ವಿಜಯನಗರ | ಅರಣ್ಯದಲ್ಲಿ ಕುರಿಗೆ ಪ್ರವೇಶ ಕಲ್ಪಿಸಿ, ಉಚಿತ ಔಷಧಿ ವಿತರಿಸಿ: ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

Date:

ಅರಣ್ಯ ಪ್ರದೇಶಗಳಲ್ಲಿ ಕುರಿ, ಜಾನುವಾರುಗಳಿಗೆ ಮುಕ್ತವಾಗಿ ಮೇಯಿಸಲು ಅವಕಾಶ ಮಾಡಿಕೊಡುವಂತೆ ಹಾಗೂ ಸಮರ್ಪಕಾವಗಿ ಉಚಿತವಾಗಿ ಔಷಧಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕೊಟ್ಟೂರಿನ ಬಸವೇಶ್ವರ ತೇರು ಮುಂಭಾಗದಿಂದ ಪ್ರಾರಂಭಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸಾವಿರಾರು ಕುರಿಗಳೊಂದಿಗೆ ರಸ್ತೆಯನ್ನು ಬಂದ್ ಮಾಡುವ ಮೂಲಕ ಪ್ರಮುಖ ರಸ್ತೆಯ ಮಾರ್ಗವಾಗಿ ತಾಲೂಕು ಕಚೇರಿ ವರೆಗೆ ಸಾಗಿ ತಹಶೀಲ್ದಾರ್ ಜಿ ಅಮರೇಶ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈರುಳ್ಳಿ ಬೆಳೆಗಾರರ ಜಿಲ್ಲಾಧ್ಯಕ್ಷರಾದ ಅಲಬೂರು ಮಂಜುನಾಥ ಮಾತನಾಡಿ, “ಕುರಿಗಾಯಿಗಳ ಸಮಸ್ಯೆ ವಿಪರೀತವಾಗಿದ್ದು, ಕುರಿಗಳನ್ನು ಅರಣ್ಯದಲ್ಲಿ ಮೇಯಿಸಲು ಬಿಟ್ಟರೆ ಅರಣ್ಯ ಅಧಿಕಾರಿಗಳು ದೌರ್ಜನ್ಯದಿಂದ ವರ್ತಿಸುತ್ತಾರೆ. ಕುರಿಗಾಯಿಗಳ ಮೇಲೆ ಕೇಸು ದಾಖಲಿಸುತ್ತಾರೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಿ ಸರ್ಕಾರವು ಅರಣ್ಯದಲ್ಲಿ ಕುರಿ ಮೇಯಿಸಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
vijayanagar 2

ಈಗ ಮಳೆ ಹೆಚ್ಚಾಗಿದ್ದು, ಈ ಸಂದರ್ಭದಲ್ಲಿ ರೈತರ ಜಮೀನು ಹಾಗೂ ಬದುವುಗಳಲ್ಲಿ ಜಾನುವಾರುಗಳನ್ನು ಮೇಯಲು ಬಿಟ್ಟರೆ ರೈತರು ತಕರಾರು ಅವರು ಉದ್ದೇಶಪೂರ್ವಕವಾಗಿ ತಕರಾರು ಮಾಡಲ್ಲ. ಕುರಿ, ದನಕರಗಳು ಬೆಳೆ ನಾಶ ಮಾಡಬಾರದು ಅಂತ ಉದ್ದೇಶ. ಹಾಗಾಗಿ ಸರಕಾರ ಅರಣ್ಯದಲ್ಲಿ ಜಾನುವಾರುಗಳನ್ನು ಮೇಯಿಸಲು ಅವಕಾಶ ಕಲ್ಪಿಸಬೇಕು ಹಾಗೂ ಅವರ ಪ್ರಕರಣ ದಾಖಲಿಸಬಾರದು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ತಿಮರೋಡಿ, ಮೋಹನ್ ಶೆಟ್ಟಿ ಮನೆಯಲ್ಲಿ ಶೋಧ: ಹಲವು ವಸ್ತು ವಶಕ್ಕೆ ಪಡೆದ ಎಸ್ಐಟಿ

ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಪ್ರಧಾನ ಕಾರ್ಯದರ್ಶಿ ಗುಡಿಯರ್ ಮಲ್ಲಿಕಾರ್ಜುನ್ ಮಾತನಾಡಿ, “ಈ ಸರ್ಕಾರವು ಕುರಿಗಾಯಿಗಳ ಸಮಸ್ಯೆಯನ್ನು ಆಲಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೆಲವೊಂದು ಅರಣ್ಯ ಪ್ರದೇಶಗಳಲ್ಲಿ ಕುರಿಗಳನ್ನು ಭಯ ಬಿಳಿಸುವ ಸಲುವಾಗಿ ಚಿರತೆ ಬಿಟ್ಟು ಕುರಿಗಳನ್ನು ನಾಶ ಪಡಿಸುವ ವ್ಯವಸ್ಥೆ ನಿರ್ಮಾಣ ಮಾಡುತ್ತಿದ್ದಾರೆ ಇದನ್ನು ಅರಣ್ಯ ಸಚಿವರು ಗಂಭೀರವಾಗಿ ಪರಿಶೀಲಿಸಬೇಕಿದೆ ಮತ್ತು ಜಾನುವಾರುಗಳಿಗೆ ಸಮರ್ಪಕ ಔಷಧಿ ಇಲ್ಲದೆ ಹಲವಾರು ಸಮಸ್ಯೆಗೆ ಈಡಾಗಿವೆ ಕುರಿಗಾಯಿಗಳು ಸೌಲಭ್ಯ ವಂಚಿತರಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ಇವರ ಸಮಸ್ಯೆಗಳನ್ನ ಆಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಅಧ್ಯಕ್ಷ ಪಿ.ಚಂದ್ರಶೇಖರ್, ಗಣೇಶ್, ಡಿ.ಕೊಟ್ರೇಶ್, ಪರುಸಪ್ಪ, ಬಾಲಗಂಗಾಧರ್, ರೇವಪ್ಪ, ಬಸಪ್ಪ, ಉಮೇಶ್, ಕೆಂಚಪ್ಪ ಹಾಗೂ ಇತರರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...