ವಿಜಯನಗರ | ಸಮಕಾಲೀನ ಕಾವ್ಯಗಳು ನಿವೇದನಾತ್ಮಕವಾಗಿವೆ: ಆರಿಫ್ ರಾಜಾ

Date:

ಸಮಕಾಲೀನ ಕಾವ್ಯಗಳು ನಿವೇದನಾತ್ಮಕವಾಗಿವೆ. ಸಮಕಾಲೀನದಲ್ಲಿ ಭಾಷೆಗಳು ಸಂಕುಚಿತಗೊಳ್ಳುತ್ತಿದ್ದು, ಇವು ಕಣ್ಣಿಗೆ ಕಾಣದ ಹಿಂಸೆಯಾಗಿ ಪರಿವರ್ತನೆಗೊಂಡಿವೆ ಎಂದು ಕವಿ, ಅನುವಾದಕ ಆರಿಫ್ ರಾಜಾ ಅಭಿಪ್ರಾಯಪಟ್ಟರು.

‌ವಿಜಯನಗರದ ಕನ್ನಡ ವಿವಿಯ ಪಂಪ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಿಂದ ಹಮ್ಮಿಕೊಳ್ಳಲಾಗಿದ್ದ ʼಕವಿತೆಗಳ ಓದು ಹಾಗೂ ಸಂವಾದ ಸಮಕಾಲೀನ ಭಾರತೀಯ ಕಾವ್ಯ ಸಂವೇದನೆಯ ಸ್ವರೂಪʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾವು 90ರ ದಶಕದ ನಂತರ ದಲಿತ ಕಾವ್ಯಗಳ ಸಾಹಿತ್ಯದಲ್ಲಾದ ಏರುಪೇರುಗಳತ್ತ ಗಮನಹರಿಸಬೇಕು. ಕಾವ್ಯಗಳು ಕಲಾತ್ಮಕ ಮೌಲ್ಯಕ್ಕಿಂತ ಆತ್ಮಾವಲೋಕನಕ್ಕೆ ಹೆಚ್ಚು ಒತ್ತು ನೀಡಿದೆ. ಇನ್ನೂ ಅಮೂರ್ತ ಚಿಂತನೆಗೆ ನಾವು ಹೆಚ್ಚು ಹೊತ್ತು ನೀಡಬಾರದು ಎಂದು ನುಡಿಯುತ್ತ, ಹೆದರುವಂತಹ ಲೇಖಕ ಸಮಾಜಕ್ಕೆ ಯಾವುದೇ ಕೊಡುಗೆಗಳನ್ನು ನೀಡುವುದಿಲ್ಲ.‌ ಸಮಕಾಲೀನ ಕಾವ್ಯಗಳು ವಾಸ್ತವವಾಗಿರಬೇಕು” ಎಂದರು.

ಡಾರ್ಜಲಿಂಗ್‌ನ ಕವಿ ಮತ್ತು ಪತ್ರಕರ್ತ ಮನೋಜ್ ಬೋಗಾಟಿ ಅವರು ತಮ್ಮ ‘ಇದು ಶಾಲೆಯಲ್ಲ ಅಡುಗೆ ಮನೆ’ ಮತ್ತು ‘ಅಮೆರಿಕ ಹೆದುರುತ್ತದೆ’ ಎಂಬ ಕಾವ್ಯಗಳ ಮೂಲಕ ತಮ್ಮ ಗೋರ್ಖ ಸಮುದಾಯದ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿ, “ಡಾರ್ಜಲಿಂಗ್‌ನ ಚಹಾ ಜಗತ್ತಿನಾದ್ಯಂತ ತುಂಬಾ ಫೇಮಸ್. ಉತ್ತಮ ಗುಣಮಟ್ಟದ ಚಹಾಕ್ಕೆ ಲಕ್ಷಾಂತರ ರೂಪಾಯಿ ಬೆಲೆ ಸಿಗುತ್ತದೆ. ಆದರೆ ಅದೇ ಚಹಾದ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾತ್ರ ಕಡಿಮೆ ಕೂಲಿ ಸಿಗುತ್ತದೆ. ಇಲ್ಲಿಂದ ಆರಂಭವಾದ ತಾರತಮ್ಯ ಸ್ಥಳೀಯರ ಬದುಕು, ಭಾಷೆ, ಸಂಸ್ಕೃತಿಯ ಮೇಲೆ ಪ್ರಭಾವ ಬೀರಿ ಸ್ಥಳೀಯರ ಅಸ್ಮಿತೆಗೆ ಧಕ್ಕೆ ಉಂಟಾಗಿದೆ. ಅನ್ಯ ಭಾಷೆ ಏರಿಕೆಯಿಂದ ಎಲ್ಲ ಕ್ಷೇತ್ರದಲ್ಲಿಯೂ ಬುಡಕಟ್ಟು ಸಮುದಾಯಗಳ ಅನನ್ಯತೆ ಕಣ್ಮರೆಯಾಗಿವೆ ಎಂದಿದ್ದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 13 at 7.25.20 PM 1 1

ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಡೀನ್ ಡಾ.‌ ಎಫ್ ಟಿ ಹಳ್ಳಿಕೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ನೇಪಾಳಿ ಸಾಹಿತ್ಯದ ಘಟನೆಗಳನ್ನು ನಾವೆಲ್ಲರೂ ಅರಿಯಬೇಕು. ಕಾವ್ಯಗಳ ಅಧ್ಯಯನದ ಜೊತೆಗೆ ಅಲ್ಲಿನ ಸ್ಥಳೀಯ ಭಾಷೆಯ ಧೋರಣೆಯನ್ನು ಅಧ್ಯಯನ ಮಾಡಿದಾಗ ಸ್ಥಳೀಯ ಜೀವನ ಮತ್ತು ಬದುಕನ್ನು ತಿಳಿಯಬಹುದು” ಎಂದರು.

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಸುಕ್ರಿ ಮಾತೆ ನಿಧನಕ್ಕೆ ಹಂಪಿ ಕನ್ನಡ ವಿವಿ ಸಂತಾಪ

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವೆಂಕಟಗಿರಿ ದಳವಾಯಿ, ವಿವಿಧ ನಿಕಾಯಗಳ ಡೀನ್‌ಗಳು, ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...