ವಿಜಯನಗರ | ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಶ್ರೇಷ್ಠ ಸಂವಿಧಾನವೇ‌ ಆಧಾರ; ಶಾಸಕಿ‌ ಎಮ್ ಪಿ ಲತಾ

Date:

ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಶ್ರೇಷ್ಠ ಸಂವಿಧಾನವೇ ಆಧಾರ ಎಂದು ವಿಜಯನಗರದ ಹರಪನಹಳ್ಳಿ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಹರಪನಹಳ್ಳಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, “ವಿಭಿನ್ನ ಜನ, ಭಾಷೆ, ಧರ್ಮ, ಸಂಸ್ಕೃತಿ ಹೊಂದಿರುವ ದೇಶ ಭಾರತ. ವಿವಿಧತೆಗಳಲ್ಲಿ ಏಕತೆ ಸಾರಲು ಸರ್ದಾರ ವಲ್ಲಭಾಯಿ ಪಟೇಲ್ ಅವರ ಶ್ರಮ, ಸಂವಿಧಾನಗಳು ಇಂದು ಎಲ್ಲರೂ ಒಂದೇ ಕಾನೂನಿಡಿಯಲ್ಲಿ ಸಾಗಲು ಕಾರಣವಾಗಿವೆ. ಅಂಬೇಡ್ಕರ್ ಅಧ್ಯಕ್ಷತೆ ಯಲ್ಲಿ ಭಾರತದ ಸಂಸ್ಕೃತಿಗೆ ತಕ್ಕಂತೆ ಸಂವಿಧಾನವನ್ನು ರಚಿಸಲು ವಿಶ್ವದ ಅನೇಕ ಸಂವಿಧಾನಗಳನ್ನು ಅಭ್ಯಾಸ ಮಾಡಿ ರಚಿಸಿರುವ ಪರಿಣಾಮ ಎಲ್ಲರೂ ನೆಮ್ಮದಿಯಿಂದ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ನಿಭಾಯಿಸಲು ಸುಲಭವಾಗಿದೆ” ಎಂದು ಸ್ಮರಿಸಿದರು.

ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ, “ಆಂಗ್ಲರ ದಬ್ಬಾಳಿಕೆಯಿಂದ ನಲುಗಿದ್ದ ಭಾರತವನ್ನು ಸ್ವತಂತ್ರವಾಗಿಸಲು ಹಲವಾರು ಮಹಾತ್ಮರು ತ್ಯಾಗ, ಬಲಿದಾನ ಮಾಡಿದ್ದಾರೆ. ಸ್ವತಂತ್ರ ನಂತರ ಬಲಿಷ್ಠ ಭಾರತವನ್ನು ಕಟ್ಟಲು ಬಾಬಾ ಸಾಹೇಬರು ಕೊಡುಗೆಯಾಗಿ ನೀಡಿದ ಸಂವಿಧಾನ ಎಂಬ ಮಹಾಗ್ರಂಥ ಅಡಿಪಾಯವಾಗಿದೆ. ನಮ್ಮ ಅಕ್ಕ ಪಕ್ಕದ ಪ್ರಜಾಪ್ರಭುತ್ವ ದೇಶಗಳು ಅಭಿವೃದ್ಧಿಯಲ್ಲಿ ಹಿಂದುಳಿದಿರುವುದಲ್ಲದೇ ದೊಂಬಿ ಧಂಗೆಗಳಿಗೆ ಗುರಿಯಾಗಿವೆ. ಆದರೆ ಭಾರತ, ಯುವಕರಿಂದ ಸಮೃದ್ಧವಾದ ದೇಶವಾಗಿ ವಿಶ್ವದಲ್ಲೇ ಅಸಾಧಾರಣ ಸಾಧನೆಗಳನ್ನು ಮಾಡುತ್ತಿದೆ. ಎಲ್ಲಾ ರಂಗಳಲ್ಲಿ ಅಪ್ರತಿಮ ಅಭಿವೃದ್ಧಿ ಸಾಧಿಸಲು ನಮ್ಮ ಗಟ್ಟಿ ಸಂವಿಧಾನವೇ ಕಾರಣವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಮಳೆಯಿಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲ: ಡಾ. ನಾಗರಾಜ್

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಫಾತೀಮಾಬೀ, ಉಪಾಧ್ಯಕ್ಷ ಕೊಟ್ರೇಶ್, ಪುರಸಭೆ ಸದಸ್ಯ ಡಿ ರೆಹಮಾನ್‌ಸಾಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವಿ ಆಂಜಿನಪ್ಪ, ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ವೆಂಕಟೇಶ್ ಟಿ, ವಕೀಲ ಉದ್ದರ್ ಗಣೇಶ್, ಮಂಜುನಾಥ ಇಜಂತಕರ್, ಲಾಟಿ ದಾದಾಪೀರ, ಜಾಕೀರ್ ಸರಖಾವಸ್, ತಹಶೀಲ್ದಾರ ಬಿ ವಿ ಗಿರೀಶ್‌ ಬಾಬು, ಇಓ ಚಂದ್ರಶೇಖರ, ಬಿಇಓ ಹೆಚ್ ಲೇಪಾಕ್ಷಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಂಗಪ್ಪ ಆರೋಗ್ಯಾಧಿಕಾರಿ ಪೃಥ್ವಿ, ಡಿವೈಎಸ್‌ಪಿ ವೆಂಕಟಪ್ಪನಾಯಕ, ಸಿಪಿಐ ನಾಗರಾಜ್ ಕಮ್ಮಾರ್ ಎಇಇ ಪ್ರಕಾಶ ಪಾಟೀಲ್ ಹಾಗೂ ಇತರರು ಭಾಗವಹಿಸಿದ್ದರು.

WhatsApp Image 2025 01 27 at 10.11.13 PM 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...