ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ: ಡಾ ಎಫ್ ಟಿ ಹಳ್ಳಿಕೇರಿ

Date:

ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ. ತಳ ಸಮುದಾಯಗಳಲ್ಲಿ ಒಂದಾದ ಅಲೆಮಾರಿ ಕುರಿಗಾಹಿ ಸಮುದಾಯವು ಅಪರೂಪದ ಸಮುದಾಯವಾಗಿದ್ದು, ಇಂತಹ ತಳಸಮುದಾಯಗಳ ಕುರಿತು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಂಶೋಧನೆಯ ಆಕಾರವನ್ನು ತಾವೇ ಸೃಷ್ಟಿಸಬೇಕು ಎಂದು ಭಾಷಾ ನಿಕಾಯದ ಡೀನ್ ಡಾ ಎಫ್ ಟಿ ಹಳ್ಳಿಕೇರಿ‌ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಸಮಾಜಮುಖಿ ತಿಂಗಳ ಮಾತು-6 ಕಾರ್ಯಕ್ರಮದಲ್ಲಿ ʼಕುರಿಗಾಹಿಗಳ ಬದುಕು ಮತ್ತು ಬವಣೆʼ ವಿಷಯದ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕನ್ನಡ ವಿಶ್ವವಿದ್ಯಾಲಯವು ತಳಸಮುದಾಯಗಳ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತದೆ. ಕನ್ನಡ ವಿಶ್ವವಿದ್ಯಾಲಯ ಈವರೆಗೂ ಹಲವಾರು ತಳಸಮುದಾಯಗಳು ಮತ್ತು ಬುಡಕಟ್ಟು ಸಮುದಾಯಗಳ ಕುರಿತು ಸಂಶೋಧನೆಗಳನ್ನು ನಡೆಸುವ ಮೂಲಕ ಆ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಕೆಲಸದಲ್ಲಿ ತೊಡಗಿಕೊಂಡಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪಿಎಚ್‌ಡಿ ಸಂಶೋಧಕ ತಿಪ್ಪೇಸ್ವಾಮಿ ಬಿ ಅವರು ಕೊಪ್ಪಳ ಜಿಲ್ಲೆಯ ಸೀಮಿತ ಪ್ರದೇಶದಲ್ಲಿ ಕುರಿಗಾಹಿಗಳ ಬದುಕು ಮತ್ತು ಬವಣೆ ಎಂಬ ವಿಷಯದ ಕುರಿತ ಉಪನ್ಯಾಸದಲ್ಲಿ ಕುರಿಗಾಹಿಗಳ ಜೀವನ, ಧಾರ್ಮಿಕ ಆಚರಣೆ ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದರು.

ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ. ಯರ‍್ರಿಸ್ವಾಮಿ ಮಾತನಾಡಿ, “ಸಂಶೋಧಕರು ಕುರಿಗಾಹಿ ಸಮುದಾಯದ ವಿಶಿಷ್ಟತೆ ಮತ್ತು ಧಾರ್ಮಿಕ ಆಚರಣೆಗಳ ಕುರಿತು ಸಂಶೋಧನೆಗೆ ಪೂರಕ ದತ್ತಾಂಶಗಳ ಸಂಗ್ರಹಣೆಯಲ್ಲಿ ತೊಡಗಿಕೊಳ್ಳಬೇಕು. ಜ್ಞಾನವನ್ನು ವೃದ್ಧಿಸಲು ತಾವೇ ಅಧ್ಯಯನ ಸೂತ್ರಗಳನ್ನು ಹುಡುಕಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಈ ಓದಿದ್ದಿರಾ? ಕೊಪ್ಪಳ | ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು, 20 ಸಾವಿರ ದಂಡ

ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಶೋಧನಾರ್ಥಿ ಭೋಜರಾಜ ಆರ್ ಪ್ರಾಸ್ತಾವಿಕ ಮಾತನಾಡಿದರು. ಸಂಶೋಧನಾರ್ಥಿ ಜ್ಯೋತಿ ನಿರೂಪಿಸಿದರು. ಸಂಶೋಧನಾರ್ಥಿ ತಿಪ್ಪೇಸ್ವಾಮಿಯವರು ವಂದಿಸಿದರು. ವಿವಿಧ ವಿಭಾಗಗಳ ಅಧ್ಯಾಪಕರು ಮತ್ತು ಸಂಶೋಧನಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...