ವಿಜಯನಗರ | ಸುಕ್ರಿ ಮಾತೆ ನಿಧನಕ್ಕೆ ಹಂಪಿ ಕನ್ನಡ ವಿವಿ ಸಂತಾಪ

Date:

ನಾಡೋಜ ಪ್ರಶಸ್ತಿ ಪುರಸ್ಕೃತೆ ಮಾತೆ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ (ಫೆ.13) ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯ ಸಂತಾಪ ಸೂಚಿಸಿತು. ನಗರದ ಕ್ರಿಯಾಶಕ್ತಿ ಕಟ್ಟಡದ ಸಿಂಡಿಕೇಟ್ ಸಭಾಂಗಣದಲ್ಲಿ ಅವರ ಗೌರವಾರ್ಥವಾಗಿ ಸಂತಾಪ ಸೂಚಕ ಸಭೆ ಆಯೋಜಿಸಲಾಗಿತ್ತು.

ಈ ವೇಳೆ ವಿವಿಯ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ಮಾತನಾಡಿ, “ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಮೂಲತಃ ಮಾತೃಪ್ರಧಾನ ಸಮಾಜವಾಗಿದೆ. ಅತ್ಯಂತ ಪ್ರತಿಭಾವಂತ ಕಲಾವಿದೆಯಾದ ಸುಕ್ರಿಯವರು ಪರಿಸರ ಚಳುವಳಿ, ಮದ್ಯಪಾನ ವಿರೋಧಿ ಚಳುವಳಿಗಳಲ್ಲಿ ನಾಯಕಿಯಾಗಿ ಹೋರಾಟ ನಡೆಸಿದ್ದಾರೆ. ನಾಡಿನ ಶೋಷಿತರನ್ನು ಪ್ರತಿನಿಧಿಸುತ್ತ ಬಂದಿದ್ದಾರೆ. ಹಾಲಕ್ಕಿಗಳ ಪಾರಂಪರಿಕ ತಿಳಿವಳಿಕೆ ತನ್ನ ತಲೆಮಾರಿಗೆ ಮುಗಿದು ಹೋಗಬಾರದೆಂದು ಸುಕ್ರಿಯವರು ಹಾಲಕ್ಕಿ ಮಹಿಳೆಯರನ್ನು ಒಂದುಗೂಡಿಸಿ ತನ್ನ ಸಮುದಾಯದ ಪ್ರಾಚೀನ ಕುಣಿತಗಳಾದ ತಾರ್ಲೆ, ಪಗಡೆ, ಬಿದರಂಡೆ ಮುಂತಾದ ನೃತ್ಯ ಪ್ರಕಾರಗಳನ್ನು ಕಲಿಸುವುದರ ಜೊತೆಗೆ ಅನೇಕ ಕಡೆ ತಾವೇ ತಮ್ಮ ತಂಡಗಳನ್ನು ಕರೆದುಕೊಂಡು ಹೋಗಿ ಹಾಲಕ್ಕಿಗಳ ಪರಂಪರೆಯನ್ನು ಜೀವಂತವಾಗಿಡಲು ಅವಿರತವಾಗಿ ಶ್ರಮಿಸಿದ್ದಾರೆ” ಎಂದರು.

WhatsApp Image 2025 02 13 at 7.24.08 PM

“ಸುಕ್ರಿ ಬೊಮ್ಮಗೌಡ ಅವರು ಸ್ವತಃ ಮಾದೇವರಾಯ, ಚಂದನರಾಯ, ರಾಮ-ಲಕ್ಷ್ಮಣ, ಐರಾವತ, ಕುಂತಿ ಕಥೆ, ಸಿರಿಕವುಲಿ ಮುಂತಾದ ಕಥನ ಕಾವ್ಯಗಳನ್ನು ಮತ್ತು ಬಲೀಂದ್ರರಾಯ, ಗೋವಿಂದರಾಯ ಹಾಗೂ ಕರಿದೇವರ ಕುರಿತ ಮಹಾಕಥನಗಳನ್ನು ಸುಶ್ರಾವ್ಯವಾಗಿ ಹಾಡುತ್ತಿದ್ದರು. ಇವರಿಗೆ ಕನ್ನಡ ವಿಶ್ವವಿದ್ಯಾಲಯವು 2008ರಲ್ಲಿ ನಡೆದ 16ನೇ ನುಡಿಹಬ್ಬದಲ್ಲಿ ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಪ್ರದಾನ ಮಾಡಿದೆ. ಸುಕ್ರಿಯವರ ನಿಧನದಿಂದ ಜಾನಪದ ಲೋಕವು ಬಡವಾಗಿದೆ” ಎಂದು ಸಂತಾಪ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ; ಸಾರ್ವಜನಿಕರ ಪರದಾಟ

ಸಭೆಯಲ್ಲಿ ವಿವಿ ಕುಲಸಚಿವ ಡಾ. ವಿಜಯ್ ಪೂಣಚ್ಚ ತಂಬಂಡ, ಉಪಕುಲಸಚಿವ ಡಾ. ಎ ವೆಂಕಟೇಶ, ಸಹಾಯಕ ಕುಲಸಚಿವ ಗುರುಬಸಪ್ಪ, ಸಹಾಯಕ ನಿರ್ದೆಶಕ ಎಸ್ ಕೆ ವಿಜಯೇಂದ್ರ, ಅಧ್ಯಾಪಕ ಡಾ. ಎಲ್ ಶ್ರೀನಿವಾಸ, ಡಾ. ಮೋಹನ ಪಂಚಾಳ ಹಾಗೂ ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...