ವಿಜಯನಗರ | ತರಕಾರಿ ಮಾರುಕಟ್ಟೆ ಅವ್ಯವಸ್ಥೆ ಬಗೆಹರಿಸುವಂತೆ ರೈತ ಸಂಘ ಆಗ್ರಹ

Date:

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ತರಕಾರಿ ಮಾರುಕಟ್ಟೆಯ ಅವ್ಯವಸ್ಥೆ ಹಾಗೂ ಸಮಸ್ಯೆಯನ್ನು ಬಗೆಹರಿಸುವಂತೆ ರೈತರು ಹಾಗೂ ರೈತ ಸಂಘ ಪುರಸಭೆ ಮುಖ್ಯಾಧಿಕಾರಿ ಎಚ್ ಇಮಾಮ್ ಸಾಬ್ ಅವರಿಗೆ ಮನವಿ ಸಲ್ಲಿಸಿದರು.

“ಹೂವಿನಹಡಗಲಿ ಪಟ್ಟಣದಲ್ಲಿ ಇದು ದೊಡ್ಡ ಮಾರುಕಟ್ಟೆಯಾಗಿದ್ದು, ಪ್ರತಿ ಶನಿವಾರ ಸಂತೆ ನಡೆಯುತ್ತದೆ. ತಾಲೂಕಿನ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಅವ್ಯವಸ್ಥೆಯ ಆಗರವಾಗಿದೆ. ಆದ್ದರಿಂದ, ಸಮಸ್ಯೆಗಳನ್ನು ಬಗೆಹರಿಸಿ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು” ಎಂದು ರೈತ ಸಂಘ ಹಾಗೂ ತರಕಾರಿ ಬೆಳೆಗಾರರು ಒತ್ತಾಯಿಸಿದರು.

“ಪಟ್ಟಣದ ತರಕಾರಿ ಮಾರುಕಟ್ಟೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ತರಕಾರಿ ಮಾರಾಟ ಮಾಡಲು ಬರುವ ನೂರಾರು ರೈತರಿಗೆ ಹಾಗೂ ತರಕಾರಿ ವ್ಯಾಪಾರಸ್ಥರಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ರೈತ ಸಂಘದ ಅದ್ಯಕ್ಷ ಸಿದ್ಧಪ್ಪ ಹೊಸಮನಿ ಮಾತನಾಡಿ, “ಪ್ರತಿ ವಾರ ತರಕಾರಿ ಕೊಂಡುಕೊಳ್ಳಲು, ತರಕಾರಿ ಬೆಳದ ರೈತರು ಹಾಗೂ ವ್ಯಾಪಾರಸ್ಥರು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ. ಇದೇ ಮಾರುಕಟ್ಟೆಯನ್ನು ಅವಲಂಭಿಸಿದ್ದಾರೆ. ಸಾವಿರಾರು ಜನಸಂದಣಿ ಸೇರುವ ತರಕಾರಿ ಮಾರುಕಟ್ಟೆಗೆ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯಾಗಿದೆ. ಮಳೆಗಾಲದಲ್ಲಿ ಬಜಾರು ನೀರಿನಿಂದ ತುಂಬಿ ಕೆಸರಾಗಿರುತ್ತದೆ. ಕುಳಿತುಕೊಂಡು ಸಂತೆ ಮಾಡುವುದು ದುಸ್ತರವಾಗಿದೆ. ಸರಿಯಾದ ದಾರಿಯೂ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕೆಸರು ಗದ್ದೆಯಂತಾದ ಮಾರುಕಟ್ಟೆಯಲ್ಲಿ ವೃದ್ಧರು ಕಾಲು ಜಾರಿ ಬಿದ್ದ ಬಹುತೇಕ ಪ್ರಸಂಗಗಳು ನಡೆದಿವೆ. ಸುತ್ತಮುತ್ತಲಿನ ತರಕಾರಿ ಬೆಳೆಯುವ ರೈತರಿಗೆ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಅನುಕೂಲವಾಗಿರುವ ಮಾರುಕಟ್ಟೆಯಾಗಿದೆ. ಇಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿರುವುದರಿಂದ ಮುಖ್ಯರಸ್ತೆಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಇದರಿಂದ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಂಚಾರಕರಿಗೆ ತುಂಬಾ ತೊಂದರೆಯಾಗುತ್ತಿದೆ. ಮಧ್ಯವರ್ತಿಗಳು ಜಕಾತಿ ವಸೂಲಿ ಮಾಡುವುದರಿಂದ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಇದರಿಂದ ಮುಕ್ತಗೊಳಿಸಬೇಕು. ಅಲ್ಲದೆ ಬಜಾರನ್ನು ಸ್ವಚ್ಚಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪ್ರಶ್ನೆ ಮಾಡಿದವರನ್ನು ರೌಡಿ ಪಟ್ಟಿಗೆ ಸೇರಿಸಲಾಗುತ್ತಿದೆ: ಕೋಡಿಗಲ್ ರಮೇಶ್ ಆರೋಪ

ಕಾರ್ಯದರ್ಶಿ ಶಿವರಾಜ್ ಎಂ ಹೊಳಗುಂದಿ, ಉಪಾಧ್ಯಕ್ಷರು ವಿಠಲ ನಾಯಕ್, ವಿ ಬಿ ಚನ್ನಬಸಪ್ಪ, ಗಿರೀಶ್, ದುರ್ಗಪ್ಪ ದವಲ ಸಾಬ್, ಮಂಜುನಾಥಪುರ ಭೋಜ ನಾಯಕ್, ಸುನೀಲ್ ನಾಯಕ್, ಸಂತೋಷ ನಾಯಕ್ ಹಾಗೂ ತರಕಾರಿ ಬೆಳೆಗಾರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...