ವಿಜಯನಗರ | ಹಂಪಿಯಲ್ಲಿ 17 ಹೋಮ್‌ಸ್ಟೇ, ರೆಸಾರ್ಟ್‌ಗಳು ನೆಲಸಮ

Date:

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 9ರಿಂದ ಜಿ-20 ಶೃಂಗಸಭೆ ನಡೆಯಲಿದೆ. ಅದಕ್ಕಾಗಿ 47 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ರಾಜ್ಯ ಸರ್ಕಾರ, ಹಲವಾರು ಕೆಲಸಗಳನ್ನು ಕೈಗೆತ್ತಿಕೊಂಡಿದೆ. ಈ ನಡುವೆ, ಹಂಪಿ ಪಾರಂಪರಿಕ ವಲಯದಲ್ಲಿದ್ದ 17 ರೆಸ್ಟೋರೆಂಟ್‌ಗಳು ಮತ್ತು ರೆಸಾರ್ಟ್‌ಗಳನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

ರಕ್ಷಿತ ಅರಣ್ಯ ಪ್ರದೇಶ ವಲಯ ಮತ್ತು ಯುನೆಸ್ಕೋ ಅಡಿಯಲ್ಲಿ ಪಾರಂಪರಿಕ ತಾಣವೆಂದು ಗುರುತಿಸಲಾಗಿದ್ದ ಪ್ರದೇಶದಲ್ಲಿ ನಡೆಯುತ್ತಿದ್ದ ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳನ್ನು ತೆರವುಗೊಳಿಸಿದ್ದಾರೆ. ಇವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಮೂರು ತಿಂಗಳ ಹಿಂದೆಯೇ ನೋಟಿಸ್‌ ನೀಡಿದ್ದರು. ಆದರೂ, ಅವುಗಳ ಮಾಲೀಕರು ತೆರವುಗೊಳಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳೇ ಬುಲ್ಡೋಜರ್‌ ಬಳಸಿ ನೆಲಸಮ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೊಪ್ಪಳ ಜಿಲ್ಲೆಯ ಸಣಾಪುರ, ಆನೆಗುಂದಿ ಹಾಗೂ ವಿಜಯನಗರ ಜಿಲ್ಲೆಯ ಕಮಲಾಪುರ, ಕಡ್ಡಿರಾಂಪುರ ಭಾಗದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಹಲವಾರು ಜನರು ತಮ್ಮ ಮನೆಗಳ ಎದುರು ಕಟ್ಟಿಕೊಂಡಿದ್ದ ಆತಿಥ್ಯ ಕಟ್ಟಡಗಳನ್ನೂ ನೆಲಸಮ ಮಾಡಲಾಗಿದೆ ಎಂದು ಟಿಎನ್‌ಐಇ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾರಂಪರಿಕ ವಲಯದಲ್ಲಿ ಯಾವುದೇ ಕಟ್ಟಡಗಳನ್ನು ನಿರ್ಮಾಣ ಮಾಡುವಂತಿಲ್ಲ. ಆದರೆ, ನೆಲಸಮಗೊಂಡಿರುವ ಎಲ್ಲ ಕಟ್ಟಡಗಳು ಹಂಪಿ ಪಾರಂಪರಿಕ ವಲಯದಲ್ಲಿದ್ದವು. ಹೀಗಾಗಿ, ಅವುಗಳನ್ನು ನೆಲಸಮ ಮಾಡಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೆಲಸಮವಾದ ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ಸರ್ಕಾರ ಪರ್ಯಾಯ ಭೂಮಿಯನ್ನು ಸೂಚಿಸಿದೆ. ಅಲ್ಲಿ, ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ?: ಹಂಪಿಯಲ್ಲಿ ಜಿ20 ಶೃಂಗಸಭೆ; ರಾಜ್ಯದ ಬೊಕ್ಕಸಕ್ಕೆ 47 ಕೋಟಿ ರೂ. ಹೊರೆ

ಈ ಹಿಂದೆಯೂ ಅಧಿಕಾರಿಗಳು ಹಂಪಿ ಸುತ್ತಮುತ್ತಲಿನ ಸುಮಾರು 40 ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳನ್ನು ನೆಲಸಮ ಮಾಡಿದ್ದರು. ಆ ವೇಳೆ, ಅಧಿಕಾರಿಗಳ ವಿರುದ್ಧ ಸ್ಥಳೀಯರು ಮತ್ತು ರೆಸಾರ್ಟ್‌ಗಳ ಮಾಲೀಕರು ಪ್ರತಿಭಟನೆ ನಡೆಸಿದ್ದರು.

“ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳು ತಾತ್ಕಾಲಿಕ ಕಟ್ಟಡಗಳಾಗಿವೆ. ಪ್ರವಾಸಿಗರಿಗೆ ತಂಗಲು, ವಿಶ್ರಾಂತಿ ಪಡೆಯಲು ನೆರವಾಗುತ್ತವೆ. ಅಲ್ಲದೆ, ಸ್ಥಳೀಯರಿಗೆ ಉದ್ಯೋಗವನ್ನೂ ನೀಡಿವೆ. ಆದರೆ, ಅಧಿಕಾರಿಗಳು ಅವುಗಳನ್ನು ನೆಲಸಮ ಮಾಡುತ್ತಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಮಾಡಬೇಕು” ಎಂದು ರೆಸಾರ್ಟ್‌ಗಳ ಮಾಲೀಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...