ವಿಜಯನಗರ | ಪಹಲ್‌ಗಾಮ್ ಭಯೋತ್ಪಾದಕರ ದಾಳಿಗೆ 28 ಜನರ ಸಾವು; ಡಿವೈಎಫ್ಐ ಖಂಡನೆ

Date:

ಕಾಶ್ಮೀರದ ಪಹಲ್‌ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸಾರನ್ ಕಣಿವೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯಿಂದ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಮಧುಸೂದನ್‌ ರಾವ್‌ ಹಾಗೂ ಹಾವೇರಿಯ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ತೀವ್ರವಾಗಿ ಖಂಡಿಸಿದೆ.

“ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರ್ಕಾರ ಕ್ರಮವಹಿಸಬೇಕು. ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದೆ.

“ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಫ್ಐ ಸಂತಾಪಗಳನ್ನು ಸಲ್ಲಿಸುತ್ತದೆ. ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ‘ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ’ ಎಂದು ಹೇಳುತ್ತಲೇ ಇದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಸರ್ಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು”‌ ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಶ್ರೀನಗರ ಪ್ರವಾಸದಲ್ಲಿರುವ ಕುಟುಂಬಗಳಿಗೆ ಸತೋಷ್ ಲಾಡ್ ಭೇಟಿ

“ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದುಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ”‌ ಎಂಬುದು ಡಿವೈಎಫ್‌ಐ ಆಗ್ರಹ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...