ವಿಜಯನಗರ | ಮೆಗಾ ಡೇರಿ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಆಗ್ರಹ

Date:

ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಮೆಗಾ ಡೇರಿ ಹಾಗೂ ಆಡಳಿತ ಕಚೇರಿ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಹಾಲು ಉತ್ಪಾದಕರು, ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳಿಂದ ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಬಸವೇಶ್ವರ ಸರ್ಕಲ್‌ನಿಂದ ಸಾಗಿ ಅಂಬೇಡ್ಕರ್ ಸರ್ಕಲ್‌ನಲ್ಲಿ ಅಂಬೇಡ್ಕರ್ ಸರ್ಕಲ್ ಮೂಲಕ ಹಾದು ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಕಾಲ್ನಡಿಗೆಯಲ್ಲಿ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಿತರಕ್ಷಣಾ ಸಮಿತಿಯ ಜಿಲ್ಲಾಧ್ಯಕ್ಷ ಎಂ ಬಸವರಾಜ್ ಕಕ್ಕುಪ್ಪಿ ಮಾತನಾಡಿ, “ಯಾವುದೇ ಕಾರಣಕ್ಕೂ ಬಳ್ಳಾರಿಗೆ ನಾವು ಹಾಲನ್ನು ಕಳುಹಿಸುವುದಿಲ್ಲ. ಪ್ರತ್ಯೇಕ ಒಕ್ಕೂಟ ಆಗುವವರೆಗೂ ನಾವು ಪ್ರತಿಭಟನೆ ಕೈಬಿಡುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಿಂದ 1.20 ಲಕ್ಷ ಲೀಟರ್ ಹಾಲು ಸರಬರಾಜಾಗುತ್ತದೆ. ಆದರೆ, ಬಳ್ಳಾರಿಯಲ್ಲಿ ಕೇವಲ 9 ಸಾವಿರ ಲೀಟರ್ ಹಾಲು ಶೇಖರಿಸುವವರು ಅಧಿಕಾರದ ಆಸೆಗಾಗಿ ವಿಜಯನಗರ ಜಿಲ್ಲೆಗೆ ಯಾವುದೇ ಯೋಜನೆ ಕೊಡದಂತೆ ಬಳ್ಳಾರಿಯ ಕೆಲವು ಕಿಡಿಗೇಡಿಗಳು ತಡೆಯುತ್ತಿದ್ದಾರೆ. ಹೊಸದಾಗಿ ರಚನೆಯಾಗಿರುವ ಜಿಲ್ಲೆಗೆ ಬೃಹತ್ ಇಲಾಖೆಗಳು ಇಲ್ಲ. ಎಲ್ಲವೂ ಬಳ್ಳಾರಿಯಲ್ಲಯೇ ಇವೆ. ನಮ್ಮ ಜಿಲ್ಲೆಯು ಹಿಂದುಳಿಯುವಿಕೆಗೆ ಕಾರಣವಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಿಸಾನ್ ಜಾಗೃತಿ ಸಂಘದ ಉಪಾಧ್ಯಕ್ಷ ಖಾದರ್ ಸಾಹೇಬ್ ಮಾತನಾಡಿ, “ಅತಿಹೆಚ್ಚು ಹಾಲು ಉತ್ಪಾದಿಸುವ ಜಿಲ್ಲೆಗೆ ಮೇಗಾ ಡೇರಿ ಸ್ಥಾಪನೆಯಾಗಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ನಾವು ಹಾಲನ್ನು ಬಳ್ಳಾರಿಗೆ ಕಳುಹಿಸುವುದಿಲ್ಲ. ವಿಜಯನಗರ ಜಿಲ್ಲೆಯಲ್ಲಿಯೂ ಆಡಳಿತ ಕಚೇರಿಯಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ : ತಾಯಿ ಮಗನ ಹತ್ಯೆ ಪ್ರಕರಣ ಓರ್ವ ಆರೋಪಿ ಆತ್ಮಹತ್ಯೆ ಇನ್ನೊಬ್ಬ ಆರೋಪಿ ಬಂಧನ

ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟ ನಿರ್ದೇಶಕ ಹೆಚ್ ಮರುಳ ಸಿದ್ದಪ್ಪ ಮಾತನಾಡಿ, “ಹಾಲನ್ನು ಕೊಡುವವರು ನಾವು, ಅಧಿಕಾರ ಅನುಭವಿಸುವವರು ಬಳ್ಳಾರಿಯವರು. ಆಡಳಿತ ಮಂಡಳಿಗೆ ಯಾವುದೇ ರೀತಿಯ ಸಹಕಾರ ನೀಡದೆ ತುಂಬಾ ಕಿರಿಕಿರಿಯನ್ನುಂಟು ಮಾಡುವುದರ ಜತೆಗೆ ದೌರ್ಜನ್ಯ ಎಸಗುತ್ತಿದ್ದಾರೆ. ಜಿಲ್ಲೆಯಲ್ಲಿ 360 ಸಂಘಗಳಿವೆ. ಅತಿ ಹೆಚ್ಚು ಹಾಲನ್ನು ಸರಬರಾಜು ಮಾಡುತ್ತೇವೆ. ಹರಪನಹಳ್ಳಿಯಿಂದ ನೂರಾರು ಕಿಮೀ ದೂರ ಹಾಲನ್ನು ಸಾಗಿಸಲು ಒಕ್ಕೂಟ ನಷ್ಟ ಅನುಭವಿಸಲು ಇದು ಒಂದು ಮುಖ್ಯ ಕಾರಣ” ಆದ್ದರಿಂದ ವಿಜಯನಗರ ಜಿಲ್ಲೆಯಲ್ಲಿ‌ ಒಕ್ಕೂಟ ಆರಂಭಿಸಬೇಕು” ಎಂದು ಹೇಳಿದರು.

ಶ್ರೀನಿವಾಸ್, ಕಾಳೇಶಪ್ಪ, ಗಂಗಾಧರ, ಲಕ್ಷ್ಮಣ, ರತ್ನಮ್ಮ, ಉಷಾ, ಕಂಪ್ಲಿ ಗಂಗಾಧರ ಹಾಗೂ ವಿಜಯನಗರ ಜಿಲ್ಲೆಯಿಂದ ಸಾವಿರಾರು ಹಾಲು ಉತ್ಪಾದಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...