ವಿಜಯನಗರ | ಸಮಾಜದ ಅನಿಷ್ಟ ಪದ್ದತಿಗಳನ್ನು ಕಡ್ಡಾಯವಾಗಿ ನಿಯಂತ್ರಿಸಿ; ಬಸವಶ್ರೀ ಪ್ರಶಸ್ತಿ ಪುರಸ್ಕೃತೆ ವಿದ್ಯಾ ಪಟೇಲ್

Date:

  • ಮಲವಿ ಗ್ರಾಮದಲ್ಲಿ ಮದ್ಯಮಳಿಗೆ ತೆರೆಯದಂತೆ ಎಚ್ಚರಿಕೆ
  • ಗ್ರಾಮೀಣ ಭಾಗದಲ್ಲಿ ನಡೆದ ಜಿಲ್ಲಾ ಮಹಿಳಾ ಸಮಾವೇಶ

ದೇವದಾಸಿ ಪದ್ಧತಿ, ಬಾಲ್ಯ ವಿವಾಹ ಹಾಗೂ ಮದ್ಯದಂತಹ ಅನಿಷ್ಟ ಪದ್ದತಿಗಳನ್ನು ಕಡ್ಡಾಯವಾಗಿ ನಿಯಂತ್ರಿಸಬೇಕು. ಇಲ್ಲದಿದ್ದರೆ ಗ್ರಾಮದಲ್ಲಿ ನಿರುದ್ಯೋಗ ಮತ್ತು ಬಡತನಗಳು ಹೆಚ್ಚಾಗುತ್ತವೆ ಎಂದು ಬಸವ ಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ವಿದ್ಯಾ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಮಂಗಳವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ರಾಜ್ಯ ಮಹಿಳಾ ಒಕ್ಕೂಟ ಮತ್ತು ಕೂಲಿ ಕಾರ್ಮಿಕರ ಸಂಘಟನೆ’ ವತಿಯಿಂದ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾ ಪಾಟೀಲ್‌ ಮಾತನಾಡಿ, “ಸರ್ಕಾರದ ಶಾಲೆ ಬಾಗಿಲು ತೆರೆಯುವ ಮುನ್ನವೇ ಗ್ರಾಮಗಳಲ್ಲಿ ಮದ್ಯದಂಗಡಿ ತೆರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಮಕ್ಕಳಲ್ಲಿ ಆರೋಗ್ಯದ ಸಮಸ್ಯೆ ಜೊತೆಗೆ ಅನಕ್ಷರತೆ ಸೃಷ್ಠಿಯಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮದ ಹಲವರು ಕುಡಿತಕ್ಕೆ ದಾಸರಾಗಿ ತಮ್ಮ ತಮ್ಮ ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಲು ಆಗುತ್ತಿಲ್ಲ. ಹಾಗಾಗಿ, ಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಇಲ್ಲದಿದ್ದರೆ ಮದ್ಯದಂಗಡಿ ಮುಂದೆ ಕುಳಿತು ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ನಂದಿಪುರ ಕ್ಷೇತ್ರ ಮಹೇಶ್ವರಸ್ವಾಮಿ ಮಾತನಾಡಿ, “ಮಹಿಳೆಯರು ತಮ್ಮ ಹಕ್ಕುಗಳನ್ನು ಹೋರಾಟದ ಮೂಲಕ ಪಡೆದುಕೊಂಡು ಪುರುಷರಿಗೆ ಸರಿಸಾಮಾನವಾಗಿ ಜೀವನ ಸಾಗಿಸಬೇಕು. ಉಳಿತಾಯ ಖಾತೆ ತೆರೆದು ಪ್ರಗತಿ ಹೊಂದಬೇಕು. ಇಂತಹ ವಿಚಾರಗಳಿಗೆ ನಿಮಗೆ ಬೆಂಬಲವಾಗಿ ಇರುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು | ಮಕ್ಕಳ ಕಳ್ಳಿಯನ್ನು ಬಂಧಿಸಿದ ಕಲಾಸಿಪಾಳ್ಯ ಪೊಲೀಸರು

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೋರಾಟಗಾರ್ತಿ ಗೀತಾ ಮಾತನಾಡಿ, “ನಮ್ಮ ಕುಟುಂಬದ ಜವಾಬ್ದಾರಿ ನಿರ್ವಹಿಸುವ ಪುರುಷರು ಕುಡಿತದ ಬಲೆಗೆ ಸಿಕ್ಕಿ ಬದಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ” ಎಂದು ಭಾವುಕರಾದರು.

ಗ್ರಾಮೀಣ ಕೂಲಿ ಕಾರ್ಮಿಕ ಸಂಘದ ತಾಲೂಕು ಕಾರ್ಯಕರ್ತೆ ಎಂ.ಬಿ ಕೊಟ್ರಮ್ಮ ಮಾತನಾಡಿ, “ಇಡೀ ಕರ್ನಾಟಕದಲ್ಲೇ ಮದ್ಯ ನಿಷೇಧ ಮಾಡಬೇಕೆಂದು ಮೊದಲು ಹೋರಾಟಕ್ಕೆ ಚಾಲನೆ ನೀಡಿದ ಗ್ರಾಮವೆಂದರೆ ಅದು ಮಾಲವಿ ಗ್ರಾಮ. ಆದರೆ, ಇಂದು ಇದೆ ಗ್ರಾಮದಲ್ಲೆ ಕೆಲ ರಾಜಕೀಯ ಪ್ರಭಾವಿಗಳು ಮದ್ಯದಂಗಡಿ ತೆರೆಯಲು ಮುಂದಾಗಿದ್ದಾರೆ. ಇದನ್ನು ಗ್ರಾಮದ ಜನರು ತೆರೆಯದಂತೆ ಹೋರಾಟಕ್ಕೆ ಮುಂದಾಗಬೇಕಿದೆ” ಎಂದು ಕರೆಕೊಟ್ಟರು.

ವಿರುಪಮ್ಮ ಅವರು ದೇವದಾಸಿ ಮಹಿಳೆಯರ ಸೌಲಭ್ಯಗಳು ಹಾಗೂ ಅವರ ಮಕ್ಕಳ ವಿದ್ಯಾಭ್ಯಾಸದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಬಸಲಿಂಗಮ್ಮ, ರೇಣುಕಮ್ಮ, ಎಲ್ಲಪ್ಪ, ಬುಡೇನ್ ಸಾಬ್, ಮೋಕ್ಷಮ್ಮ ಮಸ್ಕಿ, ಮಲ್ಲೇಶ್ ಅಕ್ಕಮಹಾದೇವಿ, ಹನುಮಂತಪ್ಪ ಸೇರಿದಂತೆ ಹಲವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...