ವಿಜಯನಗರ | ರೈತರ ಹಿತಕ್ಕಾಗಿ ಕಾಲ್ನಡಿಗೆ ಜಾಥಾ; ನ್ಯಾ.ಸಂತೋಷ ಹೆಗಡೆ ಬೆಂಬಲ

Date:

ರೈತರ ಹಿತರಕ್ಷಣೆ ಸರಕಾರದ ಹೊಣೆ. ಆ ಜವಾಬ್ದಾರಿಯನ್ನು ಸರಕಾರ ನಿಭಾಯಿಸಬೇಕು ಇಲ್ಲವೆಂದರೆ ರೈತರು ನಿರಂತರವಾಗಿ ಬೀದಿಗೆ ಬಂದು ಹೋರಾಟ ಮಾಡುವ ಅನಿವಾರ್ಯತೆ ಒದಗಿಬರುತ್ತದೆ ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು.

ಅಖಿಲ ಕರ್ನಾಟಕ ರಾಜ್ಯ ಕಿಸಾನ್‌ ಜಾಗೃತಿ ಸಂಘದ ನೇತೃತ್ವದಲ್ಲಿ ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ಹಂಪಿಯ ವಿರೂಪಾಕ್ಷ ದೇವಸ್ಥಾನದಿಂದ ಹೊಸಪೇಟೆಯ ಅಂಬೇಡ್ಕರ್ ಭವನದವರೆಗೂ ಆಯೋಜಿಸಿರುವ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ನಾನು ರಾಜಕಾರಣ ಮಾಡಲು ಬಂದಿಲ್ಲ, ಅದರಲ್ಲಿ ಅಸಕ್ತಿಯೂ ಇಲ್ಲ. ನನಗೆ ಬೇಕಾಗಿರುವುದು ರೈತರ ಹಿತ ಮಾತ್ರ. ಜಿಲ್ಲೆಗಳಾದ್ಯಂತ ಬಹುತೇಕ ರೈತರು ಅವಲಂಬಿಸಿರುವುದು ಕಬ್ಬು ಕೃಷಿ. ಈಗ ಈ ಕಬ್ಬನ್ನು ಸಾಗಿಸಲು ನೂರಾರು ಕಿಲೋಮೀಟರ್ ಹೋಗುತ್ತಿರುವುದು ವಿಪರ್ಯಾಸ. ಸರ್ಕಾರ ರೈತರ ಬೇಕು ಬೇಡಗಳನ್ನು ಪರಿಗಣಿಸಿ ರೈತರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ನಡೆದುಕೊಳ್ಳಬೇಕು. ಸಕ್ಕರೆ ಕಾರ್ಖಾನೆ ಸ್ಥಾಪಿಸಿದರೆ ಲಕ್ಷಾಂತರ ಜನಕ್ಕೆ ಉದ್ಯೋಗ ದೊರಕಿಸಿ ಕೊಡುವುದರ ಮೂಲಕ ಇಲ್ಲಿರುವ ರೈತರಿಗೆ ಅನುಕೂಲವಾಗಲಿದೆ. ಸಕ್ಕರೆ ಕಾರ್ಖಾನೆ ಪ್ರಾರಂಭವಾಗುವವರೆಗೂ ಹಿಂದೆ ಸರಿಯುವುದಿಲ್ಲ. ನಾನಿದ್ದೇನೆ ನಿಮ್ಮ ಬೆನ್ನ ಹಿಂದೆ ನೀವು ಹೋರಾಟಕ್ಕೆ ಯಾವಾಗ ಕರೆದರೂ ನಾನು ಸದಾ ಸಿದ್ಧ” ಎಂದು ರೈತರಿಗೆ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕಾಶ್ ಮಾತನಾಡಿ, “ಸರ್ಕಾರಕ್ಕೆ ಕೇಳುತ್ತಿರುವುದು ನ್ಯಾಯಯುತವಾದ ಬೇಡಿಕೆಗಳನ್ನು ಮಾತ್ರ. ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಸುಮಾರು 50-60 ವರ್ಷಗಳಿಂದ ಬಗರ್ ಹುಕುಂ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಸಾವಿರಾರು ರೈತರಿಗೆ ಕೂಡಲೇ ಪಟ್ಟಾ ವಿತರಣೆ ಮಾಡಬೇಕು. ಕೇಂದ್ರ ಸರ್ಕಾರ ಆದೇಶಿಸಿರುವ ಪ್ರಕಾರ ಎಲ್ಲಾ ರೈತರಿಗೆ 5 ಲಕ್ಷದವರೆಗೆ ಸಹಕಾರ ಸಂಘಗಳಲ್ಲಿ ಬಡ್ಡಿ ರಹಿತ ಸಾಲವನ್ನು ಕೊಡಬೇಕು” ಎಂದು ಒತ್ತಾಯಿಸಿದರು.

ಎಂ ಬಸವರಾಜ್ ಕಕ್ಕುಪ್ಪಿ ಮಾತನಾಡಿ, “ಸ್ವಾತಂತ್ರ್ಯ ಬಂದು 80 ವರ್ಷ ಕಳೆಯುತ್ತಾ ಬಂದರೂ, ರೈತರಿಗೆ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ನಾವು ಬೀದಿಗಳಿದು ಹೋರಾಟ ಮಾಡುವಂತಾಗಿದೆ. ಸರ್ಕಾರಗಳು ಚುನಾವಣೆ ಬಂದಾಗ ನಾವು ರೈತರ ಪರ ಎಂದು ಹೇಳುತ್ತಾರೆ; ಅಧಿಕಾರಕ್ಕೆ ಬಂದ ಮೇಲೆ ರೈತರ ಕಷ್ಟಗಳಿಗೆ ಸ್ಪಂದಿಸದೆ ಇರುವುದು ದುರಾದೃಷ್ಟಕರ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯನಗರ | ಭಾರತದ ವಿವಿಧತೆ ತಿಳಿಯಲು ಭಾಷಾಂತರ ಅಗತ್ಯ: ಬಸವರಾಜ ಟಿ ಎಚ್

ಜಾಥಾದಲ್ಲಿ ಗ್ರಾಮ ಘಟಕ, ತಾಲೂಕು ಹಾಗೂ ಜಿಲ್ಲೆಯ ಪದಾಧಿಕಾರಿಗಳು, ವಿವಿಧ ಮಠಾಧೀಶರು, ವ್ಯಾಸನಕೆರೆ ಶ್ರೀನಿವಾಸ್, ರಫೀಕ್ ರಾಜ್, ಎಂ ನಾಗಯ್ಯ ಆನೆಗುಂದಿ, ಬಸವರಾಜ್ ಡಿ ಡೆಲ್ಲಿ, ಭೀಮಪ್ಪ ಎಂ, ಉಷಾ ದೇವೇಂದ್ರಪ್ಪ, ಎನ್ ರತ್ನಮ್ಮ, ಬಿ ಗಂಗಾಧರ್, ಕಾಳೇಶಪ್ಪ, ಕರಿ ಬಸವರಾಜ್, ದ್ಯಾಮಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...