ವಿಜಯನಗರ | ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಇಳಿಸುವಂತೆ ಡಿವೈಎಫ್‌ಐ ಮನವಿ

Date:

ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಹೆಚ್ಚಳ ವಿರೋಧಿಸಿ, ಹಾಗೂ ಸ್ಥಳೀಯ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್‌ ಇಂಡಿಯಾ (ಡಿವೈಎಫ್‌ಐ) ವಿಜಯನಗರದ ಹೊಸಪೇಟೆಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿತು.

“ನಿರಂತರ ಬೆಲೆ ಏರಿಕೆ ಇಂದ ಬೇಸತ್ತ ಜನ ಈ ಬಾರಿ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ನೀಡಿದ್ದರು. ಆದರೆ ಬಿಜೆಪಿಯ ಇನ್ನೊಂದು ಮುಖದಂತೆ ಕಾಂಗ್ರೆಸ್‌ ಸರ್ಕಾರ ನೆಡೆದುಕೊಳ್ಳುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯ ಜೊತೆಗೆ ಈಗ ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಹೆಚ್ಚಳ ಮಾಡಿದ್ದು, ಇದು ವಸೂಲಾತಿ ಕ್ರಮ ಆಗಿದೆ. ಇದನ್ನು ಕೂಡಲೇ ಕೈಬಿಡಬೇಕು. ಹೊಸ ರೇಷನ್ ಕಾರ್ಡ್ ವ್ಯವಸ್ಥೆ ಕೂಡ ಆಗಬೇಕು ಮತ್ತು ಸರ್ವರ್ ಸಮಸ್ಯೆಗೆ ಸೂಕ್ತ ಕ್ರಮಕೈಗೊಳ್ಳಬೇಕು. ಇದೆಲ್ಲದರ ಜೊತೆಗೆ ಸಂಘಟನೆಯ ನ್ಯಾಯಯುತ ಬೇಡಿಕೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು” ಎಂದು ಸಂಘಟನೆಯ ಮುಖಂಡರು ಒತ್ತಾಯಿಸಿದರು.

ಮಧ್ಯವರ್ತಿ ಹಾವಳಿ ತಡೆಗಟ್ಟಬೇಕು, ಜಾತಿ ಆದಾಯ, ವಾಸಸ್ಥಳ, ವಂಶ ವೃಕ್ಷ ಇತರೆ ಪ್ರಮಾಣ ಪತ್ರ ನೀಡುವ 21ದಿನದ ಅವಧಿಯಯನ್ನ ಒಂದು ವಾರಕ್ಕೆ ಇಳಿಸಬೇಕು, ಫಹಣಿ ನೀಡಲು ಇರುವ ಸೇವಾ ಶುಲ್ಕ ಕಡಿತಗೊಳಿಸಬೇಕು. ಜನಸ್ನೇಹಿ, ಆಧಾರ್ ಕಾರ್ಡ್, ಕೇಂದ್ರಗಳ ಸಂಖ್ಯೆ ಹೆಚ್ಚುಗೊಳಿಸಬೇಕು. ಯುವಜನ ಸಬಲೀಕರಣ ಮತ್ತು ಕ್ರೀಡೆಯ ಬಗ್ಗೆ ಇರುವ ಯೋಜನೆಗಳ ವಿವರಣೆಯನ್ನ ಯುವಜನತೆಗೆ ನೀಡಲು ತಾಲೂಕು ಆಡಳಿತ ಯೋಜನೆ ರೂಪಿಸಬೇಕು. ಜನನ-ಮರಣ ಪತ್ರ ನೋಂದಾಯಿಸಿಕೊಳ್ಳುವ ಸೇವಾ ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ: ಡಾ ಎಫ್ ಟಿ ಹಳ್ಳಿಕೇರಿ

ಈ ವೇಳೆ ಈಡಿಗರ ಮಂಜುನಾಥ, ವಿ.ಸ್ವಾಮಿ, ಬಂಡೆ ತಿರುಕಪ್ಪ, ಅಲ್ತಾಫ್, ದಿವಾಕರ್, ಸೂರಿ, ಪವನ್, ಶಿವ ರೆಡ್ಡಿ, ರೆಹಮಾನ್, ಸುಧಾಕರ್ ಹಾಗೂ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...