನ್ನಲ್ಲೇ ಈ ಮಾಹಿತಿಗಳನ್ನು ಗುಟ್ಟಾಗಿಟ್ಟಿದ್ದಾರೆ ಎಂದರೆ ಸಂಶಯ ಬರುತ್ತಿದೆ ಎಂದು ನಾಗರಿಕ ಸೇವಾ ಟ್ರಸ್ಟ್‌ ಹೇಳಿದೆ. “ಪ್ರತಿವರ್ಷ ಲೆಕ್ಕಪತ್ರ ನೀಡಬೇಕು. ಸಾರ್ವಜನಿಕರಿಂದ ನಗದು ಕಾಣಿಕೆ & ದೇಣಿಗೆ, ವಸ್ತುರೂಪದ ದೇಣಿಗೆ ಪಡೆಯುವ ದೇವಾಲಯ ಅದರ ಲೆಕ್ಕಪತ್ರವನ್ನು ಸಾರ್ವಜನಿಕರ ಮುಂದೆ ಇಡಬೇಕು. ಆದರೆ ಮುಚ್ಚಿಡಲಾಗುತ್ತಿದೆ. ಈ ಮಾಹಿತಿಯನ್ನು ಗುಟ್ಟಾಗಿಟ್ಟಿದ್ದಾರೆ ಎಂದರೆ ಸಂಶಯ ಬರುವುದಿಲ್ಲವೇ” ಎಂದು ಪ್ರಶ್ನಿಸಿದೆ.

“ದೇವಳದ ಸಾವಿರಾರು ರೂಪಾಯಿ ಕೋಟಿ ಮೌಲ್ಯದ ಆಸ್ತಿ & ಹಣ ಏನಾಗಿದೆ ಮತ್ತು ಏನಾಗುತ್ತಿದೆ. 1050ಕ್ಕೂ ಅಧಿಕ ಎಕರೆ ದೇವಾಲಯದ ಭೂಮಿಯನ್ನು ಹೆಗ್ಗಡೆ ಕುಟುಂಬ ಕಬಳಿಸಿದ್ದಕ್ಕೆ ದಾಖಲೆ ಇದೆ. ದೇವಳದ ಆದಾಯ ಬಳಕೆ ಬಗ್ಗೆಯೂ ಮಾಹಿತಿ & ಸಾಕ್ಷಿಗಳಿವೆ” ಎಂದು ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ, ನಾಗರಿಕ ಸೇವಾ ಟ್ರಸ್ಟ್ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...