ವಿಜಯನಗರ | ಮರಿಯಮ್ಮನಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ; ಪಂಚಾಯಿತಿ ಆಡಳಿತ ನಿರ್ಲಕ್ಷ್ಯ

Date:

ಮಹಿಳೆಯರು ತಮ್ಮ ಕೆಲಸಗಳನ್ನು ಬಿಟ್ಟು ಉರಿ ಬಿಸಿಲಿನಲ್ಲಿ ನೀರು ತುಂಬಿಸಲು ನಿಂತಿದ್ದಾರೆ. ಜತೆಗೆ ಜಗಳವೂ ನಡೆಯುತ್ತಿದ್ದು, ಈಗಾಗಲೇ ವಿಜಯನಗರ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನೀರಿಗೆ ಹಾಹಾಕಾರ ಬಂದೊದಗಿದೆ.

ಹಲವು ವರ್ಷಗಳಿಂದ ಮರಿಯಮ್ಮನಹಳ್ಳಿಯ ಜನತೆ ನೀರಿಲ್ಲದೆ ಪರದಾಡುತ್ತಿದ್ದಾರೆ. ಇಡೀ ಊರಿಗೆ ಒಂದೇ ಒಂದು ನೀರಿನ ಟ್ಯಾಂಕ್ ಇದ್ದು, ಅದರಲ್ಲಿ ನಾಲ್ಕು ನಳಗಳಿವೆ. ಒಂದೇ ಇಂಚಿನಷ್ಟು ಗಾತ್ರದಲ್ಲಿ ಸುರಿಯುವ ನೀರಿಗೆ ಬೆಳಗ್ಗೆಯಿಂದ ಸಂಜೆಯವರೆಗೂ ನೀರನ್ನು ತುಂಬಿಸುವ ಕೆಲಸದಲ್ಲಿ ತೊಡಗಿರುತ್ತಾರೆ. ನೀರಿಗಾಗಿ ಮಹಿಳೆಯದ ನಡುವೆ ಗದ್ದಲ ಗಲಾಟೆಗಳೂ ನಡೆಯುತ್ತಿವೆ.

ಸ್ಥಳೀಯರಾದ ಶಾಂತಮ್ಮ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮ ಪಂಚಾಯಿತಿ ಪಕ್ಕದಲ್ಲಿ ಇದ್ದರೂ ನೀರಿನ ಸಮಸ್ಯೆ ಕಾಡುತ್ತದೆ. ಮನೆಗಳ ಮುಂದೆ ಪೈಪ್ ಇದ್ದರೂ ಯಾವುದೇ ನೀರಿನ ಸಂಪರ್ಕವಿಲ್ಲ. ಗ್ರಾಮ ಪಂಚಾಯತಿ ಸದ್ಯಸರಿಗೆ ಎಷ್ಟು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಪಕ್ಕದಲ್ಲಿ ಟಿಬಿ ಡ್ಯಾಂ ಇದ್ದರೂ ನಮಗೆ ಕುಡಿಯುವುದಕ್ಕೆ ನೀರಿಲ್ಲ. ಟ್ಯಾಂಕ್ ಪಕ್ಕದಲ್ಲಿ ಚರಂಡಿ ನೀರು ಹರಿಯುತ್ತದೆ. ಇದರಿಂದಾಗಿ ಕುಡಿಯುವುದಕ್ಕೆ ನೀರು ಸೂಕ್ತವಾಗಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ನಿವಾಸಿ ಮಂಗಳಮ್ಮ ಈ ದಿ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದಲ್ಲಿ ಸರಿಯಾದ ಸಮಯಕ್ಕೆ ನೀರು ಬಿಡುವುದಿಲ್ಲ. ಯಾವಾಗ ನೀರು ಬಿಡುತ್ತಾರೊ ಆಗ ಕೆಲಸದ ಸ್ಥಳದಿಂದ ಉರಿಬಿಸಿಲಿನಲ್ಲಿ ಬಂದು ನೀರು ತುಂಬಿಸಿಕೊಳ್ಳಬೇಕು. ನಾವು ವಯಸ್ಸಾದವರು ಇಲ್ಲೇ ಪಕ್ಕದಲ್ಲಿ ಬಳ್ಳಾರಿ ಹೆದ್ದಾರಿ ಇದೆ. ತುಂಬಾ ವಾಹನಗಳು ಚಲಿಸುತ್ತಿರುತ್ತವೆ. ನೀರಿಗಾಗಿ ಗಾಬರಿಯಿಂದ ಓಡಾಡುವಾಗ ನೋಡಿಕೊಂಡು ನಡೆದಾಡಬೇಕು. ಇಲ್ಲವಾದರೆ ನಮ್ಮ ಜೀವಕ್ಕೇ ಅಪಾಯವಿದೆ” ಎಂದು ಹೇಳಿದರು.

