ವಿಜಯನಗರ | ಬಸವಣ್ಣನವರು ಅಂತರ್ಜಾತಿ ವಿವಾಹ ಉತ್ತೇಜಿಸಿದ್ದರು: ಸಿಎಂ ಸಿದ್ದರಾಮಯ್ಯ

Date:

ಹನ್ನೆರಡನೇ ಶತಮಾನದಲ್ಲಿಯೇ ಬಸವಣ್ಣವರು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನಿಡಿದ್ದರು. ಆದೇ ರೀತಿ ಈಗ ನಾವೆಲ್ಲರೂ ಅಂತಹ ವಿವಾಹ ಉತ್ತೇಜಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ ಶೇಖ್ ಅವರ ಮಗನ ಮದುವೆ ಜತೆಗೆ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು.

“ಜಾತಿ ವ್ಯವಸ್ಥೆ ತೊಲಗಿ ಸಮಸಮಾಜ ನಿರ್ಮಾಣವಾಗಲು ಅಂತರ್ಜಾತಿ ವಿವಾಹ ಹೆಚ್ಚಾಗಬೇಕು. ಇಂತಹ ಮದುವೆಗಳು ಹೆಚ್ಚಚ್ಚು ನಡೆಯಬೇಕು. ಹಾಗೆಯೇ ಶ್ರೀಮಂತರು ತಮ್ಮ ಸಂಪತ್ತನ್ನು ಇಂತಹ ಕಾರ್ಯಗಳಿಗೆ ಸ್ವಲ್ಪ ಬಳಸಬೇಕು. ನಮ್ಮ ದೇಶದಲ್ಲಿ ಶ್ರೀಮಂತರು, ಬಡವರು ಇಬ್ಬರೂ ಇದ್ದಾರೆ. ಶ್ರೀಮಂತರು ಅದ್ದೂರಿಯಾಗಿ ಮದುವೆ ಮಾಡುತ್ತಾರೆ. ಬಡವರು ಮದುವೆ ಮಾಡಿಕೊಳ್ಳಲು ಕಷ್ಟ. ಇಂತಹ ಸಾಮೂಹಿಕ ಮದುವೆಯಲ್ಲಿ ಬಡವರ ಮದುವೆ ಮಾಡುವುದು ಉತ್ತಮ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಡವರು ಮದುವೆ ಮಾಡಲು ಸಾಲ ಮಾಡುತ್ತಾರೆ. ಮನೆ, ಆಸ್ತಿ, ಒಡವೆ ಮಾರಾಟ ಮಾಡುತ್ತಾರೆ. ಪ್ರತಿಯೊಬ್ಬರೂ ಸರಳ ಮದುವೆಯಾಗಬೇಕು. ಪಕ್ಕದ ಮನೆಯವಳು ಓಲೆ ಹಾಕಿದರೆ ಕಿವಿ ಕಿತ್ತುಕೊಳ್ಳಲು ಸಾಧ್ಯವೆ?. ಬಡವರು ಬಡವರಾಗಿಯೇ ಸಾಯಬೇಕಾ? ಬಡವರೂ ಶ್ರೀಮಂತರಾಗಬಹುದು. ನಾವು ಯಾವ ಜಾತಿಯಲ್ಲಿದ್ದೀವಿ ಅದೇ ಜಾತಿಯಲ್ಲಿಯೇ ಇರಬೇಕೆಂದೇನಿಲ್ಲ” ಎಂದ ಹೇಳಿದರು.

“ನಾವು ಜಾತ್ಯತೀತರಾಗಬೇಕು. ಬಸವಣ್ಣನವರ ಆದರ್ಶಗಳನ್ನು ಪಾಲನೆ ಮಾಡಬೇಕು. ಬಸವಣ್ಣನವರು ಜನರಿಗೆ ಅರ್ಥವಾಗುವ ರೀತಿಯಲ್ಲಿ ಬೋಧನೆ ಮಾಡಿದ್ದಾರೆ. ಬಸವಣ್ಣನವರನ್ನು ನಮ್ಮ ಸರ್ಕಾರ ʼಸಾಂಸ್ಕೃತಿಕ ನಾಯಕʼ ಅಂತ ಮಾಡಿದೆ. ಕುವೆಂಪು ಹೇಳಿದಂತೆ ಹುಟ್ಟುವಾಗ ವಿಶ್ವಮಾನವರಾಗಿ ಇರುತ್ತಾರೆ. ಆದರೆ ಜಾತಿ ವ್ಯವಸ್ಥೆಯಿಂದಾಗಿ ನಾವು ಅಲ್ಪ ಮಾನವರಾಗುತ್ತೇವೆ” ಎಂದು ಹೇಳಿದರು.

