ವಿಜಯನಗರ | ಹೆದ್ದಾರಿಯಲ್ಲಿ ದಾಖಲೆ ತಪಾಸಣೆ ವೇಳೆ ಅಪಘಾತ; ಚಾಲಕ ಸಾವು

Date:

ಬೆಂಗಳೂರು – ಕೊಪ್ಪಳ ಹೆದ್ದಾರಿಯಲ್ಲಿ ಆರ್‌ಟಿಓ ಅಧಿಕಾರಿಗೆ ವಾಹನ ದಾಖಲೆ ಪತ್ರ ತೋರಿಸಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಟ್ರಕ್ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯ ಬಳಿಕ ಹಲವು ಚಾಲಕರು ಸೇರಿ ಹೆದ್ದಾರಿ ತಡೆದು ಪ್ರತಿಭಟಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ಭಾನುವಾರ ಸಂಜೆ ನಡೆದಿದೆ.

ಆರ್‌ಟಿಒ ಅಧಿಕಾರಿಗಳಿಂದ ವಾಹನ ನಿಲ್ಲಿಸಲು ಸೂಚನೆ ಸಿಕ್ಕಿದ ತಕ್ಷಣ ಟ್ರಕ್ ಚಾಲಕ ತಮ್ಮ ಟ್ರಕ್ ನಿಲ್ಲಿಸಿ ದಾಖಲೆ ಪತ್ರ ತೋರಿಸಿ ವಾಪಸ್ ರಸ್ತೆ ದಾಟಲು ಯತ್ನಿಸಿದ್ದಾಗ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆಯಿತು. ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‘ಆರ್‌ಟಿಒ ಅಧಿಕಾರಿಗಳು ವಸೂಲಿಗೆ ಇಳಿದಿದ್ದಾರೆ, ಅವರಿಗೆ ಲಂಚ ಕೊಟ್ಟು ಬರುವಾಗಲೇ ಈ ಅಪಘಾತ ಸಂಭವಿಸಿದೆ. ಹೀಗಾಗಿ ಈ ಅಪಘಾತಕ್ಕೆ ಆರ್‌ಟಿಒ ಅಧಿಕಾರಿಗಳೇ ಹೊಣೆ’ ಎಂದು ಆರೋಪಿಸಿದ ಟ್ರಕ್ ಚಾಲಕರು, ದಿಢೀರನೆ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ತಮ್ಮ ಟ್ರಕ್‌ಗಳನ್ನು ನಿಲ್ಲಿಸಿ ರಸ್ತೆ ತಡೆ ನಡೆಸಿದರು. ಇದರಿಂದ ಚಿತ್ರದುರ್ಗ-ಕೊಪ್ಪಳ ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 26 at 5.58.21 PM

ಪ್ರತಿಭಟನಾಕಾರರ ಮನವೊಲಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು. ಆರ್‌ಟಿಓ ಅಧಿಕಾರಿಗಳು ತಪಾಸಣೆಯ ಹೆಸರಲ್ಲಿ ಮಾಮೂಲಿ ,ಲಂಚ ಕೇಳುತ್ತಾರೆ ಎಂದು ವಾಹನ ಚಾಲಕರು ಆರೋಪಿಸಿದರು.

ಮೃತಪಟ್ಟ ಚಾಲಕನ ವಿವರ ತಿಳಿದು ಬಂದಿಲ್ಲ. ಘಟನೆಯ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

“ಆರ್‌ಟಿಒ ಅಧಿಕಾರಿಗಳಿಂದ ವಾಹನ ತಪಾಸಣೆ ಸಹಜವಾಗಿ ನಡೆಯುತ್ತಿರುತ್ತದೆ. ಹೆದ್ದಾರಿ ದಾಟುವಾಗ ಎಚ್ಚರಿಕೆ ವಹಿಸಬೇಕು. ಮೃತ ಟ್ರಕ್ ಚಾಲಕನ ಗುರುತು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ಚಾಲಕ ತನ್ನ ದಾಖಲೆ ಪತ್ರಗಳನ್ನು ತೋರಿಸಿ ವಾಪಸ್ ಬರುವಾಗ ಈ ದುರಂತ ಸಂಭವಿಸಿದೆ. ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‌ಪಿ ಶ್ರೀಹರಿಬಾಬು ಬಿ.ಎಲ್. ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...