ಸ್ಥಳೀಯ ಭರಮಪ್ಪ ಮಾತನಾಡಿ, “ಬೇಸಿಗೆ ಕಾಲ ಆರಂಭವಾಗಿದ್ದು, ಈಗಾಗಲೇ ನೀರಿನ ಸಮಸ್ಯೆ ಎದುರಾಗಿದೆ. ಬೇಸಿಗೆ ಮುಗಿಯುವವರೆಗೂ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬೇಕಾಗುತ್ತದೆ. ಅಂತಹ ಸಮಯದಲ್ಲಿ ನಮಗೆ ಇನ್ನೂ ಕಷ್ಟವಾಗುತ್ತದೆ. ಇರುವ ಟ್ಯಾಂಕ್‌ಗಳಿಗೆ ನಳಗಳು ಇಲ್ಲ. ಕಟ್ಟಿಗೆಯಿಂದ ನಳಕ್ಕೆ ತೂರಿಸಿದರೆ ನೀರು ಹೊರಗೆ ಬರುತ್ತದೆ. ನಳಕ್ಕೆ ಕಸ-ಕಡ್ಡಿ ಕಟ್ಟಿಕೊಂಡಿದ್ದು, ಅಶುದ್ದ ನೀರು ಬರುತ್ವಿತದೆ” ಎಂದು ಹೇಳಿದರು.

ಮಹಿಳಾ ಸಂಘದ ಸದಸ್ಯರು ಮಾತನಾಡಿ, “ನೀರಿಗಾಗಿ ಬಹುತೇಕ ಬಾರಿ ಹೋರಾಟ ಮಾಡಿ ಪಂಚಾಯಿತಿಯ ಎಲ್ಲ ಸಿಬ್ಬಂದಿಗೆ ಎಷ್ಟು ಬಾರಿ ಮನವಿ ನೀಡಿದರೂ ನಮಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಊರಿಗೆ ಅನುಕೂಲವಾಗುವಂತೆ ನೀರಿನ ವ್ಯವಸ್ಥೆ ಮಾಡಿ ಎಂದು ಊರಿನ ಜನ ಕೇಳಿಕೊಂಡರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿದ್ದೀರಾ? ಶಿವಮೊಗ್ಗ | ಮಹಾನಗರ ಪಾಲಿಕೆ ವ್ಯಾಪ್ತಿಯ 27ನೇ ವಾರ್ಡ್ ಅವ್ಯವಸ್ಥೆಯ ಆಗರ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಸ್ಥಳೀಯ ನಿವಾಸಿ ಹುಲಿಗೇಶ ಮಾತನಾಡಿ, “ಮರಿಯಮ್ಮನಹಳ್ಳಿ ಇದೀಗ ಪಟ್ಟಣ ಪಂಚಾಯಿತಿ ಆಗಿದೆ. ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ಆದರೂ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಮಾತ್ರ ಬಗೆಹರಿಯುತಿಲ್ಲ. ಇದರಿಂದ ಜಾತ್ರೆ, ಹಬ್ಬದ ದಿನಗಳಲ್ಲಿ ತುಂಬಾ ತೊಂದರೆ ಉಂಟಾಗುತ್ತಿದೆ” ಎಂದು ಹೇಳಿದರು.

ವರದಿ : ಅಂಕಲೇಶ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...