ವಿಜಯನಗರ | ಲಿಂಗ ಸಮಾನತೆ ನಮ್ಮ ಹೊಣೆ: ಪ್ರೊ. ರೋನಿತ್ ಕಾರ್ಕ

Date:

ಲಿಂಗ ಸಮಾನತೆಯ ಜಗತ್ತನ್ನು ನಿರ್ಮಿಸುವ ಮಹಿಳೆಯರ ಜತೆಗೆ ಹೆಜ್ಜೆಹಾಕಲು ಪುರುಷರ ಬೆಂಬಲ ಅಗತ್ಯವಿದೆ ಎಂದು ಬಾರ್ಲಿಯಾನ್ ವಿಶ್ವವಿದ್ಯಾಲಯ, ಇಸ್ರೇಲ್ ಸ್ಕೂಲ್ ಆಫ್ ಬ್ಯುಸಿನೆಸ್, ಎಕ್ಸೆಟರ್ ವಿಶ್ವವಿದ್ಯಾಲಯ, ಯುಕೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ರೋನಿತ್ ಕಾರ್ಕ ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯದ ಪಂಪ ಸಭಾಂಗಣದಲ್ಲಿ ಮಹಿಳಾ ಅಧ್ಯಯನ ವಿಭಾಗವು ಮಾರ್ಚ್ 4ರಂದು ಅಂತರಾಷ್ಟ್ರಿಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದು ಕೂಡಿ ಕಲಿಯುವುದು; ಸಂಘಟನೆ/ಸಂಸ್ಥೆಗಳಲ್ಲಿ ಲಿಂಗ ಸಮಾನತೆಯನ್ನು ಉತ್ತೇಜಿಸುವುದರಲ್ಲಿ ಪುರುಷರ ಸಹಭಾಗಿತ್ವ ಎನ್ನುವ ವಿಶೇಷ ಉಪನ್ಯಾಸ ನೀಡುತ್ತ ಮಾತನಾಡಿದರು.

“ನಾವೆಲ್ಲರೂ ಸಮಸ್ಯೆಯ ಭಾಗವಾಗಿದ್ದೇವೆ. ಅದನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕು. ಪ್ರಮುಖವಾಗಿ ಸ್ತ್ರೀಲಿಂಗ ವಿಷಯಗಳಿಗೆ ಸಂಬಂಧಿಸಿದ ಕ್ರಿಯಾಶೀಲತೆಯ ನಿರ್ದಿಷ್ಟ ಕ್ಷೇತ್ರಗಳಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೀಮಿತ ಜ್ಞಾನ ಮತ್ತು ಅನುಭವದಿಂದಾಗಿ ಪುರುಷರು ತೊಡಗಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇನ್ನೂ ಒಂದು ಹೆಣ್ಣಿಗೆ ಮನೆಯಲ್ಲಿ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಸಿಕ್ಕರೂ ಹೊರಗಡೆ ಪ್ರೋತ್ಸಾಹ ಸಿಗುವುದು ಕಡಿಮೆ. ಅನಾದಿಕಾಲದಿಂದಲೂ ಹೆಣ್ಣಿಗೆ ಗಂಡಿನ ಜತೆ ಬದುಕುವುದು ಅನಿವಾರ್ಯವಾಗಿದೆ. ಅವಳನ್ನು ಪ್ರೋತ್ಸಾಹ ಮಾಡುವ ನೆಪದಲ್ಲಿ, ʼನೀನು ಏನೇ ಮಾಡು ನಾವು ಹಿಂದೆ ಇರುತ್ತೇವೆʼ’ ಎಂದು ಹೇಳುವ ಮೂಲಕ ಅವಳ ಸ್ವತಂತ್ರ ಆಲೋಚನೆಯನ್ನು ಕಸಿದುಕೊಳ್ಳುವ ಯತ್ನಗಳು ನಡೆಯುತ್ತಿವೆ. ಅವರು ಎಲ್ಲೇ ಇದ್ದರೂ ಅವಳಿಗೆ ಅಣ್ಣ, ತಂದೆ, ಗಂಡ, ಸ್ನೇಹಿತ ಯಾರೇ ಆಗಿದ್ದರೂ ಅವಳಿಗೆ ಭದ್ರತೆಯ ಅಂದರೆ ಗೇಟ್ ಕೀಪರ್ ರೀತಿಯಲ್ಲಿ ಇರುತ್ತಾರೆ. ಆದರೆ ಸ್ವತಂತ್ರವಾಗಿರಲು ಸಾಧ್ಯವಾಗುವುದಿಲ್ಲ” ಎಂದು ನುಡಿದರು.

“ಪ್ರಸ್ತುತ ದಿನಗಳಲ್ಲಿ ಮಹಿಳೆಯ ಜೀವನ ಹಾವು ಏಣಿಯ ಆಟದ ರೀತಿಯಲ್ಲಿದ್ದು, ಮನೆಯಲ್ಲಿ ಹೆಣ್ಣು-ಗಂಡು ಭೇದಭಾವವಿಲ್ಲದೆ ಮಕ್ಕಳನ್ನು ಬೆಳೆಸುವುದರ ಮೂಲಕ ಸಮಾನತೆಗೆ ಬುನಾದಿ ಹಾಕಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಫ್ರೀಡಂ ಪಾರ್ಕ್‌ನಲ್ಲಿ ಮುಂದುವರೆದ ಅಹೋರಾತ್ರಿ ಧರಣಿ

ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ವಿಜಯ್ ಪೂಣಚ್ಚ ತಂಬಂಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಒಂದು ಹೊಸ ಬಗೆಯ ಆಯಾಮಗಳಲ್ಲಿ ಚರ್ಚೆಯಾಗಬೇಕಾಗಿದ್ದು, ನಾವು ನಮ್ಮಲ್ಲಿ ಭಾವನಾತ್ಮಕವಾಗಿ ತುಂಬಾ ರೋಚಕವಾಗಿ ನೋಡದೆ ಮಹಿಳೆಯರನ್ನು ಸಮಾನ ದೃಷ್ಟಿಯಲ್ಲಿ ಕಂಡಾಗ ಮಾತ್ರ ಲಿಂಗ ಸಮಾನತೆ ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಶೈಲಜ ಇಂ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕ ಬೋಧಕೇತರ ಸಿಬ್ಬಂದಿಗಳು, ಸಂಶೋಧನಾರ್ಥಿಗಳು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...