ಬಳ್ಳಾರಿ | ಕಂಪ್ಲಿಯಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ತೆರೆಯುವಂತೆ ಮನವಿ

Date:

  • ಭಾರತೀಯ ದಲಿತ ಪ್ಯಾಂಥರ್‌ ಮನವಿ
  • ಪ್ರಸ್ತುತ ವರ್ಷದಿಂದಲೇ ಆರಂಭಿಸುವಂತೆ ಆಗ್ರಹ

ಕಂಪ್ಲಿ ನಗರದಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ತೆರೆಯುವಂತೆ ಒತ್ತಾಯಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರರ ಮೂಲಕ ವಿಎಸ್‌ಕೆ ವಿಶ್ವವಿದ್ಯಾಲಯದ ಉಪ ಕುಲಪತಿ ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಸಲ್ಲಸಿ ಮಾತಿಡದ ಸಂಘಟನೆಯ ತಾಲೂಕು ಅಧ್ಯಕ್ಷ ಎನ್ ಸೈಯ್ಯದ್ ವಾರೀಶ್, “ಕಂಪ್ಲಿ ನಗರದಲ್ಲಿ ಸರ್ಕಾರಿ ಪದವಿ ಕಾಲೇಜು ಹಾಗೂ ಖಾಸಗಿ ಪದವಿ ಕಾಲೇಜುಗಳಿದ್ದು ಪ್ರತಿ ವರ್ಷ ತಾಲೂಕು ವ್ಯಾಪ್ತಿಯಿಂದ 150 ರಿಂದ 200 ಜನ ವಿಧ್ಯಾರ್ಥಿಗಳು ಪದವಿ ನಂತರ ಉನ್ನತ ಶಿಕ್ಷಣ ಪಡೆಯಲು ಬಳ್ಳಾರಿ ಮತ್ತು ಕೊಪ್ಪಳ, ಗಂಗಾವತಿಗೆ ತೆರಳುತ್ತಾರೆ” ಎಂದು ಮಾಹಿತಿ ನೀಡಿದರು.

“ಈ ಎಲ್ಲ ವಿದ್ಯಾರ್ಥಿಗಳು ದೂರದ ಬಳ್ಳಾರಿ, ಕೊಪ್ಪಳ, ಗಂಗಾವತಿಗೆ ತೆರಳಲು ಕಂಪ್ಲಿ ತಾಲೂಕಿನ ತಮ್ಮ ಸ್ವಗ್ರಾಮಗಳಿಂದ ಕಂಪ್ಲಿ ನಗರಕ್ಕೆ ಬಂದು ನಂತರ ಕಂಪ್ಲಿಯಿಂದ 52 ಕಿಮೀ ದೂರದ ಬಳ್ಳಾರಿಗೆ, 54 ಕಿಮೀ ದೂರದ ಕೊಪ್ಪಳಕ್ಕೆ ಹಾಗೂ 15 ಕಿ.ಮೀ ದೂರದ ಗಂಗಾವತಿಗೆ ಹರಸಾಹಸ ಪಟ್ಟು ವಿದ್ಯಾಭ್ಯಾಸ ಮಾಡುತ್ತಿರುವುದು ದುರ್ದೈವ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವ ವಿದ್ಯಾಲಯಗಳ ನಿಯಮದಂತೆ ನಿಗದಿಪಡಿಸಿದ ಸೀಟ್‌ಗಳು ಭರ್ತಿಯಾದ ನಂತರ, ದೂರದ ಹುಬ್ಬಳ್ಳಿ-ಧಾರವಾಡ, ಬೆಂಗಳೂರಿಗೆ ತೆರಳಿ ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯತೆ ಸುಮಾರು ವರ್ಷಗಳಿಂದ ನಡೆದುಕೊಂಡು ಬಂದಿರುವುದು ವಿಧ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಆರ್ಥಿಕ ಹೊರೆಯಾಗಿದೆ. ಕೆಲವು ವಿದ್ಯಾರ್ಥಿಗಳು, ಪೋಷಕರು ಆರ್ಥಿಕ ಹೊರೆ ಹೊರಲಾರದೇ ಮಕ್ಕಳನ್ನ ವಿದ್ಯಾಭ್ಯಾಸಕ್ಕೆ ದೂರದೂರಿಗೆ ಕಳುಹಿಸಲು ಇಚ್ಚಿಸದೇ ಹಿಂಜರಿದು ಸ್ಥಗಿತಗೊಳಿಸಿದಂತಹ ಉದಾಹರಣೆಗಳು ಸಾಕಷ್ಟಿವೆ” ಎಂದು ಅಳಲನ್ನು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? : ಧಾರವಾಡ | ಈ ಚುನಾವಣೆ ಬಿಜೆಪಿ ವಿರುದ್ಧದ ಲಿಂಗಾಯತ ಹೋರಾಟ: ಗಂಗಾಧರ ದೊಡವಾಡ

“ಈ ಎಲ್ಲ ಕಾರಣಗಳಿಂದ ನೂತನವಾಗಿ ತಾಲೂಕು ಕೇಂದ್ರವಾಗಿ ಹೊರಹೊಮ್ಮಿರುವ ಕಂಪ್ಲಿಯು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರಲಿದ್ದು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲವು ಕೊಠಡಿಗಳಿದ್ದು ಅಲ್ಲಿಯೇ ಪ್ರಸ್ತುವ ವರ್ಷದಿಂದ ಸ್ನಾತಕೋತ್ತರ ಪದವಿ ತರಗತಿಗಳನ್ನು ಸ್ಥಾಪಿಸಲು ಅಗತ್ಯ ಪ್ರಕ್ರಿಯೆಗಳನ್ನು ಕೂಡಲೇ ಕೈಗೊಳ್ಳುವಂತೆ” ಮನವಿ ಮಾಡಿಕೊಂಡರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ರಮೇಶ್ ಕುಂಟೋಜಿ, ಖಜಾಂಚಿ ರೋಷನ್ ಯಾಳ್ಪಿ, ಗೌರವಾಧ್ಯಕ್ಷ ಹೇಮಂತ್ ಕುಮಾರ್ ಡಿ, ಕಾರ್ಯಕಾರಣಿ ಸದಸ್ಯ ಗಂಗಾವತಿ ಕೃಷ್ಣ, ಸುಭಾನ್, ಗುರು ಶಾಸ್ತ್ರೀ, ಪಿ.ಸಿ ಈರಣ್ಣ, ಎಂ. ಪಂಪನ ಗೌಡ, ಪುರುಷೋತ್ತಮ್, ದೇವರಾಜ್ ಹೆಚ್, ಸಿ.ಡಿ.ಅನಿಲ್ ಕುಮಾರ್, ಧನರಾಜ್, ಕೆ. ಶಾಂತ ಕುಮಾರ್, ವೆಂಕಟೇಶ್, ಗಣೇಶ್ ಹಾಗೂ ಇತರರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...