“ನಾವು ಇಂತಿಂಥ ಜಾತಿಯಲ್ಲಿ ಹುಟ್ಟುಬೇಕೆಂದು ಅರ್ಜಿ ಹಾಕಿದ್ದೀವಾ? ಒಂದು ಜಾತಿಯವರು ಇನ್ನೊಂದು ಜಾತಿಯನ್ನು ದ್ವೇಷಿಸಬಾರದು, ಪ್ರೀತಿಸಬೇಕು. ಆರ್ಥಿಕ ಸ್ವಾವಲಂಬನೆ ಆಗದಿದ್ದರೆ ಜಾತಿ ವ್ಯವಸ್ಥೆ ಚಲನೆಯಾಗುವುದಿಲ್ಲ. ಜಾತಿ ವ್ಯವಸ್ಥೆ ಇನ್ನೂ ಹೋಗಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾಣೆಹಳ್ಳಿ ಶ್ರೀ ವಿರಚಿತ ‘ಮೋಳಿಗೆ ಮಾರಯ್ಯ’ ಕಿರುನಾಟಕ ಯಶಸ್ವಿ ಪ್ರದರ್ಶನ

“ಅಂಧ ಮಹಿಳೆಗೆ ಸಿರಾಜ್ ಶೇಖ್ ಮದುವೆ ಮಾಡಿಸಿದ್ದು ಖುಷಿಯ ವಿಚಾರ. ಇಬ್ರಾಹಿಂ ಮಸ್ತಾನ್ ಅಂಧ ಮಹಿಳೆ ಯಾಸ್ಮಿನ್‌ನನ್ನು ಮದುವೆಯಾಗಿದ್ದಾರೆ. ನನ್ನ ಮೊದಲನೇ ಮಗ ಅಂತರ್ಜಾತಿ ಮದುವೆಯಾಗಿದ್ದ, ಈಗ ಅವನು ಇಲ್ಲ. ನನ್ನ ಎರಡನೇ ಮಗ ಮದುವೆಯೇ ಆಗಿಲ್ಲ” ಎಂದರು.

“ನಾವು ಮಹಿಳೆಯರು ಆರ್ಥಿಕ ಸ್ವಾವಲಂಬನೆಯಾಗುವ ಕೆಲಸ ಮಾಡುತ್ತೇವೆ. ಶ್ರೀಮಂತರು ಸಾಮಾಜಿಕ ಒಳ್ಳೆಯ ಕೆಲಸ ಮಾಡಬೇಕು. ನಾವು ಸಮಾಜದಿಂದಲೇ ಸಿಎಂ ಆಗಿದ್ದೇನೆ. ಹಾಗಾಗಿ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. ಅಂಬೇಡ್ಕರ್ ಅವರು ಸಮಾನ ಹಕ್ಕು ಕೊಡದೇ ಹೋಗಿದ್ದರೆ, ನಾನು ಸಿಎಂ ಆಗುತ್ತಿರಲಿಲ್ಲ. ಹಾಗಾಗಿ ಸಂವಿಧಾನದ ಪೀಠಿಕೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು” ಎಂದು ಸಿಎಂ ಹೇಳಿದರು.

ಇಬ್ಬರು ಮಕ್ಕಳಷ್ಟೇ ಸಾಕು: ನಮ್ಮ ದೇಶದಲ್ಲಿ 140 ಕೋಟಿ ಜನಸಂಖ್ಯೆಯಿದೆ. ಜನಂಖ್ಯೆಯಲ್ಲಿ ಚೀನಾ ದೇಶವನ್ನು ನಾವು ಹಿಂದಕ್ಕೆ ಹಾಕಿದ್ದೇವೆ. ಅರತಿಗೊಂದು ಮಗು ಕೀರ್ತಿಗೊಂದು ಮಗು ಎನ್ನುವಂತೆ ಎರಡು ಮಕ್ಕಳು ಸಾಕು. ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಕೂಡ ಅವಶ್ಯಕ. ಅಧಿಕಾರ, ಸಂಪತ್ತು ಹಂಚಿಕೆಯಾಗಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...