ವಿಜಯನಗರ | ಬಿಜೆಪಿ ಮನೆ ದೇವ್ರು ಸುಳ್ಳು, ಶತಭಂಡರು: ಸಿಎಂ ಸಿದ್ದರಾಮಯ್ಯ ಆಕ್ರೋಶ

Date:

‘ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ ಯಾಮಾರಿಸುತ್ತಿದ್ದಾರೆ. ಸುಳ್ಳು ಹೇಳುವುದೇ ಅವರ ಕೆಲಸ. ಖಜಾನೆ ಖಾಲಿಯಾದರೆ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವೇ? ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಬದ್ಧವಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ 74 ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿ, “ಕಾಂಗ್ರೆಸ್ ಪಕ್ಷ ಇನ್ನೂ ಎರಡೂವರೆ ವರ್ಷ ಅಧಿಕಾರದಲ್ಲಿ ಮುಂದುವರೆಯಲಿದೆ, ಜನರ ಆಶೀರ್ವಾದ ಕಾಂಗ್ರೆಸ್ ಪಕ್ಷದ ಮೇಲಿರಲಿ. ಬಿಜೆಪಿಯವರು ಕಾಂಗ್ರೆಸ್‌ ಸರ್ಕಾರದ ಖಜಾನೆ ಖಾಲಿಯಾಗಿದೆ ಎನ್ನುತ್ತಾರೆ. ಖಜಾನೆ ಖಾಲಿಯಾಗಿದ್ದರೆ ಅಭಿವೃದ್ಧಿ ಕೆಲಸ ಆಗುತ್ತಿರಲಿಲ್ಲ. ಬಿಜೆಪಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದಿದೆ. ಅವರಿಗೆ ಮಾನ ಮರ್ಯಾದೆ ಇಲ್ಲ. ಮಹದೇವಪುರ ಕ್ಷೇತ್ರದಲ್ಲಿ ಒಂದೇ ಮನೆಯಲ್ಲಿ 80 ವೋಟುಗಳನ್ನು ಕದ್ದಿದ್ದಾರೆ” ಎಂದು ನೇರ ಆರೋಪ ಮಾಡಿದರು.

“ಸಮಾಜದಲ್ಲಿ ಇಂದಿಗೂ ಅಸಮಾನತೆ ಇದ್ದು, ಅದನ್ನು ನಿವಾರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ, ಬಿಜೆಪಿ ಸಮಾಜದಲ್ಲಿರುವ ಅಸಮಾನತೆಯ ಬಗ್ಗೆ ಮಾತಾಡುವುದಿಲ್ಲ. ವಿನಾಕಾರಣ ಸರಕಾರದ ಬಗ್ಗೆ ಆರೋಪ ಮಾಡುತ್ತಿದೆ. ಕೆರೆ ತುಂಬಿಸುವ ಯೋಜನೆಯಿಂದ 1.76 ಲಕ್ಷ ಜನರಿಗೆ ಹಾಗೂ ಪ್ರಾಣಿ-ಪಕ್ಷಗಳಿಗೆ ಅನುಕೂಲವಾಗಲಿದ್ದು, 42 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ. ಪ್ರಸ್ತುತ 30 ಲಕ್ಷ ಹೆಕ್ಟೇರ್‌ಗೆ ನೀರಾವರಿ ಕಲ್ಪಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆಯೆಂದು ಆರೋಪ ಮಾಡುತ್ತಿದೆ. ಆದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡಿದಿದ್ದೆವೆ. ಶಕ್ತಿ ಯೋಜನೆಯಿಂದ 580 ಕೋಟಿ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ರೈತರ ಪಂಪ್‌ಸೆಟ್‌ಗಳಿಗೆ ₹19,000 ಕೋಟಿ ಸಬ್ಸಿಡಿ ನೀಡಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಒಟ್ಟಾರೆ ₹1 ಲಕ್ಷ ಕೋಟಿ ಖರ್ಚು ಮಾಡಲಾಗಿದೆ” ಎಂದು ಸಿಎಂ ಮಾಹಿತಿ ನೀಡಿದರು.

ಇದನ್ನೂ ಓದಿದ್ದೀರಾ? ಐಕ್ಯತೆಗೆ ಸಾಕ್ಷಿಯಾದ ಗುರ್ಲಾಪೂರ: ಐತಿಹಾಸಿಕ ರೈತ ಹೋರಾಟಗಳ ಪಟ್ಟಿ ಸೇರಿದ ಕಬ್ಬು ಬೆಳೆಗಾರರ ಧರಣಿ

“ಕಬ್ಬಿನ ಎಫ್‌ಆರ್‌ಪಿ ದರ ನಿಗದಿಪಡಿಸುವ ಕೇಂದ್ರ ಸರ್ಕಾರದ ಜವಾಬ್ದಾರಿಯ ಬಗ್ಗೆ ಸಂಸದ ಪ್ರಲ್ಹಾದ ಜೋಶಿ ಮಾತನಾಡುತ್ತಿಲ್ಲ. ನಮ್ಮ ಸರ್ಕಾರ ಕಾರ್ಖಾನೆ ಮಾಲೀಕರ ಸಭೆ ಕರೆದು ಪ್ರತಿ ಟನ್‌ ಕಬ್ಬಿಗೆ ₹3,300 ದರ ನಿಗದಿಪಡಿಸಿದೆ. ಶಾಸಕರು ಎರಡೂವರೆ ವರ್ಷಗಳಲ್ಲಿ ₹1,600 ಕೋಟಿ ಅನುದಾನ ತಂದಿದ್ದಾರೆ. ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ನಮ್ಮಲ್ಲಿ ಇನ್ನೂ ಸಾಕಷ್ಟು ಹಣವಿದೆ. ಖಜಾನೆ ಖಾಲಿಯಾಗಿದ್ದರೆ ಇಷ್ಟೆಲ್ಲ ಅಭಿವೃದ್ಧಿ ಮಾಡುವುದಕ್ಕೆ ಸಾಧ್ಯವಾಗುತ್ತಿತ್ತೆ?” ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕೂಡ್ಲಿಗಿ ಶಾಸಕ ಡಾ. ಎನ್ ಟಿ ಶ್ರೀನಿವಾಸ್‌ ಅವರ ಸರಳತೆ ಮತ್ತು ಸಜ್ಜನಿಕೆಯನ್ನು ಶ್ಲಾಘಿಸಿದ ಸಿಎಂ, “ಇಲ್ಲಿಯ ಶಾಸಕರ ಅಪ್ರೋಚ್ ನೋಡಿದ ತಕ್ಷಣ ಅನುದಾನ ನೀಡಬೇಕು ಎನಿಸುತ್ತದೆ. ಕಳೆದ ಎರಡೂವರೆ ವರ್ಷಗಳಲ್ಲಿ ಶಾಸಕರು ಅಸಾಧ್ಯವಾದ ಕೆಲಸಗಳನ್ನು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...