ವಿಜಯನಗರ | ಮನರೇಗಾದಲ್ಲಿ ಅಕ್ರಮ‌ ಆರೋಪ; ನಿರ್ಲಕ್ಷ್ಯ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಅಡಿಯಲ್ಲಿ ನಿರ್ಲಕ್ಷ್ಯದಿಂದ ಕೆಲಸ ಮಾಡುತ್ತಿರುವ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮ ಪಂಚಾಯಿತಿ ಎಂದು ಪ್ರತಿಭಟನೆ ನಡೆಸಿ, ಪಿಡಿಒ ಅವರಿಗೆ ಮನವಿ ಸಲ್ಲಿಸಿದ್ದಾರೆ.

“ಅಧಿಕಾರಿಗಳು ಕೂಲಿ ಕಾರ್ಮಿಕರಿಂದ ಒಂದು ವಾರ ಕೆಲಸ ಮಾಡಿಸಿದ್ದು, ಈಗ ಕೂಲಿ ಹಣವಿಲ್ಲವೆಂದು ಹೇಳುತ್ತಿದ್ದಾರೆ. ಶ್ರಮಪಟ್ಟು ದುಡಿದ ಕೆಲವು ಕಾರ್ಮಿಕರಿಗೆ ಉದ್ದೇಶ ಪೂರ್ವಕವಾಗಿ ಕಡಿಮೆ ಕೂಲಿ ನೀಡಿ ಕಾರ್ಮಿಕರಿಗೆ ಮರೆಮಾಚುತ್ತಿದ್ದಾರೆ” ಎಂದು ಆರೋಪಿಸಿದರು.

ತಾಲೂಕು ಗ್ರಾಕೂಸ ಕಾರ್ಯಕರ್ತೆ ಭಾಗ್ಯ ಈ ದಿನ.ಕಾಮ್ ಜೊತೆ ಮಾತನಾಡಿ, “ಮನರೇಗಾ ಸಮಸ್ಯೆ ಕೇಳಲು ಹೋದವರಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರುದ್ರಪ್ಪ ಹಾಗೂ ಕೆಲವು ಸದಸ್ಯರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ʼಹಣ ಎಲ್ಲಿಂದ ತರಬೇಕು ನೀವು ಕೇಳೋಕೆ ಯಾರು. ನೀವು ಕೇಳಿದ ಕೂಡಲೇ ನಿಮಗೆ ಕೂಲಿ ಕೊಡಬೇಕಾʼ ಎಂದು ಮಾತನಾಡಿದಾಗ ಕೂಲಿ ಕಾರ್ಮಿಕ ಹಾಗೂ ಅಧ್ಯಕ್ಷರ ಜೊತೆ ಮಾತಿನ ಚಕಮಕಿ ನಡೆಯಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕುಸುನೂರ ಗ್ರಾಮ ಪಂಚಾಯತಿ ಅವ್ಯವಸ್ಥೆ; ಕಾರ್ಮಿಕರಿಗೆ ದೊರೆಯದ ಜಾಬ್ ಕಾರ್ಡ್

ನಾವು ಗ್ರಾಮ ಪಂಚಾಯಿತಿ ಅಧಿಕಾರಿಗೆ ಮನವಿ ಸಲ್ಲಿಸಲು ಹೋದಾಗ ಇವರು ಮಧ್ಯೆ ಪ್ರವೇಶ ಮಾಡಿದ್ದಾರೆ. ಮನರೇಗಾ ಅನುದಾನ ದುರ್ಬಳಕೆಯಾಗುತ್ತಿದ್ದು, ಇದರಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಕೈವಾಡವಿದೆ” ಎಂದು ಆರೋಪಿಸಿದರು.

“ಪಂಚಾಯಿತಿ ಅಕ್ರಮಗಳನ್ನು ಕೇಳಲು ಹೋದವರಿಗೆ 20 ವರ್ಷಗಳಿಂದಲೂ ಇದೇ ಗತಿಯಾಗಿದೆ. ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಾರೆ” ಎಂದು ಆರೋಪಿಸಿದರು.ನಂತರ ಪಿಡಿಒ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಗ್ರಾಮೀಣ ಕೂಲಿ ಕಾರ್ಮಿಕರುಗಳಾದ ನೇತ್ರಾ, ವೀರಮ್ಮ, ಪುಟ್ಟಮ್ಮ, ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...