ವಿಜಯನಗರ | ಮುಂದಿನ ಜನಾಂಗಕ್ಕೆ ಕನ್ನಡ ತಲುಪಿಸುವುದೂ ನಮ್ಮ ಜವಾಬ್ದಾರಿ: ಕುಲಪತಿ ಪರಮಶಿವಮೂರ್ತಿ

Date:

ಕನ್ನಡತನವನ್ನು, ಕನ್ನಡದ ಹಿರಿಮೆ-ಗರಿಮೆಯನ್ನು ನಮ್ಮ ಮುಂದಿನ ಜನಾಂಗಕ್ಕೆ ತಲುಪಿಸುವ ಬಹುದೊಡ್ಡ ಜವಾಬ್ದಾರಿ ಕನ್ನಡ ವಿಶ್ವವಿದ್ಯಾಲಯಕ್ಕಿದೆ ಎಂದು ವಿಜಯನಗರ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ಅಭಿಪ್ರಾಯಪಟ್ಟರು.

ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಕಟ್ಟಡದ ಮುಂಭಾಗದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ರಾಜ್ಯದ ಇತರೆಡೆಗಳಲ್ಲಿ ವರ್ಷಕ್ಕೆ ಒಮ್ಮೆ ಕನ್ನಡ ರಾಜ್ಯೋತ್ಸವನ್ನು ಆಚರಿಸಿದರೆ ನಮ್ಮ ವಿಶ್ವವಿದ್ಯಾಲಯದಲ್ಲಿ 365 ದಿನವೂ ಕನ್ನಡ ರಾಜ್ಯೋತ್ಸವವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಕನ್ನಡಕ್ಕೆ ಸಂಬಂಧಪಟ್ಟ ಯೋಜನೆ ಹಾಗೂ ಕಾರ್ಯಕ್ರಮಗಳ ಮೂಲಕ ಕನ್ನಡ ಕಟ್ಟುವ ಕೆಲಸವನ್ನು ಮಾಡುತ್ತಿದೆ. ಕನ್ನಡ ರಾಜ್ಯೋತ್ಸವ ನಮ್ಮಲ್ಲಿ ಕನ್ನಡತನದ ಪ್ರಜ್ಞೆಯನ್ನು, ಪ್ರೀತಿಯನ್ನು ಮತ್ತು ಆತ್ಮವಿಶ್ವಾಸವನ್ನು ತುಂಬುತ್ತದೆ” ಎಂದರು.

“ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಬೋಧಿಸಲು ಸಾಧ್ಯವಿಲ್ಲ ಎಂಬ ಕಾಲಘಟ್ಟದಲ್ಲಿ ಹುಟ್ಟಿಕೊಂಡ ಕನ್ನಡ ವಿಶ್ವವಿದ್ಯಾಲಯ ಸಾಹಿತ್ಯವೂ ಸೇರಿದಂತೆ ಕನ್ನಡಿಗರು ಪ್ರತಿನಿತ್ಯ ಬಳಸುವ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಲು ಪ್ರಾರಂಭಿಸಿತು. ಈ ಕೆಲಸ ಹೆಚ್ಚು ಹುರುಪಿನಿಂದ, ಉಮೇದಿನಿಂದ ಮಾಡುವಂತಹ ಸಮಯ ಈಗ ಒದಗಿಬಂದಿದೆ. ಹೀಗಾಗಿ ಇನ್ನುಮುಂದೆ ಹೆಚ್ಚಿನ ರೀತಿಯಲ್ಲಿ ಕಾರ್ಯವನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಆದರೆ, ಇದಕ್ಕೆ ಹಲವಾರು ಅಡಚಣೆಗಳು ಎದುರಾಗಿವೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕೊರತೆ, ತಾತ್ಕಾಲಿಕ ನೌಕರರ ಸಂಬಳದ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕಠಿಣ ಪರಿಸ್ಥಿತಿಯ ನಡುವೆಯೂ ಸಹ ಕನ್ನಡ ವಿಶ್ವವಿದ್ಯಾಲಯವು ಕನ್ನಡತ್ವವನ್ನು ಉಳಿಸಿಕೊಂಡು, ಕನ್ನಡದ ಬೆಳವಣಿಗೆಗಾಗಿ ಸದಾ ಶ್ರಮಿಸುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಹಂಪಿಯಲ್ಲಿ ಮಹಾರಾಷ್ಟ್ರ ಮೂಲದ ಯುವಕ ನಾಪತ್ತೆ

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವ ಬಿ. ಗುರುಬಸಪ್ಪ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಆರ್.ವಿ. ದೇಶಪಾಂಡೆ ಹಾಗೂ ಸಂಗೀತ ವಿಭಾಗದ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...