ವಿಜಯನಗರ | ಬಾಬಾ ಸಾಹೇಬರ ‘ಸಂವಿಧಾನ’ವೊಂದು ಮಹಾಕಾವ್ಯ: ಎಲ್ ಎನ್ ಮುಕುಂದರಾಜ್

Date:

ನಮ್ಮ ಕಾಲದ ಮಹಾಕಾವ್ಯವೆಂದರೆ ಬಾಬಾ ಸಾಹೇಬರು ರಚಿಸಿರುವ ʼಸಂವಿಧಾನʼ. ಈ ಮಹಾಕಾವ್ಯವನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಣೆ ಮಾಡುವುದು ನಮ್ಮ ಬಹುದೊದ್ದ ಜವಾಬ್ದಾರಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್ ಎನ್ ಮುಕುಂದರಾಜ್ ಅಭಿಪ್ರಾಯಪಟ್ಟರು.

‌ಜಿಲ್ಲೆಯ ಹೊಸಪೇಟೆ‌ ಸರ್ಕಾರಿ ನೌಕರರ ಭವನದಲ್ಲಿ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ‘ಚಕೋರ ಸಾಹಿತ್ಯ ವಿಚಾರ ವೇದಿಕೆʼ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ʼಸಾಹಿತ್ಯ ಅಕಾಡೆಮಿಯ ಪ್ರತಿ ಸದಸ್ಯರಿಗೆ ಜವಾಬ್ದಾರಿ ಕೊಡಲೆಂದು ಪ್ರತಿ ತಿಂಗಳು ‘ಚಕೋರ ಸಾಹಿತ್ಯ ವಿಚಾರ ವೇದಿಕೆʼ ಕಾರ್ಯಕ್ರಮ ಮಾಡಲಾಗುತ್ತಿದೆ. ಇನ್ನು ಜನಸಾಮಾನ್ಯರಿಗೆ ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಈರೀತಿ ಕಾರ್ಯಕ್ರಮ ಮಾಡಲು ಉದ್ದೇಶಿಸಲಾಗಿದೆ. ಧರ್ಮಾಂಧತೆಯಲ್ಲಿ ಮುಳುಗಿರುವ ಯುವ ಸಮೂಹವನ್ನು ಸಾಹಿತ್ಯದ ಮೂಲಕ ಎಚ್ಚರಿಸಿ ಬೆಳಕಿನೆಡೆಗೆ ಕಳುಹಿಸಲು ಪ್ರಯತ್ನಿಸಲಾಗುತ್ತಿದೆʼ ಎಂದರು.

WhatsApp Image 2025 01 22 at 9.04.54 AM

ʼನಮ್ಮ ಕಾಲದಲ್ಲಿ ಪ್ರೇಯಸಿ ಕುರಿತು ಕಾವ್ಯ ರಚಿಸುತ್ತಿದ್ದೆವು. ಆ ರೀತಿ ವಾತಾವರಣ ಆಗ ನಮಗಿತ್ತು; ಆದರೆ, ಈಗ ಯುವ ಸಮೂಹದಲ್ಲಿ ದುಗುಡ, ಸಂಕಟ, ಆತಂಕ, ಹತಾಶೆ, ನೋವುಗಳನ್ನೇ ತುಂಬಿದ್ದೇವೆ. ಇದು ಬದಲಾಗಬೇಕು. ಯುವ ಸಮೂಹದಲ್ಲಿ ಹೊಸ ಬಗೆಯ ಪ್ರೇಮ, ಪ್ರೀತಿ, ಪ್ರಣಯ, ಹೂವು, ಪ್ರೇಯಸಿಯ ಕುರಿತು ಕವಿತೆಗಳನ್ನು ರಚಿಸುವಂತ ಕಾಲವನ್ನು ಸೃಷ್ಟಿಸಿಕೊಡಬೇಕು ಎಂದು ಸಂದೇಶ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಉಪನ್ಯಾಸಕ ಕೆ ರವೀಂದ್ರನಾಥ್ ಮಾತನಾಡಿ, ʼಕನ್ನಡ ಸಾಹಿತ್ಯ ವ್ಯಾಪಕವಾಗಿ ಬೆಳೆಯಲಿಕ್ಕೆ ಕಾರಣ ಸೃಜನಶೀಲತೆ. ಸೃಜನಶೀಲತೆ, ವಿಮರ್ಶೆ, ಸಂಶೋಧನೆ ಕಾವ್ಯ ಸಾಮಾಜಿಕ ಪರಿವರ್ತನೆಯನ್ನು ಬಯಸಬೇಕು ಅದನ್ನು ಸೃಷ್ಟಿ ಕಾವ್ಯ ಎನ್ನುತ್ತಾರೆ. ಹೊಸ ರೂಪಕಗಳನ್ನು ಸೃಷ್ಟಿ ಮಾಡುವುದು ಸೃಜನಶೀಲವಾಗುತ್ತದೆ. ಸೃಜನಶೀಲತೆಯ ವಿಶೇಷ ಗುಣ ಕವಿಯಲ್ಲಿ ಇರಬೇಕು. ರಾಮಾಯಣ, ಮಹಾಭಾರತ, ವಚನ ಸಾಹಿತ್ಯ ಇವೆಲ್ಲವೂ ಸಾರಿದ್ದು ಮಾನವ ಧರ್ಮವನ್ನೇ. ಈಗಿನ ಯುವಕರು ಅರ್ಥಮಾಡಿಕೊಳ್ಳಬೇಕಿರುವುದು ಅದನ್ನೇʼ ಎಂದರು.

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಕೃಷಿಕ ಸಮಾಜದ ಚುನಾವಣೆ: ಜಿಲ್ಲೆಯಿಂದ ಹಲವು ಮಂದಿ ಆಯ್ಕೆ

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಮಾನ್ಪಡೆ, ಸಿದ್ದರಾಮ ಹೊನಕಲ್, ಪೀರ್‌ಬಾಷಾ, ನೂರ್ ಜಹಾನ್, ಭಾರತಿ ಮೂಲಿಮನಿ, ಎಚ್ ಸೌಭಾಗ್ಯಲಕ್ಷ್ಮೀ, ಸುಧಾ ಚಿದಾನಂದ, ಸಹನಾ, ದಯಾನಂದ ಕಿನ್ನಾಳ, ಉಮಾಮಹೇಶ್ವರ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...