ವಿಜಯನಗರ | ʼಟೊಟೆಂಪೋಲ್‌ ಕುಲಚಿಹ್ನೆʼ ಎಂಬುದು ಸಮುದಾಯದ ಅಸ್ತಿತ್ವದ ಸಂಕೇತ: ಪಿ. ಆರಡಿಮಲ್ಲಯ್ಯ

Date:

‌ಟೊಟೆಂಪೋಲ್‌ ಕುಲಚಿಹ್ನೆ‌ ಎಂಬುದು ಸಮುದಾಯವೊಂದರ ಅಸ್ತಿತ್ವದ ಸಂಕೇತವಾಗಿದೆ ಎಂದು ಶಿವಮೊಗ್ಗದ ಕಮಲಾ ನೆಹರೂ ಸ್ಮಾರಕ ರಾಷ್ಟೀಯ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಿ. ಆರಡಿಮಲ್ಲಯ್ಯ ಕಟ್ಟೇರ ಹೇಳಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನವಶಾಸ್ತ್ರ ವಿಭಾಗದಲ್ಲಿ ನಡೆದ ʼಪಾಕ್ಷಿಕ ಮಾತುʼ ಕಾರ್ಯಕ್ರಮದಲ್ಲಿ ʼಟೊಟೆಂಪೋಲ್‌ (ಕುಲಚಿನ್ಹೆ) ಐತಿಹಾಸಿಕ ವಿಶ್ಲೇಷಣೆʼ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಕುಲಶಾಸ್ತ್ರೀಯ ಅಧ್ಯಯನದಲ್ಲಿ ಬರುವ ಕುಲಚಿಹ್ನೆಗಳು ಸಮುದಾಯಗಳ ಉಳಿವಿನ ಅಸ್ತಿತ್ವಕ್ಕೆ ಅಗತ್ಯ. ಕ್ರಿಪೂ.ದಿಂದ ಹಿಡಿದು ಪ್ರಸ್ತುತದವರೆಗೆ ಕುಲಚಿಹ್ನೆಗಳು ಯಾವ ರೀತಿ ಬದಲಾವಣೆಗೊಂಡು ಬೇರೆ ರೂಪಗಳನ್ನು ಪಡೆದವು ಎಂಬುವುದನ್ನು ವಿಸ್ತೃತವಾಗಿ ವಿವರಿಸಿದರು. ಟೊಟೆಂಪೋಲ್‌ ಎಂದರೆ ಅಶೋಕ ಸ್ತಂಭ. ಪ್ರಕೃತಿ ಕೇಂದ್ರಿತ ಕುಲಚಿಹ್ನೆ, ಪ್ರಾಣ ಕೇಂದ್ರಿತ ಕುಲಚಿಹ್ನೆ ಮತ್ತು ಮಾನವ ಕೇಂದ್ರಿತ ಕುಲಚಿಹ್ನೆಗಳು ಆದಿಕಾಲದಿಂದಲೂ ಇದ್ದವು ಎಂಬುದನ್ನು ತಿಳಿಸಿಕೊಟ್ಟರು.

ಸಾಮ್ರಾಟ ಅಶೋಕನಿಗಿಂತ ಪೂರ್ವದಲ್ಲಿ ಟೊಟೆಂಪೋಲ್‌ಗಳು ಇದ್ದವು. ಹಾಗೆಯೇ ಮಾನವನ ವಿಕಾಸವನ್ನು ಟೊಟೆಂಪೋಲ್‌ ಕುಲಚಿನ್ಹೆಗಳಲ್ಲಿ ನೋಡಬಹುದು. ಕಾನಿಷ್ಕದಲ್ಲಿರುವ ಅತ್ಯಂತ ಎತ್ತರವಾದ 400 ಅಡಿ ಕೊಕೆಂಪೋಲ್‌ ಇದೆ. ಶಿರಸಿಯಲ್ಲಿರುವ ಟೊಟೆಂಪೋಲ್‌(ಕುಲಚಿನ್ಹೆ)ಗೆ ಬಂಗಾರದ ಲೇಪನ ಮಾಡಲಾಗಿದೆ. ಈ ಹೊಸ ವಿಷಯದ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದು, ವಿದ್ಯಾರ್ಥಿಗಳೂ ಕೂಡ ಇಂತಹ ವಿಶಿಷ್ಟ ವಿಷಯಗಳ ಕುರಿತು ಸಂಶೋಧನೆ ನಡೆಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಮಹಿಳಾ ಸಶಕ್ತೀಕರಣ, ಯುವ ಸಬಲೀಕರಣವೇ ʼಗ್ಯಾರಂಟಿʼ ಉದ್ದೇಶ: ಎಸ್‌ ಆರ್‌ ಮೆಹರೋಜ್‌ ಖಾನ್

ಕಾರ್ಯಕ್ರಮದಲ್ಲಿ ಮಾನವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ತಾರಿಹಳ್ಳಿ ಹನುಮಂತಪ್ಪ, ವಿಭಾಗದ ಮುಖ್ಯಸ್ಥ ಡಾ.ಎಲ್ ಶ್ರೀನಿವಾಸ, ಸಂಚಾಲಕ ಡಾ. ಶಿವರಾಜ ಎಸ್, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...